ಅರ್ನಬ್ ಗೋಸ್ವಾಮಿ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ದೂರು
ಮುಂಬೈ, ಜನವರಿ 28: ರಿಪಬ್ಲಿಕ್ ಟಿವಿಯ ಎಡಿಟರ್ ಇನ್ ಚೀಫ್ ಅರ್ನಬ್ ಗೋಸ್ವಾಮಿ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡರು ಕಾಂಡಿವಾಲಿಯಲ್ಲಿನ ಸಮತಾ ನಗರ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದಾರೆ. ಬಾಂದ್ರಾ ಪೂರ್ವ ಭಾಗದ ನಿರ್ಮಲಾನಗರದಲ್ಲಿ ಮತ್ತೊಂದು ದೂರು ಸಲ್ಲಿಸಲಾಗಿದೆ.
ಬಾಲಕೋಟ್ನಲ್ಲಿ ಭಾರತೀಯ ವಾಯು ಪಡೆಯು 2019ರಲ್ಲಿ ನಡೆಸಿದ ವೈಮಾನಿಕ ದಾಳಿಯ ಬಗ್ಗೆ ಅರ್ನಬ್ ಗೋಸ್ವಾಮಿಗೆ ಮೊದಲೇ ತಿಳಿದಿತ್ತು ಎನ್ನುವುದು ಬಾರ್ಕ್ ಮಾಜಿ ಸಿಇಒ ಪಾರ್ಥೋ ದಾಸ್ಗುಪ್ತಾ ಮತ್ತು ಅರ್ನಬ್ ಗೋಸ್ವಾಮಿ ನಡುವಿನ ವಾಟ್ಸಾಪ್ ಚಾಟ್ಗಳ ವಿವರಗಳಿಂದ ಗೊತ್ತಾಗಿದೆ. ಹೀಗಾಗಿ ಅರ್ನಬ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮನವಿ ಮಾಡಲಾಗಿದೆ.
'ಒಎಸ್ಎದ ಸೆಕ್ಷನ್ 5ನ್ನು ಉಲ್ಲಂಘಿಸಿದ್ದಕ್ಕಾಗಿ ಅರ್ನಬ್ ಗೋಸ್ವಾಮಿ ಅವರನ್ನು ಕೂಡಲೇ ಬಂಧಿಸಿದ ವಿಚಾರಣೆಗೆ ಒಳಪಡಿಸುವಂತೆ ಕೋರಿ ಕಾಂಡಿವಾಲಿಯ ಸಮತಾನಗರ ಪೊಲೀಸ್ ಠಾಣೆಯಲ್ಲಿ ಎಸಿಪಿ ಮೋಹಿತೆ ಮತ್ತು ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ಹಾಕೆ ಅವರಿಗೆ ಅಧಿಕೃತವಾಗಿ ದೂರು ದಾಖಲಿಸಿದ್ದೇನೆ. ಬಾಲಕೋಟ್ ದಾಳಿಯ ಬಗ್ಗೆ ಅವರಿಗೆ ಯಾರು ಮಾಹಿತಿಗಳನ್ನು ನೀಡಿದ್ದರು ಎನ್ನುವುದನ್ನು ತಿಳಿಯಬೇಕಿದೆ' ಎಂದು ಕಾಂಗ್ರೆಸ್ ನಾಯಕ ಸಚಿನ್ ಸಾವಂತ್ ಹೇಳಿದ್ದಾರೆ.

ನಿರ್ಮಲ ನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಶಾಸಕ ಜೀಶಾನ್ ಸಿದ್ದಿಕಿ ಅವರು ಅರ್ನಬ್ ಗೋಸ್ವಾಮಿಯ ಬಂಧನಕ್ಕೆ ಆಗ್ರಹಿಸಿ ದೂರು ಸಲ್ಲಿಸಿದ್ದಾರೆ.
ನಕಲಿ ಟಿಆರ್ಪಿ ಹಗರಣಕ್ಕೆ ಸಂಬಂಧಿಸಿದಂತೆ ಬಾರ್ಕ್ ಸಂಸ್ಥೆಯ ಮಾಜಿ ಸಿಇಒ ಪಾರ್ಥೋ ದಾಸ್ಗುಪ್ತಾ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದ ತನಿಖೆ ವೇಳೆ ಪಾರ್ಥೋ ಹಾಗೂ ಅರ್ನಬ್ ಗೋಸ್ವಾಮಿ ನಡುವೆ ನಡೆದ ವಾಟ್ಸಾಪ್ ಚಾಟ್ ವಿವರಗಳು ಬಹಿರಂಗವಾಗಿದ್ದು, ಅದರಲ್ಲಿ ಬಾಲಕೋಟ್ ದಾಳಿಯ ಬಗ್ಗೆ ಅರ್ನಬ್ಗೆ ಮೊದಲೇ ಮಾಹಿತಿ ಇದ್ದಿದ್ದು ಬೆಳಕಿಗೆ ಬಂದಿದೆ. ಇದು ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿ ಬೆಳವಣಿಗೆ ಎಂದು ಕಾಂಗ್ರೆಸ್ ಆರೋಪಿಸಿದೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications