ಜುಲೈ 4ರಂದು ಏಕನಾಥ್ ಶಿಂಧೆಗೆ ವಿಶ್ವಾಸಮತ ಪರೀಕ್ಷೆ; ಭಿನ್ನಮತೀಯರ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಠಾಕ್ರೆ ಬಣ
ನವದೆಹಲಿ, ಜುಲೈ 1: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಜುಲೈ 4, ಸೋಮವಾರದಂದು ಬಹುಮತ ಸಾಬೀತುಪಡಿಸಲು ಸೂಚಿಸಲಾಗಿದೆ. ಇದರೊಂದಿಗೆ ಏಕನಾಥ್ ಶಿಂಧೆಗೆ ಬಹುಮತ ಸಾಬೀತು ಮಾಡಲು ಮೂರು ದಿನ ಮಾತ್ರ ಕಾಲಾವಕಾಶ ಇದೆ.
ಇದೇ ವೇಳೆ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣದವರು ಶುಕ್ರವಾರ ಏಕನಾಥ್ ಶಿಂಧೆ ಸೇರಿದಂತೆ 16 ಭಿನ್ನಮತೀಯ ಶಾಸಕರನ್ನು ವಜಾಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಶಾಸಕರನ್ನು ಅನರ್ಹತೆಗೊಳಿಸುವ ನಿರ್ಧಾರವನ್ನು ಪ್ರಶ್ನಿಸಿ ಏಕನಾಥ್ ಶಿಂಧೆ ಬಣದವರೂ ಕೂಡ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಸೋಮವಾರವೇ ಈ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ.
ಶಿವಸೇನಾ ಪಕ್ಷದೊಳಗೆ ಬಂಡಾಯ ಎದ್ದು ಇದೀಗ ಬಿಜೆಪಿ ಜೊತೆ ಸರಕಾರ ರಚಿಸಿರುವ ಏಕನಾಥ್ ಶಿಂದೆ ಬಣದಲ್ಲಿ ೫೦ ಶಾಸಕರಿದ್ದಾರೆ. ಬಿಜೆಪಿ 106 ಶಾಸಕರನ್ನು ಹೊಂದಿದೆ. ಬಹುಮತಕ್ಕೆ ಬೇಕಾದ 145 ಸ್ಥಾನಗಳು ಶಿಂಧೆ ಸರಕಾರದ ಬಳಿ ಇದೆ.
ಆದರೆ, ಸೋಮವಾರ ಸುಪ್ರೀಂ ಕೋರ್ಟ್ ಶಿವಸೇನಾ ಭಿನ್ನಮತೀಯರನ್ನು ಅನರ್ಹಗೊಳಿಸಿದರೆ ಆಗ ಹೊಸ ಸಾಧ್ಯತೆ ತೆರೆದುಕೊಳ್ಳಬಹುದು. ಆದರೆ, ಶಿವಸೇನೆಯ 55 ಶಾಸಕರಲ್ಲಿ 39 ಮಂದಿ ತಮ್ಮ ಜೊತೆ ಇದ್ದಾರೆ. ಆದ್ರಿಂದ ತಮ್ಮದೇ ಶಿವಸೇನೆಯ ಅಧಿಕೃತ ಬಣ ಎಂಬುದು ಏಕನಾಥ್ ಶಿಂಧೆ ವಾದ. ಒಂದು ವೇಳೆ ಶಿಂಧೆ ಬಣಕ್ಕೆ ಮಾನ್ಯತೆ ಸಿಕ್ಕರೆ ಉದ್ಧವ್ ಠಾಕ್ರೆ ಮತ್ತವರ ಬೆಂಬಲಿಗರು ಬೇರೆ ಪಕ್ಷ ನಿರ್ಮಾಣ ಮಾಡಿಕೊಳ್ಳಬೇಕಾಗಬಹುದು.

