ಸ್ವಾರ್ಥ ಬಿಡಿ, ಬಿಜೆಪಿ ಶಿವಸೇನೆಗೆ ಭಾಗವತ್ ಕಿವಿ ಮಾತು
ಮುಂಬೈ,ನವೆಂಬರ್ 19: ಸ್ವಾರ್ಥ ಒಳ್ಳೆಯದಲ್ಲ, ಇದರಿಂದ ಎರಡೂ ಪಕ್ಷಗಳಿಗೂ ನಷ್ಟವಾಗಲಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೂಚನೆ ನೀಡಿದ್ದಾರೆ. ಶಿವಸೇನೆ ಮತ್ತು ಬಿಜೆಪಿ ಎರಡೂ ಪಕ್ಷಗಳನ್ನುದ್ದೇಶಿಸಿ ಈ ಹೇಳಿಕೆ ನೀಡಿದ್ದಾರೆ.
ನಾಗಪುರ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, "ಸ್ವಾರ್ಥ ಅತ್ಯಂತ ಕೆಟ್ಟದ್ದು, ಅದು ಎಲ್ಲರಿಗೂ ಗೊತ್ತು. ಆದರೆ ಕೆಲವು ಮಂದಿ ಮಾತ್ರ ಅದನ್ನು ತ್ಯಜಿಸುತ್ತಾರೆ, ಹಲವರು ಅದನ್ನೇ ಅಳವಡಿಸಿಕೊಳ್ಳುತ್ತಾರೆ" ಎಂದು ಪರೋಕ್ಷವಾಗಿ ಬಿಜೆಪಿ, ಶಿವಸೇನೆಗೆ ತಿವಿದಿದ್ದಾರೆ.
ಎರಡೂ ಪಕ್ಷಗಳ ಹೆಸರು ಉಲ್ಲೇಖಿಸದೇ ಮಾತನಾಡಿದ ಅವರು, "ಒಂದೇ ವಿಷಯಕ್ಕೆ ಇಬ್ಬರು ಜಗಳವಾಡಿದರೆ ಅದು ಇಬ್ಬರಿಗೂ ನಷ್ಟವಾಗುತ್ತದೆ. ಅದು ಗೊತ್ತಿದ್ದೂ ಆ ದಾರಿಯನ್ನು ತುಳಿಯುತ್ತಾರೆ ಎಂದರು. ಎರಡೂ ಪಕ್ಷಗಳು ಹಿಂದುತ್ವದ ಆಧಾರದ ಮೇಲೆ ಹುಟ್ಟಕೊಂಡಿವೆ.
ಇಬ್ಬರ ಜಗಳ ಮೂರನೆಯವರಿಗೆ ಲಾಭವಾಗಬಾರದು ಎಂದು ಹೇಳಿದ್ದಾರೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ 102 ಸ್ಥಾನ ಗೆದ್ದಿದ್ದರೆ, ಶಿವಸೇನೆ 56 ಸ್ಥಾನಗಳನ್ನು ಗೆದ್ದಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಬಿಜೆಪಿ-ಶಿವಸೇನಾ, ಬಳಿಕ ಅಧಿಕಾರ ಹಂಚಿಕೆ ಬಿಕ್ಕಟ್ಟಿನಿಂದಾಗಿ ಮೈತ್ರಿ ಕಳೆದುಕೊಂಡಿವೆ. ಸದ್ಯ ಕಾಂಗ್ರೆಸ್, ಎನ್ ಸಿಪಿ ಜತೆ ಸೇರಿ ಸರ್ಕಾರ ರಚಿಸಲು ಮುಂದಾಗಿದ್ದರೂ ಅದು ಯಶಸ್ವಿಯಾಗಿಲ್ಲ.
ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟು, ಇನ್ನೇನು ಸರ್ಕಾರ ರಚಿಸಿಯೇ ಬಿಟ್ವಿ ಎಂಬ ಹುಮ್ಮಸ್ಸಿನಲ್ಲಿದ್ದ ಶಿವಸೇನೆಗೆ ಶರದ್ ಪವಾರ್ ಹೇಳಿಕೆ ಭಾರೀ ನಿರಾಸೆ ಉಂಟು ಮಾಡಿದೆ. ಈಗ ತನ್ನ ಸ್ಥಿತಿಗೆ ಬಿಜೆಪಿಯೇ ಮೂಲ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications