ಮುಂಬೈನಲ್ಲಿ ನೋಟಾ ಮುಂದೆ ನೆಲಕಚ್ಚಿದ ಬಿಗ್ ಬಾಸ್ ಮಾಜಿ ಸ್ಪರ್ಧಿ!
ಮುಂಬೈ, ಅಕ್ಟೋಬರ್ 25: ಬಾಲಿವುಡ್ ನ ವಿವಾದಿತ ನಟ, ಬಿಗ್ ಬಾಸ್ ನ ಮಾಜಿ ಸ್ಪರ್ಧಿ ಏಜಾಜ್ ಖಾನ್ ಅವರ ಚುನಾವಣಾ ರಾಜಕೀಯ ಎಂಟ್ರಿಯ ಆರಂಭದಲ್ಲೇ ಮುಗ್ಗರಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆ ಬಯಸಿ ಮುಂಬೈನ ಬೈಕುಲಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಏಜಾಜ್ ಗೆ ಭಾರಿ ಸೋಲುಂಟಾಗಿದೆ.
ದಕ್ಷಿಣ ಮುಂಬೈನ ಬೈಕುಲಾದಲ್ಲಿ ಸ್ಪರ್ಧಿಸಿದ್ದ ಏಜಾಜ್ ಅವರು ಶಿವಸೇನಾದ ಯಾಮಿನಿ ಯಶ್ವಂತ್ ಜಾಧವ್ ವಿರುದ್ಧ ಸೋಲು ಕಂಡಿದ್ದಾರೆ. ಸೋಲು ನಿರೀಕ್ಷಿತವಾಗಿದ್ದರೂ ನೋಟಾಗಿಂತ ಕಡಿಮೆ ಮತ ಪಡೆದು ಹೀನಾಯ ಸೋಲನ್ನು ಅನುಭವಿಸಿದ್ದಾರೆ.
Agar Paani Hai Manzil Toh Apna Rahnuma Khud Bano,
— Ajaz Khan (@AjazkhanActor) October 24, 2019
Wo Aksar Bhatak Jaate Hain Jinhe Sahara Mil Jata Hai. pic.twitter.com/q2QAcoDHaR
ಯಾಮಿನಿ ಯಶವಂತ್ 51180 ಮತ(41.03%), ಕಾಂಗ್ರೆಸ್ಸಿನ ಅಣ್ಣಾ ಮಧು ಚವಾಣ್ 24139 ಮತ (19.35%) ಗಳಿಸಿದರೆ, ನೋಟಾ 2791 ಮತ ಬಂದಿವೆ. ಏಜಾಜ್ ಖಾನ್ 2174 ಮಾತ್ರ ಗಳಿಸಲು ಸಾಧ್ಯವಾಗಿದೆ.

ಬಿಗ್ ಬಾಸ್ 7ರ ಸ್ಪರ್ಧಿಯಾಗಿದ್ದ ಏಜಾಜ್ ಖಾನ್ ಅವರು ನಿಷೇಧಿತ ಸೈಕೋಟ್ರೋಪಿಕ್ ಪದಾರ್ಥ ಹೊಂದಿದ್ದ ಎಂಬ ಶಂಕೆಯ ಮೇರೆಗೆ ಎಚ್ಚರಿಕೆ ನೀಡಲಾಗಿತ್ತು. ನಂತರ ಮಾದಕ ದ್ರವ್ಯ ಹೊಂದಿದ್ದ ಕಾರಣಕ್ಕೆ ಬಂಧಿಸಲಾಗಿತ್ತು. ಇನ್ನೊಂದು ಪ್ರಕರಣದಲ್ಲಿ 'ಆಕ್ಷೇಪಾರ್ಹ' ವಿಡಿಯೋಗಳನ್ನು ತಯಾರಿಸಿ ಮತ್ತು ಅಪ್ಲೋಡ್ ಮಾಡಿದ ಆರೋಪದಲ್ಲಿ ಮುಂಬೈನ ಸೈಬರ್ ಅಪರಾಧ ಪೊಲೀಸರು ನಟ ಅಜಾಜ್ ಖಾನ್ ಅವರನ್ನು ಬಂಧಿಸಲಾಗಿತ್ತು. 39 ವರ್ಷದ ಏಜಾಜ್ ಖಾನ್, 'ಸಿಂಗಂ ರಿಟರ್ನ್ಸ್', 'ರಕ್ತ ಚರಿತ್ರ', 'ಬುಡ್ಡ ಹೋಗಯಾ ತೇರಾ ಬಾಪ್' ಸೇರಿದಂತೆ ವಿವಿಧ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಮತದಾನ ನಡೆದು, ಅಕ್ಟೋಬರ್ 24ರಂದು ಫಲಿತಾಂಶ ಹೊರಬಂದಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಮಾಡಿಕೊಂಡಿದ್ದವು. ಎರಡೂ ರಾಜ್ಯಗಳಲ್ಲಿ ಪ್ರಸ್ತುತ ಬಿಜೆಪಿ ಅಧಿಕಾರದಲ್ಲಿದ್ದು, ಈ ಬಾರಿಯ ಫಲಿತಾಂಶ ಕುತೂಹಲ ಕೆರಳಿಸಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 164 ಮತ್ತು ಶಿವಸೇನೆ 126 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದವು.
ಮಹಾರಾಷ್ಟ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಶಿವಸೇನಾ, ಎನ್ಸಿಪಿ ಅಲ್ಲದೆ, ರಾಜ್ ಠಾಕ್ರೆ ಅವರ ಎಂಎನ್ಎಸ್, ಎಐಎಂಐಎಂ, ವಂಚಿತ್ ಬಹುಜನ್ ಅಘಾಡಿ, ಸ್ವಾಭಿಮಾನಿ ಶೇತ್ಕಾರಿ ಸಂಘಟನಾ ಮುಂತಾದ ಸಣ್ಣ ಪುಟ್ಟ ಪಕ್ಷಗಳು ತಮ್ಮ ಛಾಪು ಮೂಡಿಸಲು ಮುಂದಾಗಿದ್ದವು. 288 ಸ್ಥಾನಗಳ ಪೈಕಿ ಬಿಜೆಪಿ 105, ಶಿವಸೇನಾ 56, ಎನ್ಸಿಪಿ 54, ಕಾಂಗ್ರೆಸ್ 44, ಎಂಎನ್ಎಸ್ 1.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications