ಮುಂಬೈನ ರೈಲು ನಿಲ್ದಾಣದಲ್ಲೇ ಹೆರಿಗೆ; ನೆರವಿಗೆ ಬಂದ 1 ರೂ ಕ್ಲಿನಿಕ್
ಮುಂಬೈ, ಜುಲೈ 3: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ.
29 ವರ್ಷದ ಮಹಿಳೆಯೊಬ್ಬರು ಹೆರಿಗೆಗೆಂದು ಮುಂಬೈನ ಕಾಮಾ ಆಸ್ಪತ್ರೆಗೆ ರೈಲಿನಲ್ಲಿ ಪಯಣಿಸುತ್ತಿದ್ದರು. ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರೈಲುಗಳ ಸಂಚಾರವೂ ಅಸ್ತವ್ಯಸ್ತವಾಗಿದೆ. ಈ ಸಂದರ್ಭದಲ್ಲೇ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ದೊಂಬಿವಿಲಿ ರೈಲ್ವೆ ನಿಲ್ದಾಣ ಬರುತ್ತಿದ್ದಂತೆ ಹೆರಿಗೆ ನೋವೂ ಹೆಚ್ಚಾಗಿದೆ. ಮಳೆ ಹೆಚ್ಚಿರುವುದರಿಂದ ನಿಲ್ದಾಣದಲ್ಲಿ ಎಂದಿಗಿಂತಲೂ ಅತಿ ಹೆಚ್ಚೇ ಜನರು ತುಂಬಿಕೊಂಡಿದ್ದರು. ಹೆರಿಗೆ ನೋವಿನಿಂದ ನಿಲ್ದಾಣದಲ್ಲೇ ಮಹಿಳೆ ಒದ್ದಾಡಲು ಆರಂಭಿಸಿದ್ದರು. ವಿಷಯ ತಿಳಿದ 1 ರೂಪಾಯಿ ಕ್ಲಿನಿಕ್ ನ ವೈದ್ಯರು ಹಾಗೂ ನರ್ಸ್ ಗಳು ಆ ಕ್ಷಣವೇ ಸ್ಥಳಕ್ಕೆ ಆಗಮಿಸಿ ಹೆರಿಗೆಯನ್ನು ಮಾಡಿಸಿದ್ದಾರೆ. ಮಹಿಳೆಯು ಗಂಡು ಮಗುವಿಗೆ ಜನ್ಮ ನೀಡಿದ್ದು, ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಅತಿ ಕಡಿಮೆ ಬೆಲೆಗೆ, ಸರಿಯಾದ ಸಮಯಕ್ಕೆ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲೆಂದೇ ಮುಂಬೈನಲ್ಲಿ 1 ರೂಪಾಯಿ ಕ್ಲಿನಿಕ್ ರೂಪುಗೊಂಡಿದ್ದು, ಈ ರೀತಿ ಜನರ ಸಹಾಯಕ್ಕೆ ನಿಂತ ಸಾಕಷ್ಟು ಉದಾಹರಣೆಗಳು ದೊರೆಯುತ್ತವೆ. ಇದೇ ಏಪ್ರಿಲ್ ನಲ್ಲಿ ಥಾಣೆ ರೈಲು ನಿಲ್ದಾಣದಲ್ಲೂ ಇಂಥದ್ದೇ ಪ್ರಕರಣ ನಡೆದಿದ್ದು, ಆಗಲೂ 1 ರೂಪಾಯಿ ವೈದ್ಯರೇ ಮಹಿಳೆಗೆ ಹೆರಿಗೆ ಮಾಡಿಸಿದ್ದರು. ಕೇವಲ ಒಂದು ರೂಪಾಯಿಯ ಟೋಕನ್ ಹಣಕ್ಕೆ ವೈದ್ಯಕೀಯ ಸೇವೆಯನ್ನು ಸಮಯಕ್ಕೆ ಸರಿಯಾಗಿ ಒದಗಿಸುತ್ತಿರುವುದರಿಂದ ಜನರ ಮೆಚ್ಚುಗೆಯನ್ನೂ ಗಳಿಸಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications