ಅಕ್ಟೋಬರ್ 7ರಿಂದ ತೆರೆಯಲಿದೆ ಶಿರಡಿ ಸಾಯಿಬಾಬಾ, ಶನಿ ದೇಗುಲ
ಮುಂಬೈ, ಅಕ್ಟೋಬರ್ 06: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ, ಅಹ್ಮದ್ ನಗರ ಜಿಲ್ಲಾಡಳಿತ ಮಂಗಳವಾರ ಹೊಸ ಅನ್ಲಾಕ್ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಪ್ರಸಿದ್ಧ ಶಿರಡಿ ಸಾಯಿಬಾಬಾ ದೇಗುಲ ಹಾಗೂ ಶನಿ ಶಿಂಗ್ನಾಪುರ ದೇಗುಲಗಳನ್ನು ತೆರೆಯಲು ಅವಕಾಶ ನೀಡಿದೆ.
ಹೊಸ ಮಾರ್ಗಸೂಚಿಗಳನ್ನು ಅಹಮದ್ ನಗರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಬಿ ಭೋಸಲೆ ಮಂಗಳವಾರ ಹೊರಡಿಸಿದ್ದು, ಅಕ್ಟೋಬರ್ 7ರಿಂದ ದೇಗುಲಗಳನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.
ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಒಂದು ದಿನದಲ್ಲಿ ಕೇವಲ 15000 ಭಕ್ತರಿಗೆ ಅವಕಾಶ ನೀಡಲಾಗುವುದು. ಶನಿ ಶಿಂಗ್ನಾಪುರ ದೇವಸ್ಥಾನದಲ್ಲಿ 20 ಸಾವಿರ ಭಕ್ತರಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ದೇಗುಲಗಳಿಗೆ ಮಾರ್ಗಸೂಚಿಗಳು ಇಂತಿವೆ...
1. ದೇವಾಲಯ ಆಡಳಿತ ಭಕ್ತರಿಗೆ 5 ಸಾವಿರ ಪಾಸ್ಗಳನ್ನು ನೀಡಬಹುದು. 5 ಸಾವಿರ ಆನ್ಲೈನ್, 5 ಸಾವಿರ ಆಫ್ಲೈನ್ ಪಾಸ್ಗಳನ್ನು ಭಕ್ತರಿಗೆ ವಿತರಿಸಲು ಅನುಮತಿ ಇದೆ.
2. ಶಿರಡಿ ದೇಗುಲದಲ್ಲಿ ಪ್ರತಿ ಗಂಟೆಗೆ 1150 ಭಕ್ತರ ಪ್ರವೇಶಕ್ಕೆ ಅನುಮತಿ ಇದೆ.
3. ದೇಗುಲದಲ್ಲಿ ಆರತಿ ಸಮಯದಲ್ಲಿ ಕೇವಲ 90 ಭಕ್ತರಿಗೆ ಅವಕಾಶ ನೀಡಬಹುದು.
4. ಭಕ್ತರು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು. ಸಾಮಾಜಿಕ ಅಂತರ ಪಾಲಿಸಬೇಕು
5. 2ರ ದ್ವಾರದಿಂದ ಪ್ರವೇಶ ಹಾಗೂ 4, 5ನೇ ದ್ವಾರದಿಂದ ಹೊರಗೆ ಹೋಗಲು ಭಕ್ತರಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ದೇಗುಲ ಆಡಳಿತ ಮಂಡಳಿ ತಿಳಿಸಿದೆ.
6. ರಾಜ್ಯದಲ್ಲಿ ಎಲ್ಲಾ ದೇಗುಲಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ.
7. ದೇಗುಲದ ಧ್ಯಾನಮಂದಿರ ಹಾಗೂ ಪಾರಾಯಣ ಕಕ್ಷೆಯನ್ನು ತೆರೆಯಲು ಅವಕಾಶ ನೀಡಲಾಗಿಲ್ಲ.
8. ಗರ್ಭಿಣಿಯರು, ಹತ್ತು ವರ್ಷದೊಳಗಿನ ಮಕ್ಕಳು ಹಾಗೂ 65 ವರ್ಷ ಮೇಲ್ಪಟ್ಟವರಿಗೆ ದೇಗುಲ ಪ್ರವೇಶಕ್ಕೆ ಅನುಮತಿ ನೀಡಲಾಗಿಲ್ಲ.
ಸೋಮವಾರ ರಾಜ್ಯದಲ್ಲಿ 2026 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಫೆಬ್ರವರಿ 2ರ ನಂತರ ದಾಖಲಾದ ಅತಿ ಕಡಿಮೆ ಪ್ರಕರಣ ಇದಾಗಿದೆ. 26 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟಾರೆ ಪ್ರಕರಣಗಳ ಸಂಖ್ಯೆ 65,62,514 ಆಗಿದೆ. ಇದುವರೆಗೂ ಸೋಂಕಿನಿಂದ ರಾಜ್ಯದಲ್ಲಿ 139233 ಆಗಿದೆ.
ರಾಜ್ಯದಲ್ಲಿ ಇದುವರೆಗೂ 63,86,059 ಮಂದಿ ಗುಣಮುಖರಾಗಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ 33637 ಸಕ್ರಿಯ ಪ್ರಕರಣಗಳಿವೆ. ಮುಂಬೈನಲ್ಲಿ ಅಧಿಕ ಪ್ರಕರಣಗಳು ದಾಖಲಾಗಿದ್ದು, 657 ಮಂದಿಗೆ ಸೋಂಕು ತಗುಲಿದೆ.
ಮಹಾರಾಷ್ಟ್ರದ ಎಂಟು ಪ್ರದೇಶಗಳಲ್ಲಿ ಮುಂಬೈನಲ್ಲಿ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಪುಣೆಯಲ್ಲಿ 650 ಪ್ರಕರಣಗಳು ದಾಖಲಾಗಿವೆ. ನಾಸಿಕ್ನಲ್ಲಿ 414, ಕೊಲ್ಲಾಪುರದಲ್ಲಿ 192, ಲಾತೂರ್ನಲ್ಲಿ 58, ಔರಂಗಾಬಾದ್ನಲ್ಲಿ 42, ಅಕೋಲಾದಲ್ಲಿ 8 ಹಾಗೂ ನಾಗಪುರದಲ್ಲಿ ಐದು ಪ್ರಕರಣಗಳಿವೆ.
ನವರಾತ್ರಿಗೆ ರಾಜ್ಯದ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದಾಗಿ ರಾಜ್ಯ ಸರ್ಕಾರ ಕಳೆದ ತಿಂಗಳು ಮಾಹಿತಿ ನೀಡಿತ್ತು. ನವರಾತ್ರಿಯ ಮೊದಲ ದಿನದಂದು ಧಾರ್ಮಿಕ ಕೇಂದ್ರಗಳನ್ನು ಕೊರೊನಾ ನಿಯಮಗಳ ಪಾಲನೆಯೊಂದಿಗೆ ತೆರೆಯುವುದಾಗಿ ತಿಳಿಸಿತ್ತು.
ಇದೇ ಏಪ್ರಿಲ್ ತಿಂಗಳಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿರುವ ಶಿರಡಿ ಸಾಯಿಬಾಬಾ ದೇವಸ್ಥಾನವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಪ್ರಸಾದಾಲಯ, ಭಕ್ತರ ನಿವಾಸವನ್ನು ಕೂಡ ಮುಚ್ಚಲಾಗಿದೆ. ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಭಾಗಶಃ ಲಾಕ್ಡೌನ್ ವಿಧಿಸಿತ್ತು.
ಇದೀಗ ಕೊರೊನಾ ಪ್ರಕರಣಗಳು ತಗ್ಗಿರುವ ಕಾರಣ ಮತ್ತೆ ಧಾರ್ಮಿಕ ಕೇಂದ್ರಗಳನ್ನು ತೆರೆಯಲಾಗುತ್ತಿದೆ.
ದೇಶದಲ್ಲಿ ಕೂಡ ಕೊರೊನಾ ಪ್ರಕರಣಗಳ ಸಂಖ್ಯೆ ಕೆಲವು ದಿನಗಳಿಂದ ತಗ್ಗಿದೆ. ಮಂಗಳವಾರ 18,346 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, ಕೇರಳ ರಾಜ್ಯವೊಂದರಲ್ಲೇ 8,850 ಹೊಸ ಪ್ರಕರಣ ದಾಖಲಾಗಿದೆ. ಭಾರತದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,52,902. ದೇಶದ ಗುಣಮುಖ ಪ್ರಮಾಣ ಶೇ 97.93 ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
-
LPG Price: ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಏರಿಕೆ: ಇಲ್ಲಿದೆ ಮಾರ್ಚ್ 1ರ ದರಪಟ್ಟಿ -
Gold Rate Today: ಆಭರಣ ಪ್ರಿಯರ ಗಮನಕ್ಕೆ: ಬೆಂಗಳೂರಿನಲ್ಲಿ ಇಂದು ಚಿನ್ನ-ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ -
National Highway: ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಯ ಮಹತ್ವದ ಅಪ್ಡೇಟ್ -
ಬೇರೆ ದೇಶಗಳಂತೆ ಭಾರತೀಯರಿಗೆ ಭಯದಿಂದ ನಿದ್ರಿಸುವ ಪರಿಸ್ಥಿತಿ ಅಲ್ಲ: ನಿವೃತ್ತ ಸೇನಾಧಿಕಾರಿ ಸುನೀಲ್ ಕುಮಾರ್ ಶಾಸ್ತ್ರಿ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬಿಸಿಲೂ ಹೆಚ್ಚು -
ಮಾರ್ಚ್ 3, 2026 – ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ: ದ್ವಾದಶ ರಾಶಿಗಳ ಫಲಿತಾಂಶ -
ಕರ್ನಾಟಕದ 4 ರೈಲು ನಿಲ್ದಾಣ ಸೇರಿ 76 ಕಡೆ ಪ್ರಯಾಣಿಕರ ನಿಲುಗಡೆ ತಾಣ ನಿರ್ಮಾಣ, ಏನಿದರ ಪ್ರಯೋಜನ? -
ಅಮೆರಿಕಕ್ಕೆ ಸೆಡ್ಡು ಹೊಡೆದು 16,800 ಕೋಟಿ ರೂ ಒಪ್ಪಂದ ಕಡಿದುಕೊಂಡ ಆಂತ್ರೋಪಿಕ್: ಬೆಂಗಳೂರು ಟೆಕ್ಕಿ ಮೆಚ್ಚುಗೆ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
ಹರ್ಮೂಜ್ ಜಲಸಂಧಿ ಬಂದ್: ಭಾರತಕ್ಕೆ ತಟ್ಟಲಿದೆ ತೈಲ ದರದ ಬಿಸಿ, ಆರ್ಥಿಕತೆಗೂ ಭಾರಿ ಹೊಡೆತ












Click it and Unblock the Notifications