just in: ಮಹಾರಾಷ್ಟ್ರ; 10ರಲ್ಲಿ 9 ಮಂಕಿಫಾಕ್ಸ್ ಪ್ರಕರಣಗಳು ನೆಗಟಿವ್
ಮುಂಬೈ, ಜುಲೈ, 29: ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (ಎನ್ಐವಿ) ಕಳುಹಿಸಲಾದ ಶಂಕಿತ ಮಂಕಿಪಾಕ್ಸ್ ಸೋಂಕಿನ ಪ್ರಕರಣಗಳಲ್ಲಿ ಹತ್ತರಲ್ಲಿ ಒಂಬತ್ತು ಮಾದರಿಗಳು ಪರೀಕ್ಷೆಯಲ್ಲಿ ನೆಗೆಟಿವ್ ಬಂದಿವೆ ಎಂದು ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಒಬ್ಬ ರೋಗಿಯ ಫಲಿತಾಂಶ ಇನ್ನೂ ಲಭ್ಯವಿಲ್ಲ ಎಂದು ಮಹಾರಾಷ್ಟ್ರದ ಸಾಂಕ್ರಾಮಿಕ ಪೀಡಿತ ರೋಗಗಳ ಕಣ್ಗಾವಲು ಅಧಿಕಾರಿ ಡಾ.ಪ್ರದೀಪ್ ಅವತೆ ಹೇಳಿದ್ದಾರೆ.
ಇದುವರೆಗೆ ಮಹಾರಾಷ್ಟ್ರ ರಾಜ್ಯದಲ್ಲಿ ಮಂಕಿಫಾಕ್ಸ್ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ. ಶಂಕಿತ ಈ ಹತ್ತು ಮಂಕಿಫಾಕ್ಸ್ ಮಾದರಿಗಳನ್ನು ಕಳೆದ ತಿಂಗಳು ಎನ್ಐವಿಗೆ ಕಳುಹಿಸಲಾಗಿತ್ತು ಎಂದು ಡಾ. ಪ್ರದೀಪ್ ಅವತೆ ಹೇಳಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆ ಶಂಕಿತ ರೋಗಿಗಳ ವಿವರ ಮತ್ತು ಸ್ಥಳವನ್ನು ಬಹಿರಂಗಪಡಿಸುತ್ತಿಲ್ಲ ಆದ್ದರಿಂದ ಅವರು ಯಾವುದೇ ಕಿರುಕುಳವನ್ನು ಎದುರಿಸುವುದಿಲ್ಲ ಎಂದು ಹೇಳಿದರು.
ಮಹಾರಾಷ್ಟ್ರ ಸರ್ಕಾರ ಇತ್ತೀಚೆಗೆ ಮಂಕಿಫಾಕ್ಸ್ ಸೋಂಕಿನ ಪ್ರಕರಣಗಳು ವರದಿಯಾಗಿರುವ ದೇಶಗಳಿಂದ ಹಿಂದಿರುಗುತ್ತಿರುವ ರೋಗಿಗಳ ಮೇಲೆ ನಿಗಾ ಇಡುವಂತೆ ವೈದ್ಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದೆ.
ಇನ್ನು, ದೆಹಲಿಯ ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಶಂಕಿತ ಮಂಕಿಪಾಕ್ಸ್ ಕಾಯಿಲೆಯ ರೋಗಿಯನ್ನು ಗುರುವಾರ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ನಂತರ ಬಿಡುಗಡೆ ಮಾಡಲಾಗಿದೆ ಎಂದು ಹಿರಿಯ ವೈದ್ಯರು ತಿಳಿಸಿದ್ದಾರೆ. 30 ವರ್ಷದ ಗಾಜಿಯಾಬಾದ್ ವ್ಯಕ್ತಿಗೆ ಮಂಕಿಪಾಕ್ಸ್ ಬದಲು ಚಿಕನ್ಪಾಕ್ಸ್ ಇರುವುದು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕೇರಳದ ಮೂವರು ಸೇರಿದಂತೆ ದೇಶದಲ್ಲಿ ಇದುವರೆಗೆ ನಾಲ್ಕು ಮಂಕಿಪಾಕ್ಸ್ ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಮಂಕಿಪಾಕ್ಸ್ ವೈರಸ್ ಸೋಂಕಿತ ಪ್ರಾಣಿಗಳಿಂದ ಮನುಷ್ಯರಿಗೆ ಪರೋಕ್ಷ ಅಥವಾ ನೇರ ಸಂಪರ್ಕದ ಮೂಲಕ ಹರಡುತ್ತದೆ. ಸೋಂಕಿನ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ಚರ್ಮದ ದದ್ದುಗಳು (ಇವುಗಳು ಮುಖದಿಂದ ಪ್ರಾರಂಭವಾಗುತ್ತದೆ ಮತ್ತು ತೋಳುಗಳು, ಕಾಲುಗಳು, ಅಂಗೈಗಳು ಮತ್ತು ಅಡಿಭಾಗಗಳಿಗೆ ಹರಡುತ್ತದೆ), ದುಗ್ಧರಸ ಗ್ರಂಥಿಯ ಹಿಗ್ಗುವಿಕೆ, ತಲೆನೋವು, ಸ್ನಾಯು ನೋವು, ಅಥವಾ ಬಳಲಿಕೆ, ಕೆಮ್ಮು ಮತ್ತು ಗಂಟಲು ನೋವು.
Recommended Video
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications