ಮುಂಬೈನಲ್ಲಿ ಸಂಚಾರ ಆರಂಭಿಸಿದ ಲೋಕಲ್ ರೈಲುಗಳು
ಮುಂಬೈ, ಜೂನ್ 15 : ಮುಂಬೈ ನಗರದಲ್ಲಿ ಜನರ ಜೀವನಾಡಿ ಲೋಕಲ್ ರೈಲುಗಳ ಸಂಚಾರ ಆರಂಭವಾಗಿದೆ. ಲಾಕ್ ಡೌನ್ ಘೋಷಣೆ ಬಳಿಕ ನಗರದಲ್ಲಿ ರೈಲುಗಳ ಸಂಚಾರ ಸ್ಥಗಿತವಾಗಿತ್ತು. ನಗರದಲ್ಲಿನ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 58,226.
ಮುಂಬೈ ಉಪನಗರ ರೈಲುಗಳು ಸೋಮವಾರದಿಂದ ಸಂಚಾರ ಆರಂಭಿಸಿವೆ. ಆಯ್ದ ಮಾರ್ಗದಲ್ಲಿ ರೈಲುಗಳ ಸಂಚಾರವನ್ನು ಆರಂಭಿಸಲಾಗಿದೆ. ಆದರೆ, ಸಾರ್ವಜನಿಕರು ರೈಲುಗಳಲ್ಲಿ ಸಂಚಾರ ನಡೆಸಲು ಇನ್ನೂ ಒಪ್ಪಿಗೆ ಸಿಕ್ಕಿಲ್ಲ.
ಮಹಾರಾಷ್ಟ್ರ ಸರ್ಕಾರದ ಅಗತ್ಯ ಸಿಬ್ಬಂದಿಗಳು ಸಂಚಾರ ನಡೆಸಲು ಮಾತ್ರ ರೈಲುಗಳನ್ನು ಓಡಿಲಾಗುತ್ತಿದೆ ಎಂದು ಸ್ಪಷ್ಟಪಡಿಸಲಾಗಿದೆ. ಒಟ್ಟು 60 ರೈಲುಗಳು ಸೋಮವಾರದಿಂದ ಸಂಚಾರ ಆರಂಭಿಸಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚರ್ಚ್ ಗೇಟ್ ಹಾಗೂ ದಾಹಾನು ರೋಡ್ ನಡುವೆ ರೈಲುಗಳು ಸಂಚಾರ ನಡೆಸುತ್ತಿವೆ. ರೈಲುಗಳ ಸಂಚಾರದ ವೇಳೆ ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಇತರ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆ.
ಬೆಳಗ್ಗೆ 5.30ರಿಂದ ರಾತ್ರಿ 11.30ರ ತನಕ ಪ್ರತಿ 15 ನಿಮಿಷಕ್ಕೆ ಒಂದು ರೈಲು ಸಂಚಾರ ನಡೆಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸಾರ್ವಜನಿಕರು ರೈಲುಗಳಲ್ಲಿ ಸಂಚಾರ ನಡೆಸುವಂತಿಲ್ಲ, ರೈಲು ನಿಲ್ದಾಣಕ್ಕೆ ಬರುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ದೇಶದಲ್ಲಿಯೇ ಅತಿ ಹೆಚ್ಚು ಕೊರೊನಾ ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ಅದರಲ್ಲೂ ಮುಂಬೈನಗರವೊಂದರಲ್ಲಿಯೇ 58,226 ಸೋಂಕಿತರು ಇದ್ದಾರೆ. ನಗರದಲ್ಲಿ ಕೊರೊನಾ ವೈರಸ್ ಸೋಂಕು ಹತೋಟಿಗೆ ತರಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ.
ಮಾರ್ಚ್ನಲ್ಲಿ ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಲೋಕಲ್ ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿತ್ತು. ಬಳಿಕ ಇದೇ ಮೊದಲ ಬಾರಿಗೆ ರೈಲುಗಳ ಸಂಚಾರವನ್ನು ಆರಂಭಿಸಲಾಗಿದೆ.
-
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು -
Asha Bhosle: ಆಶಾ ಭೋಸ್ಲೆಗೆ 16ನೇ ವರ್ಷದಲ್ಲೇ ಮದುವೆ, 2ನೇ ಮದುವೆಯಲ್ಲೂ ಸಂಕಷ್ಟ - ಕಾರಣವೇನು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್












Click it and Unblock the Notifications