ಉದ್ಧವ್ ಠಾಕ್ರೆ ಪ್ರಮಾಣ ವಚನ ಕಾರ್ಯಕ್ರಮ ಪೂರ್ಣ ಚಿತ್ರಣ
ಮುಂಬೈ, ನವೆಂಬರ್ 28: ಶಿವಸೇನಾ-ಎನ್ಸಿಪಿ-ಕಾಂಗ್ರೆಸ್ ಪಕ್ಷಗಳು ಒಗ್ಗಟ್ಟಾಗಿ ಬಿಜೆಪಿಯನ್ನು ರಾಜಕೀಯವಾಗಿ ಮಣಿಸಿ ಅಧಿಕಾರದ ಗದ್ದುಗೆಯನ್ನು ಏರುತ್ತಿವೆ.
ಮೂರು ಪಕ್ಷಗಳ ಮೈತ್ರಿಯ ಮುಖವಾಗಿರುವ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆ ಮಹಾರಾಷ್ಟ್ರದ 19 ನೇ ಮುಖ್ಯಮಂತ್ರಿಯಾಗಿ ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಹಾರಾಷ್ಟ್ರದಲ್ಲಿ ರಾಜಕೀಯದಲ್ಲಿ ಛಾಪು ಮೂಡಿಸಿರುವ ಠಾಕ್ರೆ ಕುಟುಂಬದಿಂದ ಸಿಎಂ ಆಗುತ್ತಿರುವ ಮೊದಲ ಮೊದಲ ವ್ಯಕ್ತಿ ಉದ್ಧವ್ ಠಾಕ್ರೆ.
ಶಾಸಕರಾಗದೇ ಸಿಎಂ ಪಟ್ಟಕ್ಕೇರಿದವರ ಪೈಕಿ ಉದ್ಧವ್ ಮೊದಲಿಗರಲ್ಲ!
ಹಲವು ರಾಜಕೀಯ ಏರಿಳಿತಗಳ ನಂತರ ಶಿವಸೇನಾ-ಎನ್ಸಿಪಿ-ಕಾಂಗ್ರೆಸ್ ಒಟ್ಟಾಗಿ ಸರ್ಕಾರ ರಚನೆ ಮಾಡಿದ್ದು, ಹಲವು ಕಾರಣಕ್ಕೆ ಈ ಮೈತ್ರಿ ಸರ್ಕಾರ ದೇಶದ ರಾಜಕೀಯ ಆಸಕ್ತರ ಗಮನ ಸೆಳೆದಿದೆ. ಪರಸ್ಪರ ವಿರುದ್ಧ ರಾಜಕೀಯ ಆದರ್ಶ, ಮೌಲ್ಯಗಳನ್ನು ಹೊಂದಿರುವ ಪಕ್ಷಗಳು ಒಂದಾಗಿ ಮಾಡಿರುವ ಸರ್ಕಾರದ ಮೇಲೆ ಬಿಜೆಪಿಯ ವಕ್ರಕಣ್ಣೂ ಸಹ ನೆಟ್ಟಿದೆ.
ಉದ್ಧವ್ ಠಾಕ್ರೆ ಅವರ ಪ್ರಮಾಣ ವಚನ ಕಾರ್ಯಕ್ರಮವು ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಆಯೋಜಿಸಲಾಗಿದ್ದು, ಪ್ರಧಾನಿ ಮೋದಿ, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿದೆ. ವಿಶೇಷವಾಗಿ 700 ರೈತರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.
Sonia Gandhi in a letter to Uddhav Thackeray: Shiv Sena,NCP&Congress have come together under quite extraordinary circumstances, at a time when country faces unprecedented threats from BJP. I regret that I'll not be able to be present at the ceremony (oath-taking). #Maharashtra pic.twitter.com/wHs95Y7mV6
— ANI (@ANI) November 28, 2019