'ಸಾಜನ್' ಬೆಡಗಿ ಮಾಧುರಿ ದೀಕ್ಷಿತ್ ಬಿಜೆಪಿಯಿಂದ ಲೋಕಸಭೆಗೆ ಸ್ಪರ್ಧೆ?
ಮುಂಬೈ, ಡಿಸೆಂಬರ್ 6: ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಅವರನ್ನು 2019ರ ಲೋಕಸಭೆ ಚುನಾವಣೆಯಲ್ಲಿ ಪುಣೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ.
ಪಕ್ಷದ 'ಸಂಪರ್ಕಕ್ಕಾಗಿ ಸಮರ್ಥನ' ಕಾರ್ಯಕ್ರಮದಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಳೆದ ಜೂನ್ನಲ್ಲಿ ಮಾಧುರಿ ದೀಕ್ಷಿತ್ ಅವರನ್ನು ಅವರ ಮುಂಬೈ ನಿವಾಸದಲ್ಲಿ ಭೇಟಿ ಮಾಡಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ವಿವರಿಸಿದ್ದರು.
ಪುಣೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯ ಅಂತಿಮ ಪಟ್ಟಿಯಲ್ಲಿ ಮಾಧುರಿ ದೀಕ್ಷಿತ್ ಅವರ ಹೆಸರನ್ನು ಪರಿಗಣಿಸಲಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಮಾಧುರಿ ದೀಕ್ಷಿತ್ ಅವರನ್ನು ಅಭ್ಯರ್ಥಿಯನ್ನಾಗಿಸಲು ಪಕ್ಷ ಗಂಭೀರವಾಗಿ ಚಿಂತನೆ ನಡೆಸಿದೆ. ಪುಣೆ ಲೋಕಸಭೆ ಕ್ಷೇತ್ರವು ಅವರಿಗೆ ಸೂಕ್ತವಾಗಿದೆ ಎಂದು ಹೇಳಿದ್ದಾರೆ.
ವಿವಿಧ ಲೋಕಸಭೆ ಕ್ಷೇತ್ರಗಳಿಗೆ ಕೆಲವು ಹೆಸರುಗಳನ್ನು ಅಂತಿಮಗೊಳಿಸಲಾಗುತ್ತಿದ್ದು, ಪುಣೆ ಲೋಕಸಭೆ ಕ್ಷೇತ್ರಕ್ಕೆ ಅವರ ಹೆಸರನ್ನು ಅಂತಿಮ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ ಎಂದಿದ್ದಾರೆ.
ನಟಿಯನ್ನು ಕಣಕ್ಕಿಳಿಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನರೇಂದ್ರ ಮೋದಿ ಅವರು ಗುಜರಾತ್ನಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ಈ ತಂತ್ರಗಳನ್ನು ಮೊದಲ ಬಾರಿಗೆ ಅಳವಡಿಸಿಕೊಂಡಿದ್ದರು. ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಬದಲಿಸಿದ್ದರು. ಆ ನಿರ್ಧಾರ ಭಾರಿ ಲಾಭ ತಂದುಕೊಟ್ಟಿತ್ತು ಎಂದು ತಿಳಿಸಿದ್ದಾರೆ.
ಹೊಸ ಮುಖಗಳನ್ನು ಪರಿಚಯಿಸಿದಷ್ಟೂ ಅವರ ವಿರುದ್ಧ ಹೆಚ್ಚು ಟೀಕೆಗಳು ಇರುವುದಿಲ್ಲ. ಇದರಿಂದ ಎದುರಾಳಿ ಪಕ್ಷಗಳು ಆಘಾತಕ್ಕೆ ಒಳಗಾಗುತ್ತವೆ. ಬಿಜೆಪಿ ಹೆಚ್ಚಿನ ಸೀಟುಗಳನ್ನು ಗೆದ್ದು ಅಧಿಕಾರಕ್ಕೆ ಮರಳುತ್ತದೆ ಎಂದು ವಿವರಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications