ನ್ಯಾಯವಾದಿ ರಾಮ್ ಜೇಠ್ಮಲಾನಿ ಬಹುಪತ್ನೀವಲ್ಲಭ

ಗಮನಾರ್ಹವೆಂದರೆ, ಸುಬ್ರಹ್ಮಣ್ಯ ಸ್ವಾಮಿ ಅವರು ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ ಅವರನ್ನುದ್ದೇಶಿಸಿ ಈ ಮಾತನ್ನು ಹೇಳಿದ್ದಾರೆ.
ಹೌದು, ಆ ಜೇಠ್ಮಲಾನಿಗೆ ಬಹುಪತ್ನಿಯರು ಇದ್ದಾರೆ. ಹಾಗಾಗಿ ಅವರು ನೈಸರ್ಗಿಕ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಏಕರೂಪ ನಾಗರಿಕ ಸಂಹಿತೆ ಬಗ್ಗೆ ಮಾತನಾಡುವಾಗ ಸ್ವತಃ ನ್ಯಾಯವಾದಿಯಾಗಿರುವ ಸುಬ್ರಹ್ಮಣ್ಯ ಸ್ವಾಮಿ ಅವರು ಈ ಮಾತನ್ನು ಹೇಳಿದ್ದಾರೆ.
'ಹಾಗಂತ ನಾನು ಜೇಠ್ಮಲಾನಿ ಅವರನ್ನು ಟೀಕಿಸುತ್ತಿಲ್ಲ. ಅದರ ಬಗ್ಗೆ ಅವರಿಗೇ (ಜೇಠ್ಮಲಾನಿ) ಯಾವುದೇ ಮುಚ್ಚುಮರೆ ಇಲ್ಲ. ಆದರೆ ನನ್ನ ದೃಷ್ಟಿಯಲ್ಲಂತೂ ಒಬ್ಬರಿಗಿಂತ ಹೆಚ್ಚು ಹೆಂಡಿರನ್ನು ಹೊಂದುವುದು ತಪ್ಪು' ಎಂದು ಸುಬ್ರಹ್ಮಣ್ಯ ಸ್ವಾಮಿ ಮಾರ್ಮಿಕವಾಗಿ ಹೇಳಿದರು.
ಏಕರೂಪ ನಾಗರಿಕ ಸಂಹಿತೆ ಬಗ್ಗೆ ಮಾತನಾಡಿದ ಸುಬ್ರಹ್ಮಣ್ಯ ಸ್ವಾಮಿ ಅವರು 'ದೇಶದಲ್ಲಿ ಮಸಲ್ಮಾನರು ಮಾತ್ರವೇ ಬಹುಪತ್ನಿಯರನ್ನು ಹೊಂದಿರುತ್ತಾರೆ ಎಂಬುದು ತಪ್ಪು. 2001ರ ಜನಗಣತಿ ಪ್ರಕಾರ ಕೇವಲ ಶೇ. 3.5ರಷ್ಟು ಮಂದಿ ಮುಸ್ಲಿಮರು ಮಾತ್ರವೇ ಇಬ್ಬರು ಪತ್ನಿಯರನ್ನು ಹೊಂದಿದ್ದಾರೆ. ಅದೇ ಹಿಂದೂಗಳ ಪೈಕಿ ಶೇ. 5ರಷ್ಟು ಮಂದಿ ಬಹುಪತ್ನೀವಲ್ಲಭರು' ಎಂದು ಮಾಹಿತಿ ನೀಡಿದರು.
'ಕರುಣಾನಿಧಿಗೆ ಮೂವರು, ಜೇಠ್ಮಲಾನಿಗೆ ಇಬ್ಬರು ಪತ್ನಿಯರು ಇದ್ದಾರೆ. ಅಲ್ಲಲ್ಲ ಜೇಠ್ಮಲಾನಿಗೆ ಅನೇಕ ಗರ್ಲ್ ಫ್ರೆಂಡ್ಸ್ ಇದ್ದಾರೆ' ಎಂದು ಸ್ವಾಮಿ ಉದಾಹರಣೆ ನೀಡಿದರು.
'ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೇಶದಲ್ಲಿನ ಎಲ್ಲ ಸಾಧುಸಂತರ ವರ್ಚಸ್ಸನ್ನು ಹಾಳುಮಾಡುತ್ತಿದ್ದಾರೆ' ಎಂದೂ ಸ್ವಾಮಿ ಇದೇ ವೇಳೆ ಕಿಡಿಕಾರಿದರು.
ಇನ್ನು ಮೋದಿ ನೇತೃತ್ವದ ಬಿಜೆಪಿ ಶಿವಸೇನೆ ಮತ್ತು ಶಿರೋಮಣಿ ಅಕಾಲಿ ದಳದ ಬೆಂಬಲದೊಂದಿಗೆ ಈ ಬಾರಿ 300 ಸ್ಥಾನಗಳನ್ನು ಗಳಿಸುವುದು ಖಚಿತ ಎಂದೂ ಸ್ವಾಮಿ ಭವಿಷ್ಯ ನುಡಿದರು.
ಈಶಾನ್ಯ ಮುಂಬೈ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ: ಈಶಾನ್ಯ ಮುಂಬೈ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆಯಿದೆ. ಗಮನಾರ್ಹವೆಂದರೆ ಈ ಹಿಂದೆಯೂ ಒಮ್ಮೆ ಈ ಕ್ಷೇತ್ರದಿಂದ ಸ್ಪರ್ಧಿಸಿ, ಚುನಾಯಿತರಾಗಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications