ಮಹಾರಾಷ್ಟ್ರ ರಾಜಕೀಯ ಏರಿಳಿತ: ದಿನವೆಲ್ಲಾ ನಡೆದಿದ್ದು ಏನೇನು?
ಮುಂಬೈ, ನವೆಂಬರ್ 23: ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ಸಂಭವಿಸಿದ್ದು, ಇಂದು ಬೆಳ್ಳಂಬೆಳಿಗ್ಗೆ ಬಿಜೆಪಿ-ಎನ್ಸಿಪಿ ಸರ್ಕಾರ ರಚನೆ ಮಾಡಿವೆ.
ನಿನ್ನೆ ಸಂಜೆಯಷ್ಟೆ ಎನ್ಸಿಪಿ-ಶೀವಸೇನಾ-ಕಾಂಗ್ರೆಸ್ ಸರ್ಕಾರ ರಚನೆ ಮಾಡುವುದಾಗಿ ಹೇಳಿದ್ದವು. ಅದರಂತೆ ಉದ್ಧವ್ ಠಾಕ್ರೆಯನ್ನು ಸಿಎಂ ಎಂದು ಸಹ ಹೆಸರಿಸಲಾಗಿತ್ತು. ಆದರೆ ರಾತ್ರೋರಾತ್ರಿ ನಡೆದ ಬೆಳವಣಿಗೆಯಲ್ಲಿ ಬಿಜೆಪಿ-ಎನ್ಸಿಪಿ ಬಂಡಾಯ ಶಾಸಕರೊಂದಿಗೆ ಸೇರಿ ಬೆಳ್ಳಂಬೆಳಿಗ್ಗೆ ಸರ್ಕಾರ ರಚನೆ ಮಾಡಿಯೇ ಬಿಟ್ಟಿವೆ.
ನಿನ್ನೆ ರಾತ್ರಿ ಸಭೆ ನಡೆಸಿ ನಿದ್ದೆಗೆ ಹೋಗಿದ್ದ ಶಿವಸೇನಾ-ಕಾಂಗ್ರೆಸ್ ಮುಖಂಡರು ಇಂದು ಬೆಳಿಗ್ಗೆ ಏಳುವ ಹೊತ್ತಿಗೆ ಸರ್ಕಾರ ರಚನೆ ಆಗಿಬಿಟ್ಟಿದೆ. ಶರದ್ ಪವಾರ್ ಅಳಿಯ ಎನ್ಸಿಪಿಯ ಕೆಲವು ಶಾಸಕರನ್ನು ತನ್ನೊಂದಿಗೆ ಕರೆದೊಯ್ದು ಬಿಜೆಪಿಯೊಂದಿಗೆ ಕೈ ಮಿಲಾಯಿಸಿದ್ದಾರೆ.
ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ಣವೀಸ್ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಎನ್ಸಿಪಿಯ ಅಜಿತ್ ಪವಾರ್ ಪ್ರವಾಣ ವಚನ ಸ್ವೀಕರಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಕ್ಷಣ-ಕ್ಷಣದ ಮಾಹಿತಿ 'ಒನ್ಇಂಡಿಯಾ ಕನ್ನಡ'ದಲ್ಲಿ.
Message to the Nation: If you risk splitting the Hindutva movement you will be split
— Subramanian Swamy (@Swamy39) November 23, 2019