ಮಹಾ ಡ್ರಾಮಾ
ಶಿವಸೇನಾ ಪಕ್ಷದೊಳಗೆ ಏಕನಾಥ್ ಶಿಂಧೆ ಬಂಡಾಯ ಎದ್ದು 50ಕ್ಕೂ ಹೆಚ್ಚು ಶಾಸಕರು ಅವರ ಬಳಿ ಸೇರಿಕೊಂಡಾಗ ಉದ್ಧವ್ ಠಾಕ್ರೆ ಅಧಿಕಾರದಿಂದ ಕೆಳಗಿಳಿಯದೇ ಬೇರೆ ವಿಧಿ ಇರಲಿಲ್ಲ. ಬಹುಮತ ಪರೀಕ್ಷೆ ನಡೆಯಬೇಕೆಂದು ರಾಜ್ಯಪಾಲರು ಸೂಚಿಸಿದ ಬೆನ್ನಲ್ಲೇ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಆ ಬಳಿಕ ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವಿಸ್ ಹಾಗು ಬಿಜೆಪಿ ವರಿಷ್ಠರ ಮಧ್ಯೆ ಮಾತುಕತೆಯಾಯಿತು. ಫಡ್ನವಿಸ್ ಸಿಎಂ ಎಂದೂ ಶಿಂಧೆ ಡಿಸಿಎಂ ಎಂದೂ ನಿಶ್ಚಯವಾಗಿತ್ತು. ಆದರೆ, ದಿಢೀರನೇ ಬದಲಾದ ನಿರ್ಧಾರದಲ್ಲಿ ಏಕನಾಥ್ ಶಿಂಧೆ ಸಿಎಂ ಆಗಿ ಘೋಷಿತರಾದರು. ಫಡ್ನವಿಸ್ ಡಿಸಿಎಂ ಆಗುವಂತೆ ಜೆಪಿ ನಡ್ಡಾ ಸೂಚಿಸಿ ಒಪ್ಪಿಸಿದರು.
ನಿನ್ನೆ ಸಂಜೆಯ ನಂತರ ಇಬ್ಬರೂ ಕೂಡ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಿದರು. ಆ ಬಳಿಕ ಸಂಪುಟ ಸಭೆಯಲ್ಲಿ ಆರೆ ಅರಣ್ಯ ಪ್ರದೇಶದಲ್ಲಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ಮೊದಲು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಬಿಜೆಪಿ ರಣತಂತ್ರ
ಠಾಕ್ರೆ ಕುಟುಂಬಕ್ಕೆ ಸೇರದ ಒಬ್ಬ ವ್ಯಕ್ತಿಯನ್ನು ಸಿಎಂ ಆಗಿ ಮಾಡುವ ಮೂಲಕ ಬಿಜೆಪಿ ಆ ಕುಟುಂಬಕ್ಕೆ ಸ್ಪಷ್ಟ ಸಂದೇಶ ರವಾನಿಸಿದೆ. ಠಾಕ್ರೆ ಕುಟುಂಬ ಶಿವಸೇನಾ ಪಕ್ಷದಲ್ಲಿ ಸಂಪೂರ್ಣ ಹಿಡಿತ ಹೊಂದುವುದನ್ನು ತಪ್ಪಿಸಲು ಬಿಜೆಪಿ ನಡೆಸಿದ ಪ್ಲಾನ್ ಇದು.
ಹಾಗೆಯೇ, ಬಿಜೆಪಿ ತಾನು ಅಧಿಕಾರದ ವ್ಯಾಮೋಹ ಹೊಂದಿಲ್ಲ ಎಂಬುದನ್ನು ಬಿಂಬಿಸುವ ಪ್ರಯತ್ನವೂ ಇದಾಗಿದೆ. ಅಜಿತ್ ಪವಾರ್ ಜೊತೆ ಸೇರಿ ಬಿಜೆಪಿ ಸರಕಾರ ರಚಿಸಲು ಯತ್ನಿಸಿದಾಗ ಅನೇಕರು ಬಿಜೆಪಿ ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತದೆ ಎಂದು ಟೀಕಿಸಿದ್ದರು. ಆದರೆ, ಈಗ ಏಕನಾಥ್ ಶಿಂಧೆಗೆ ಸಿಎಂ ಸ್ಥಾನ ಬಿಟ್ಟುಕೊಡುವ ಮೂಲಕ ಬಿಜೆಪಿ ತನಗೆ ಅಧಿಕಾರ ಮಾತ್ರವೇ ಮುಖ್ಯವಲ್ಲ ಎಂಬ ಸಂದೇಶವನ್ನು ರವಾನಿಸಿದೆ.
ಈಗ ಸುಪ್ರೀಂಕೋರ್ಟ್ ಸೋಮವಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಠಾಕ್ರೆ ಬಣದ ಪರ ಕಪಿಲ್ ಸಿಬಲ್ ವಕಾಲತು ವಹಿಸಿದ್ಧಾರೆ. ತುರ್ತು ವಿಚಾರಣೆ ನಡೆಸಬೇಕೆಂದು ಸಿಬಲ್ ಕೋರಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications