ಮಹಾರಾಷ್ಟ್ರ ಮೈತ್ರಿ: ಯಾವ ಪಕ್ಷಕ್ಕೆ ಎಷ್ಟು ಸಚಿವ ಸ್ಥಾನ?
ಮುಂಬೈ, ನವೆಂಬರ್ 27: ಮಹಾರಾಷ್ಟ್ರದಲ್ಲಿ ಎನ್ಸಿಪಿ-ಶೀವಸೇನಾ-ಕಾಂಗ್ರೆಸ್ ಮೈತ್ರಿ ಸರ್ಕಾರ ನಾಳೆ ಅಸ್ಥಿತ್ವಕ್ಕೆ ಬರುವುದು ಬಹುತೇಕ ನಿಶ್ಚಯವಾಗಿದೆ.
ಮೂರು ಪಕ್ಷಗಳು ಸಚಿವ ಸ್ಥಾನ ಹಂಚಿಕೆ ಬಗ್ಗೆ ಮಾತುಕತೆ ಮುಗಿಸಿದ್ದು, ಶಿವಸೇನಾಕ್ಕೆ ಸಿಎಂ ಪಟ್ಟದ ಜೊತೆ 15 ಮಂತ್ರಿಗಳು ದೊರಕಲಿವೆ. ಎನ್ಸಿಪಿಗೆ ಉಪಮುಖ್ಯಮಂತ್ರಿ ಸ್ಥಾನದ ಜೊತೆಗೆ 13 ಸಚಿವ ಸ್ಥಾನ, ಕಾಂಗ್ರೆಸ್ಗೆ ಸ್ಪೀಕರ್ ಸ್ಥಾನದ ಜೊತೆಗೆ 13 ಸ್ಥಾನಗಳು ದೊರಕಲಿವೆ.
ಉದ್ಧವ್ ಠಾಕ್ರೆ ನಾಳೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಮೋದಿ ಸೇರಿದಂತೆ ದೇಶದ ಹಲವು ಸಿಎಂ ಗಳನ್ನು ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಎನ್ಸಿಪಿಯಿಂದ ಡಿಸಿಎಂ ಸ್ಥಾನವನ್ನು ಸುಪ್ರಿಯಾ ಸುಳೆ ಅವರಿಗೆ ನೀಡಲಾಗುತ್ತದೆ ಎಂಬ ಸುದ್ದಿಯಿದ್ದು ಇದು ಖಚಿತವಾಗಿಲ್ಲ.

ಡಿಸಿಎಂ ಸ್ಥಾನಕ್ಕಾಗಿ ಬಂಡಾಯವೆದ್ದು ಎನ್ಸಿಪಿಗೆ ಮರಳಿರುವ ಅಜಿತ್ ಪವಾರ್ ಹೆಸರೂ ಸಹ ಪರಿಗಣಿಸಲಾಗುತ್ತಿದೆ. ಆದರೆ ಪಕ್ಷದ ಕೆಲವು ಶಾಸಕರ ವಿರೋಧ ಇರುವ ಕಾರಣ ಅಜಿತ್ ಪವಾರ್ ಬದಲಿಗೆ ಸುಪ್ರಿಯಾ ಸುಳೆ ಅವರಿಗೆ ಡಿಸಿಎಂ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದೆ.
ಶಿವಾಜಿ ಪಾರ್ಕ್ ನಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಾಳೆ ನಡೆಯಲಿದೆ. ಇದನ್ನು ವಿರೋಧಿಸಿ ಮಹಾರಾಷ್ಟ್ರ ಹೈಕೋರ್ಟ್ ಸಲ್ಲಿಸಲಾಗಿದ್ದ ಅರ್ಜಿ ವಜಾ ಆಗಿದೆ. ಆದರೆ ಈ ರೀತಿಯ ಕಾರ್ಯಕ್ರಮಗಳು ಶಿವಾಜಿ ಪಾರ್ಕ್ನಲ್ಲಿ ಹೆಚ್ಚಿಗೆ ನಡೆಯಬಾರದು ಎಂದು ಸಹ ಹೈಕೋರ್ಟ್ ಹೇಳಿದೆ.
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications