ಮಹಾರಾಷ್ಟ್ರದಲ್ಲಿ ರಂಗೇರಿದ ಕಣ: ನಾಲ್ವರು ಬಿಜೆಪಿ ನಾಯಕರ ಉಚ್ಚಾಟನೆ
ಮುಂಬೈ, ಅಕ್ಟೋಬರ್ 11: ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಯ ದಿನ ಸಮೀಪಿಸುತ್ತಿದ್ದಂತೆಯೇ ಚುನಾವಣಾ ಕಣ ರಂಗೇರುತ್ತಿದೆ. ಪಕ್ಷದ ವಿರುದ್ಧ ಬಂಡಾಯ ಎದ್ದ ಟಿಕೆಟ್ ವಂಚಿತರು ದೊಡ್ಡ ತಲೆನೋವಾಗಿ ಪರಿಣಮಿಸಿದ್ದಾರೆ.
ತಮ್ಮ ನಾಯಕನಿಗೆ ಟಿಕೆಟ್ ಸಿಗದ ಕಾರಣಕ್ಕೆ ಶಿವಸೇನೆಯ 26 ಕಾರ್ಪೋರೇಟರ್ ಗಳು ಮತ್ತು ನೂರಾರು ಶಾಸಕರು ರಾಜೀನಾಮೆ ನೀಡಿದ ಎರಡು ದಿನಗಳಲ್ಲಿ ಬಿಜೆಪಿ ತನ್ನ ನಾಲ್ವರು ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದೆ.
ಚರನ್ ವಾಗ್ಮರೆ, ಗೀತಾ ಜೈನ್, ಬಾಳಾಸಾಹೆಬ್ ಒಹ್ವಾಲ್, ದಿಲೀಪ್ ದೇಶ್ಮುಖ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಬಿಜೆಪಿ ಮತ್ತು ಶಿವಸೇನೆ ಮೈತ್ರಿಯ ನಂತರ ಉಭಯ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಮತ್ತಷ್ಟು ಹೆಚ್ಚಾಗಿದೆ. ಶಿವಸೇನೆ ಸದಸ್ಯರು ನಿರೀಕ್ಷಿಸಿದ್ದ ಕ್ಷೇತ್ರದಲ್ಲಿ ಬಿಜೆಪಿಗೆ ಟಿಕೆಟ್ ನೀಡಿದ್ದು ಮತ್ತು ಬಿಜೆಪಿ ನಿರೀಕ್ಷಿಸಿದ ಕ್ಷೇತ್ರದಲ್ಲಿ ಶಿವಸೇನೆಗೆ ಟಿಕೆಟ್ ಸಿಕ್ಕಿದ್ದು ಟಿಕೆಟ್ ಆಕಾಂಕ್ಷಿಗಳಲ್ಲಿ ಭಾರೀ ನಿರಾಸೆ ಉಂಟು ಮಾಡಿದೆ. ಈ ಕಾರಣದಿಂದ ಪಕ್ಷದ ವಿರುದ್ಧ ಬಂಡಾಯ ಎದ್ದು, ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾದವರನ್ನು ಬಿಜೆಪಿ ಉಚ್ಚಾಟಿಸಿದೆ.
ಮಹಾರಾಷ್ಟ್ರದ ಕಲ್ಯಾಣ್ ಪೂರ್ವ ಕ್ಷೇತ್ರದಿಂದ ಶಿವಸೇನೆ ನಾಯಕ ಧನಂಜಯ್ ಬಾಡೊರೆ ಅವರಿಗೆ ಟಿಕೆಟ್ ನೀಡದೇ, ಬಿಜೆಪಿ ಅಭ್ಯರ್ಥಿಯಾಗಿ ಗಣಪತ್ ಕಲು ಗಾಯಕ್ವಾಡ್ ಅವರಿಗೆ ಟಿಕೆಟ್ ನೀಡಿದ್ದರಿಂದ ಬೇಸತ್ತು ಶಿವಸೇನೆಯ 26 ಕಾರ್ಪೋರೇಟರ್ ಗಳು ಮತ್ತು 300 ಕಾರ್ಯಕರ್ತರು ಎರಡು ದಿನಗಳ ಹಿಂದೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications