ಸ್ವಾರ್ಥ ಬಿಡಿ, ಬಿಜೆಪಿ ಶಿವಸೇನೆಗೆ ಭಾಗವತ್ ಕಿವಿ ಮಾತು
ಮುಂಬೈ,ನವೆಂಬರ್ 19: ಸ್ವಾರ್ಥ ಒಳ್ಳೆಯದಲ್ಲ, ಇದರಿಂದ ಎರಡೂ ಪಕ್ಷಗಳಿಗೂ ನಷ್ಟವಾಗಲಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೂಚನೆ ನೀಡಿದ್ದಾರೆ. ಶಿವಸೇನೆ ಮತ್ತು ಬಿಜೆಪಿ ಎರಡೂ ಪಕ್ಷಗಳನ್ನುದ್ದೇಶಿಸಿ ಈ ಹೇಳಿಕೆ ನೀಡಿದ್ದಾರೆ.
ನಾಗಪುರ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, "ಸ್ವಾರ್ಥ ಅತ್ಯಂತ ಕೆಟ್ಟದ್ದು, ಅದು ಎಲ್ಲರಿಗೂ ಗೊತ್ತು. ಆದರೆ ಕೆಲವು ಮಂದಿ ಮಾತ್ರ ಅದನ್ನು ತ್ಯಜಿಸುತ್ತಾರೆ, ಹಲವರು ಅದನ್ನೇ ಅಳವಡಿಸಿಕೊಳ್ಳುತ್ತಾರೆ" ಎಂದು ಪರೋಕ್ಷವಾಗಿ ಬಿಜೆಪಿ, ಶಿವಸೇನೆಗೆ ತಿವಿದಿದ್ದಾರೆ.
ಎರಡೂ ಪಕ್ಷಗಳ ಹೆಸರು ಉಲ್ಲೇಖಿಸದೇ ಮಾತನಾಡಿದ ಅವರು, "ಒಂದೇ ವಿಷಯಕ್ಕೆ ಇಬ್ಬರು ಜಗಳವಾಡಿದರೆ ಅದು ಇಬ್ಬರಿಗೂ ನಷ್ಟವಾಗುತ್ತದೆ. ಅದು ಗೊತ್ತಿದ್ದೂ ಆ ದಾರಿಯನ್ನು ತುಳಿಯುತ್ತಾರೆ ಎಂದರು. ಎರಡೂ ಪಕ್ಷಗಳು ಹಿಂದುತ್ವದ ಆಧಾರದ ಮೇಲೆ ಹುಟ್ಟಕೊಂಡಿವೆ.
ಇಬ್ಬರ ಜಗಳ ಮೂರನೆಯವರಿಗೆ ಲಾಭವಾಗಬಾರದು ಎಂದು ಹೇಳಿದ್ದಾರೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ 102 ಸ್ಥಾನ ಗೆದ್ದಿದ್ದರೆ, ಶಿವಸೇನೆ 56 ಸ್ಥಾನಗಳನ್ನು ಗೆದ್ದಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಬಿಜೆಪಿ-ಶಿವಸೇನಾ, ಬಳಿಕ ಅಧಿಕಾರ ಹಂಚಿಕೆ ಬಿಕ್ಕಟ್ಟಿನಿಂದಾಗಿ ಮೈತ್ರಿ ಕಳೆದುಕೊಂಡಿವೆ. ಸದ್ಯ ಕಾಂಗ್ರೆಸ್, ಎನ್ ಸಿಪಿ ಜತೆ ಸೇರಿ ಸರ್ಕಾರ ರಚಿಸಲು ಮುಂದಾಗಿದ್ದರೂ ಅದು ಯಶಸ್ವಿಯಾಗಿಲ್ಲ.
ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟು, ಇನ್ನೇನು ಸರ್ಕಾರ ರಚಿಸಿಯೇ ಬಿಟ್ವಿ ಎಂಬ ಹುಮ್ಮಸ್ಸಿನಲ್ಲಿದ್ದ ಶಿವಸೇನೆಗೆ ಶರದ್ ಪವಾರ್ ಹೇಳಿಕೆ ಭಾರೀ ನಿರಾಸೆ ಉಂಟು ಮಾಡಿದೆ. ಈಗ ತನ್ನ ಸ್ಥಿತಿಗೆ ಬಿಜೆಪಿಯೇ ಮೂಲ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications