ಮಹಾರಾಷ್ಟ್ರ ಕಟ್ಟಡ ಕುಸಿತ, ಐವರು ಕನ್ನಡಿಗರ ದುರ್ಮರಣ

ಮುಂಬೈ, ಆಗಸ್ಟ್ 4 : ಮಹಾರಾಷ್ಟ್ರದ ನೌಪಾಡದಲ್ಲಿ ಕುಸಿದ ಕಟ್ಟಡದ ಅವಶೇಷಗಳಡಿ ಸಿಲುಕಿ 5 ಕನ್ನಡಿಗರು ಮೃತಪಟ್ಟಿದ್ದಾರೆ. ಮೃತಪಟ್ಟರೆಲ್ಲಾ ಬಂಟ್ವಾಳದವರು ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಪಾಂಡುರಂಗ ಭಟ್ (62), ಮೀರಾ ಪಾಂಡುರಂಗ ಭಟ್ (58), ಸುಬ್ರಾಯ್ ಭಟ್ (56), ರುಚಿತ ಭಟ್ (25), ರಶ್ಮಿ ರಾಮಚಂದ್ರ ಭಟ್ (25) ಎಂದು ಗುರುತಿಸಲಾಗಿದೆ.

ಕಟ್ಟಡ ಕುಸಿತ 11 ಸಾವು : ಮಹಾರಾಷ್ಟ್ರದ ನೌಪಾಡದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು 11 ಜನರು ಸಾವನ್ನಪ್ಪಿದ್ದಾರೆ. ಅವಶೇಷಗಳ ಅಡಿಯಿಂದ 8 ಜನರನ್ನು ರಕ್ಷಣೆ ಮಾಡಲಾಗಿದ್ದು, ಇನ್ನೂ 9 ಜನರು ಸಿಲುಕಿರುವ ಸಾಧ್ಯತೆ ಇದೆ.

death

ಮಂಗಳವಾರ ಮುಂಜಾನೆ 2.30ರ ಸುಮಾರಿಗೆ 50 ವರ್ಷಗಳಷ್ಟು ಹಳೆಯದಾದ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ 8 ಜನರನ್ನು ರಕ್ಷಣೆ ಮಾಡಿದ್ದಾರೆ. [ಥಾಣೆ ದುರಂತ: ಮೃತ್ಯುಕೂಪವಾದ ಮಾತೃಛಾಯಾ ಕಟ್ಟಡ]

ಕಟ್ಟಡಗಳ ಅವಶೇಷಗಳನ್ನು ತೆರವುಗೊಳಿಸಿ ಸಿಲುಕಿಕೊಂಡವರನ್ನು ರಕ್ಷಣೆ ಮಾಡಲು ಅಗ್ನಿ ಶಾಮಕ ದಳದವರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಸುಮಾರು 9 ಜನರು ಅವಶೇಷಗಳ ಅಡಿ ಸಿಲುಕಿರಬಹುದು ಎಂದು ಶಂಕಿಸಲಾಗಿದೆ. [ಬೆಂಗಳೂರು : ಮೂವರ ಜೀವ ತಗೆದ 6 ಅಂತಸ್ತಿನ ಕಟ್ಟಡ]

ಕಟ್ಟಡ ಶಿಥಿಲಗೊಂಡಿದೆ ಎಂದು ಹಲವು ಬಾರಿ ಜಿಲ್ಲಾಡಳಿತ ಅಲ್ಲಿನ ನಿವಾಸಿಗಳಿಗೆ ಮಾಹಿತಿ ನೀಡಿತ್ತು. ಆದರೂ ಸಹ ನಿವಾಸಿಗಳು ಮನೆಗಳನ್ನು ತೆರವುಗೊಳಿಸಿರಲಿಲ್ಲ. ಇಂದು ಮುಂಜಾನೆ ಕಟ್ಟಡ ಕುಸಿದು ಬಿದ್ದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+