ಲೋಕಸಭೆ ಚುನಾವಣೆಗೆ ಸ್ಪರ್ಧೆ: ಮಾಧುರಿ ದೀಕ್ಷಿತ್ ಹೇಳಿದ್ದೇನು?
Recommended Video

ಮುಂಬೈ, ಡಿಸೆಂಬರ್ 08: ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತಂಟೆ ಬಾಲಿವುಡ್ ನ ಮೋಹಕ ನಟಿ ಮಾಧುರಿ ದೀಕ್ಷಿತ್ ಪ್ರತಿಕ್ರಿಯೆ ನೀಡಿದ್ದಾರೆ.
ಅವರು ಮಹಾರಾಷ್ಟ್ರದ ಪುಣೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಬಿಜೆಪಿಯ ಹಿರಿಯ ನಾಯಕರೊಬ್ಬರು ನೀಡಿದ್ದ ಹೇಳಿಕೆಯ ಮೇರೆಗೆ ಮಾಧ್ಯಮಗಳು ಅದನ್ನು ಬಹಿರಂಗ ಪಡಿಸಿದ್ದವು.
ಆದರೆ ಈ ವರದಿಯನ್ನು ತಳ್ಳಿಹಾಕಿರುವ ಮಾಧುರಿ ದೀಕ್ಷಿತ್, ತಾವು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ವದಂತಿ ಸುಳ್ಳು ಎಂದಿದ್ದಾರೆ.

ಕಳೆದ ಜೂನ್ ನಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಪಕ್ಷದ ಪ್ರಚಾರ ಭಾಗವಾದ 'ಸಂಪರ್ಕ ಸಮರ್ಥನ್' ಅಭಿಯಾನದಡಿ ಮಾಧುರಿ ದೀಕ್ಷಿತ್ ಅವರನ್ನು ಭೇಟಿಯಾಗಿದ್ದರು. ಇತ್ತೀಚೆಗಷ್ಟೇ ಪುಣೆಯಲ್ಲಿ ಲೋಕಸಭಾ ಟಿಕೆಟ್ ಯಾರಿಗೆ ನೀಡಲಾಗುತ್ತದೆ ಎಂಬ ಚರ್ಚೆಗೆ ಪ್ರತಿಕ್ರಿಯೆ ನೀಡಿದ್ದ ಮಹಾರಾಷ್ಟ್ರದ ಬಿಜೆಪಿ ಮುಖಂಡರೊಬ್ಬರು, ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಹೆಸರನ್ನು ಅಮತಿಮಗೊಳಿಸುವ ಬಗ್ಗೆ ಚಿಂತಿಸುತ್ತಿದೆ. ಪಟ್ಟಿಯಲ್ಲಿ ಮಾಧುರಿ ದೀಕ್ಷಿತ್ ಸೇರಿದಂತೆ ಹಲವರ ಹೆಸರಿದೆ. ಮಾಧುರಿ ದೀಕ್ಷಿತ್ ಅವರಿಗೆ ಪುಣೆಯ ಕ್ಷೇತ್ರದಲ್ಲಿ ಸುಲಭವಾಗಿ ಗೆಲ್ಲಲು ಸಾಧ್ಯವಿರುವುದರಂದ ಅವರ ಹೆಸರನ್ನೇ ಅಂತಿಮ ಗೊಳಿಸುವ ಸಾಧ್ಯತೆ ಇದೆ ಎಂದಿದ್ದರು.
ಆದರೆ ಈ ಎಲ್ಲ ಹೇಳಿಕೆಯನ್ನು 51 ವರ್ಷ ವಯಸ್ಸಿನ ದೀಕ್ಷಿತ್ ತಳ್ಳಿ ಹಾಕಿದ್ದಾರೆ. 1984 ರಲ್ಲಿ 'ಅಬೋಧ್' ಚಿತ್ರದ ಮೂಲಕ ಬಾಲಿವುಡ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಮಾಧುರಿ ನಂತರ ತೆಜಾಬ್, ರಾಮ್ ಲಖಾನ್, ದಿಲ್, ಬೇಟಾ, ಹಂ ಆಪ್ಕೆ ಹೈ ಕೌನ್, ಅಂಜಾಮ್, ಮೃತ್ಯುದಂಡ್, ಪುಕಾರ್, ದಿಲ್ ತೊ ಪಾಗಲ್ ಹೈ, ದೇವದಾಸ್ ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ.
2007 ರಲ್ಲಿ ಮತ್ತೆ ಚಿತ್ರರಗಕ್ಕೆ ಮರುಪದಾರ್ಪಣೆ ಮಾಡಿದ ಅವರು ಆಜಾ ನಚ್ಲೆ ಚಿತ್ರದಲ್ಲೂ ಅಭಿನಯಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications