ಮಹಾರಾಷ್ಟ್ರ ತ್ರಿಪಕ್ಷ ಮೈತ್ರಿ ಸರ್ಕಾರಕ್ಕೆ ಶನಿವಾರ ಬಹುಮತದ ಅಗ್ನಿಪರೀಕ್ಷೆ
ಮುಂಬೈ, ನವೆಂಬರ್ 29: ಎನ್ಸಿಪಿ-ಶಿವಸೇನಾ-ಕಾಂಗ್ರೆಸ್ ನ ತ್ರಿಮೈತ್ರಿ ಸರ್ಕಾರಕ್ಕೆ ನಾಳೆ ಶನಿವಾರ ಬಹುಮತ ಸಾಬೀತಿನ ಅಗ್ನಿಪರೀಕ್ಷೆ ಇದ್ದು, ಮೈತ್ರಿ ಸರ್ಕಾರವು ವಿಶ್ವಾಸದಲ್ಲಿದೆ.
ನಿನ್ನೆಯಷ್ಟೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.
ತಮಗೆ 162 ಶಾಸಕರ ಬೆಂಬಲ ಇರುವುದಾಗಿ ಕೆಲವು ದಿನಗಳ ಹಿಂದೆ ಹೇಳಿದ್ದ ಮೈತ್ರಿ ಪಕ್ಷಗಳು, ನಾಳಿನ ವಿಶ್ವಾಸಮತವನ್ನು ಸುಲಭವಾಗಿ ಜಯಿಸುವ ವಿಶ್ವಾಸದಲ್ಲಿವೆ.

ಎನ್ಸಿಪಿ ಶಾಸಕ ದಿಲೀಪ್ ವಾಲ್ಸೆ ಪಾಟೀಲ್ ಅವರು ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಆಗಿದ್ದು, ನಾಳಿನ ವಿಶ್ವಾಸಮತ ಯಾಚನೆ ಕಾರ್ಯವನ್ನು ನಡೆಸಿಕೊಡಲಿದ್ದಾರೆ.
ಡಿಸೆಂಬರ್ 3 ರ ಒಳಗೆ ಬಹುಮತ ಸಾಬೀತು ಮಾಡುವಂತೆ ರಾಜ್ಯಪಾಲ ಬಿ.ಎಸ್.ಕೊಶ್ಯಾರಿ ಸೂಚಿಸಿದ್ದರು. ಹಾಗಾಗಿ ನಾಳೆಯೇ ವಿಶ್ವಾಮತ ಯಾಚನೆ ಮಾಡಲು ಮೈತ್ರಿ ಸರ್ಕಾರ ಸಜ್ಜಾಗಿದೆ.
ನಾಳೆ ಮಧ್ಯಾಹ್ನ 2 ಗಂಟೆ ವೇಳೆಗೆ ವಿಶ್ವಾಸಮತ ಯಾಚನೆ ನಡೆಯುವ ಸಾಧ್ಯತೆ ಇದೆಯೆಂದು ವಿಧಾನಭವನ ಸಿಬ್ಬಂದಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಹಲವು ನಾಟಕೀಯ ತಿರುವುಗಳ ನಂತರ ನಿನ್ನೆ ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ ಎನ್ಸಿಪಿ, ಶಿವಸೇನಾ, ಕಾಂಗ್ರೆಸ್ನ ಆರು ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications