ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದಿಯೋರಾಗೆ ಬೆಂಬಲ ನೀಡಿದ ಅಂಬಾನಿ
ಮುಂಬೈ, ಏಪ್ರಿಲ್ 18: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಒಡನಾಟದ ಕಾರಣದಿಂದ ರಿಲಯನ್ಸ್ ಸಮೂಹದ ಮಾಲೀಕ ಅನಿಲ್ ಅಂಬಾನಿ ಕಾಂಗ್ರೆಸ್ಸಿಗರ ನಿರಂತರ ಟೀಕೆಗೆ ಗುರಿಯಾಗುತ್ತಿದ್ದರೆ, ಅತ್ತ ಅವರ ಅಣ್ಣ ಮುಕೇಶ್ ಅಂಬಾನಿ ಮುಂಬೈ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದಿಯೋರಾ ಪರ ಬ್ಯಾಟ್ ಬೀಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಇದರಿಂದ ತಮ್ಮ ಅನಿಲ್ ಅಂಬಾನಿ ವಿರುದ್ಧ ಮುಕೇಶ್ ಅಂಬಾನಿ ನಿಲುವು ಪ್ರಕಟವಾದಂತಾಗಿದೆ.
ವಿಡಿಯೋ ಒಂದರಲ್ಲಿ ಮಿಲಿಂದ್ ದಿಯೋರಾ ಅವರಿಗೆ ಬೆಂಬಲ ವ್ಯಕ್ತಪಡಿಸಿ ಮುಕೇಶ್ ಹೇಳಿಕೆ ನೀಡಿದ್ದಾರೆ. ಈ ವಿಡಿಯೋವನ್ನು ಮಿಲಿಂದ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

'ಮಿಲಿಂದ್ ದಕ್ಷಿಣ ಮುಂಬೈಗೆ ಸೂಕ್ತ ವ್ಯಕ್ತಿ. ದಕ್ಷಿಣ ಮುಂಬೈ ಕ್ಷೇತ್ರದ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಪರಿಸರ ವ್ಯವಸ್ಥೆ ಕುರಿತು ಅವರಿಗೆ ಆಳವಾದ ಜ್ಞಾನವಿದೆ' ಎಂದು ಮಿಲಿಂದ್ ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಮುಕೇಶ್ ಹೇಳಿದ್ದಾರೆ.
'ಸಣ್ಣ ಅಂಗಡಿ ನಡೆಸುವವರಿಂದ ದೊಡ್ಡ ಕೈಗಾರಿಕೋದ್ಯಮಿಗಳವರೆಗೆ- ಎಲ್ಲರಿಗೂ ದಕ್ಷಿಣ ಮುಂಬೈ ಎಂದರೆ ಉದ್ಯಮ. ನಾವು ಮುಂಬೈಗೆ ಉದ್ಯಮವನ್ನು ಮರಳಿ ತರುವುದು ಮತ್ತು ನಮ್ಮ ಯುವಕರಿಗೆ ಉದ್ಯೋಗ ಸೃಷ್ಟಿಯಾಗುವಂತೆ ಮಾಡುವುದು ನಮ್ಮ ಮೊದಲ ಆದ್ಯತೆ' ಎಂದು ಮಿಲಿಂದ್ ದಿಯೋರಾ ಟ್ವಿಟ್ಟರ್ನಲ್ಲಿ ಹೇಳಿದ್ದಾರೆ.
ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿರುವ ಮುಕೇಶ್ ಅಂಬಾನಿ, ರಾಜಕೀಯ ಅಭ್ಯರ್ಥಿಯೊಬ್ಬರ ಪರ ಪ್ರಚಾರ ನಡೆಸಿರುವುದು ಅಪರೂಪವಾಗಿದೆ.
From small shopkeepers to large industrialists - for everyone, South Mumbai means business.
— Milind Deora (@milinddeora) 17 April 2019
We need to bring businesses back to Mumbai and make job creation for our youth a top priority.#MumbaiKaConnection pic.twitter.com/d4xJnvhyKr
'ಮುಕೇಶ್ ಅಂಬಾನಿ ಅಥವಾ ಉದಯ್ ಕೋಟಕ್ ಅವರ ಬೆಂಬಲ ಬೇರೆಯವರಿಗಿಂತ ಹೆಚ್ಚು ಗಮನ ಸೆಳೆಯುತ್ತದೆ ಎನ್ನುವುದು ನನಗೆ ತಿಳಿದಿದೆ. ಆದರೆ, ನಾನು ಹೆಮ್ಮೆ ಪಟ್ಟುಕೊಳ್ಳುತ್ತೇನೆ. ಹಾಗೆಯೇ ಪಾನ್ವಾಲಾಗಳು, ಸಣ್ಣ ವ್ಯಾಪಾರಿಗಳಿಂದಲೂ ಬೆಂಬಲ ದೊರಕುತ್ತಿರುವುದಕ್ಕೆ ಅಷ್ಟೇ ಹೆಮ್ಮೆ ಪಟ್ಟುಕೊಳ್ಳುತ್ತೇನೆ. ದಕ್ಷಿಣ ಮುಂಬೈಗೆ ನಾನು ಏಕೆ ಸೂಕ್ತ ವ್ಯಕ್ತಿ ಎಂದು ಅವರಿಗೆ ಏಕೆ ಅನಿಸಿದೆ ಎಂಬ ಪ್ರಶ್ನೆಯನ್ನು ಅವರಿಗೇ ಕೇಳಬೇಕಿದೆ' ಎಂದು ಮಿಲಿಂದ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಪರ ಮುಕೇಶ್ ಅಂಬಾನಿ ಪ್ರಚಾರ ಮಾಡಿರುವುದು ಅನೇಕರ ಹುಬ್ಬೇರಿಸಿದೆ. ಮೋದಿ ಸರ್ಕಾರ ಬಂಡವಾಳಶಾಹಿಗಳ ಪರವಾಗಿದೆ. ಅನಿಲ್ ಅಂಬಾನಿಗೆ ನೆರವಾಗಲು ಮೋದಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂಬ ಆರೋಪಗಳನ್ನು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ನಿರಂತರವಾಗಿ ನಡೆಸುತ್ತಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications