ಚೆಕ್ ಬೌನ್ಸ್ ಪ್ರಕರಣ: ನಟಿ ಕೋಯ್ನಾ ಮಿತ್ರಾಗೆ 6 ತಿಂಗಳು ಜೈಲು
ಮುಂಬೈ, ಜುಲೈ 22: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನಟಿ ಕೊಯ್ನಾ ಮಿತ್ರಾ ದೋಷಿ ಎಂದು ಇಲ್ಲಿನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ ಸಾಬೀತಾಗಿದ್ದು, 6 ತಿಂಗಳ ಜೈಲು ಶಿಕ್ಷೆ ಪ್ರಕಟಿಸಲಾಗಿದೆ.
2013ರಲ್ಲಿ ಮಾಡೆಲ್ ಪೂನಂ ಸೇಥಿ ಎಂಬುವರಿಂದ 22 ಲಕ್ಷ ರುಪಾಯಿ ಪಡೆದುಕೊಂಡಿದ್ದ, ಕೊಯ್ನಾ ಆರಂಭಿಕ ಪಾವತಿ ರೂಪದಲ್ಲಿ 3 ಲಕ್ಷ ರೂಪಾಯಿಗಳ ಚೆಕ್ ನೀಡಿದ್ದರು. ಆದರೆ, ಚೆಕ್ ಎನ್ ಕ್ಯಾಶ್ ಆಗಿರಲಿಲ್ಲ. ಚೆಕ್ ಬೌನ್ಸ್ ಆಗಿದ್ದರಿಂದ ಪೂನಂ ದೂರು ನೀಡಿದ್ದರು. 4.64 ಲಕ್ಷ ರು ಪಾವತಿಸಲು ಸೂಚಿಸಲಾಗಿದ್ದು, 1.64 ಲಕ್ಷ ಬಡ್ಡಿ ಕೇಳಲಾಗಿತ್ತು ಎಂದು ಮುಂಬೈ ಮಿರರ್ ವರದಿ ಮಾಡಿದೆ.

2013ರ ಜುಲೈ 19ರಂದು ಸೇಥಿ ಅವರು ಮಿತ್ರಾಗೆ ಲೀಗಲ್ ನೋಟಿಸ್ ಕಳಿಸಿದ್ದರು. Negotiable Instruments Act ಪ್ರಕಾರ ದೂರಿನ ಅನ್ವಯ ಕ್ರಮ ಜರುಗಿಸುವ ಮೊದಲು ನೋಟಿಸ್ ಜಾರಿ ಮಾಡಬೇಕಾಗುತ್ತದೆ.
ಅಕ್ಟೋಬರ್ 10, 2013ರಂದು ಕೋರ್ಟಿನಲ್ಲಿ ದೂರು ಸಲ್ಲಿಸಿದ್ದರು. ಆದರೆ, "ಸೇಥಿಗೆ 22 ಲಕ್ಷ ನೀಡುವಷ್ಟು ಸಾಮರ್ಥ್ಯವಿಲ್ಲ, ನನ್ನ ಚೆಕ್ ಗಳನ್ನು ಕದ್ದಿದ್ದಾಳೆ" ಎಂದು ನಟಿ ಮಿತ್ರಾ ಪ್ರತಿವಾದಿಸಿದ್ದರು. ಆದರೆ, ಮಿತ್ರಾ ಡಿಫೆನ್ಸ್ ವಾದಕ್ಕೆ ಸರಿಯಾದ ಸಾಕ್ಷ್ಯ ಒದಗಿಸದ ಕಾರಣ ಈಗ ಜೈಲು ಶಿಕ್ಷೆಗೆ ಗುರಿಯಾಗುತ್ತಿದ್ದಾರೆ.
ಅಂಧೇರಿಯ ಮೆಟ್ರೋಪಾಲಿಟನ್ ಕೋರ್ಟ್ ಮ್ಯಾಜಿಸ್ಟ್ರೇಟ್ ಕೇತಕಿ ಚವಾಣ್ ಅವರು ಕೊಯ್ನಾ ಅವರ ವಾದವನ್ನು ತಿರಸ್ಕರಿಸಿ, ಆರು ತಿಂಗಳು ಜೈಲು ಹಾಗೂ 4.64 ಲಕ್ಷ ರೂಪಾಯಿ ದಂಡ ನೀಡುವಂತೆ ಶಿಕ್ಷೆ ವಿಧಿಸಿದ್ದಾರೆ.
-
Ramayana: ಯಶ್ ‘ರಾಮಾಯಣ’ಕ್ಕೆ 700 ಕೋಟಿ ರೂಪಾಯಿ ಆಫರ್ ತಿರಸ್ಕರಿಸಿದ ನಿರ್ಮಾಪಕ, 1000 ಕೋಟಿ ರೂ.ಗೆ ಪಟ್ಟು -
Janhvi Kapoor: ಅಶ್ಲೀಲ ವೆಬ್ಸೈಟ್ನಲ್ಲಿ ನನ್ನ ಫೋಟೋ ನೋಡಿದ್ದೆ: ಹದಿಹರೆಯದ ಕಹಿ ಘಟನೆ ಬಿಚ್ಚಿಟ್ಟ ನಟಿ ಜಾನ್ವಿ ಕಪೂರ್ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ












Click it and Unblock the Notifications