ಎನ್ ಸಿಪಿ ಮೊದಲ ಪಟ್ಟಿ ಪ್ರಕಟ, ಬಾರಾಮತಿಯಿಂದ ಸುಪ್ರಿಯಾ ಕಣಕ್ಕೆ
ಮುಂಬೈ, ಮಾರ್ಚ್ 14: ಲೋಕಸಭೆ ಚುನಾವಣೆ 2019ಗಾಗಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ ಸಿಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರದಂದು ಪ್ರಕಟಿಸಿದೆ.
ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಮೊದಲ ಪಟ್ಟಿಯಲ್ಲಿ 12 ಮಂದಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದಾರೆ. ಪಕ್ಷದ ಎರಡನೇ ಪಟ್ಟಿಯನ್ನು ಶುಕ್ರವಾರದೊಳಗೆ ಬಹಿರಂಗಪಡಿಸುವ ಸಾಧ್ಯತೆಯಿದೆ. ಮೊದಲ ಪಟ್ಟಿಯಲ್ಲಿ ಸ್ವಾಭಿಮಾನಿ ಶೇತ್ಕಾರಿ ಸಂಘಟನೆಗೆ ಒಂದು ಸ್ಥಾನ ನೀಡಲಾಗಿದ್ದು, ಹತ್ಕಾನಂಗಲೆ ಕ್ಷೇತ್ರದಿಂದ ಸ್ಪರ್ಧಿಸಲು ಸೂಚಿಸಲಾಗಿದೆ.
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಶರದ್ ಪವಾರ್ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಬದಲಿಗೆ ಮೊಮ್ಮಗ ಪಾರ್ಥ್ ಪವಾರ್ ಸ್ಪರ್ಧಿಸಲಿದ್ದಾರೆ ಎಂದು ಈಗಾಗಲೇ ಘೋಷಿಸಿದ್ದಾರೆ. ಪವಾರ್ ಕುಟುಂಬದ ಪ್ರಭಾವಿ ನಾಯಕಿ ಸುಪ್ರಿಯಾ ಸುಳೆ ಅವರು ಈ ಬಾರಿ ಕೂಡಾ ಬಾರಾಮತಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

2019ರ ಲೋಕಸಭೆ ಚುನಾವಣೆಗಾಗಿ ಎನ್ ಸಿಪಿ ಮೊದಲ ಪಟ್ಟಿ
ಬಾರಾಮತಿ : ಸುಪ್ರಿಯಾ ಸುಳೆ
ಥಾಣೆ : ಆನಂದ್ ಪರಾಂಜಪೆ
ಕಲ್ಯಾಣ್ : ಬಾಬಾಜಿ ಪಾಟೀಲ್
ಮುಂಬೈ ಈಶಾನ್ಯ: ಸಂಜಯ್ ದಿನ ಪಾಟೀಲ್
ಕೋಲ್ಹಾಪುರ್ : ಧನಂಜಯ್ ಮಹಾದಿಕ್
ರಾಯ್ ಗಡ್: ಸುನಿಲ್ ತತ್ಕೆ
ಜಲಂಗಾವ್: ಗಿಲಬ್ರಾವ್ ದೇವಕರ್
ಪರ್ಭಾನಿ: ರಾಜೇಶ್ ವಿಟೇಕರ್
ಬುಲ್ಧಾನಾ : ರಾಜೇಂದ್ರ ಶಿಂಗಾನೆ
ಸತಾರಾ: ಉದಯನ್ರಾಜೆ ಭೋಸಲೆ
ಲಕ್ಷದೀಪ್ : ಮೊಹಮ್ಮದ್ ಫೈಜಲ್
ಮಹಾರಾಷ್ಟ್ರದಲ್ಲಿ 8 ಕೋಟಿ ಮತದಾರರಿದ್ದು, 48 ಸಂಸದರನ್ನು ಸಂಸತ್ತಿಗೆ ಆಯ್ಕೆ ಮಾಡಿ ಕಳುಹಿಸಲಿದೆ. ಉತ್ತರಪ್ರದೇಶದ ನಂತರ ಅತಿ ಹೆಚ್ಚು ಸಂಸದರನ್ನು ಹೊಂದಿರುವ ರಾಜ್ಯವಾಗಿದೆ.
2014ರಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ಎನ್ ಸಿಪಿ ಕ್ರಮವಾಗಿ 26 ಹಾಗೂ 21 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಕ್ರಮವಾಗಿ 2 ಹಾಗೂ 4 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ 23 ಹಾಗೂ ಶಿವಸೇನಾ 18 ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications