'ಸ್ಟೋರಿಯಲ್ಲಿ ಟ್ವಿಸ್ಟ್': ಎನ್ಸಿಪಿಯಿಂದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಉಚ್ಚಾಟನೆ?
ಮುಂಬೈ, ನವೆಂಬರ್ 23: ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್ಸಿಪಿ)ಯಿಂದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಉಚ್ಚಾಟನೆ ಮಾಡುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಒಂದೆಡೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಕಾಂಗ್ರೆಸ್, ಶಿವಸೇನಾ ಸೇರಿ ಸರ್ಕಾರ ರಚನೆ ಮಾಡುವ ಕುರಿತು ವಾರಗಳಿಂದ ಸಭೆ ನಡೆಸಿದ್ದು, ಶುಕ್ರವಾರ ರಾತ್ರಿವರೆಗೂ ಸಭೆ ನಡೆದಿತ್ತು.
ಅಂತಿಮದಲ್ಲಿ ಎನ್ಸಿಪಿ, ಶಿವಸೇನಾ ಸರ್ಕಾರ ರಚನೆ ಮಾಡಲು ಒಪ್ಪಿಗೆ ನೀಡಿತ್ತು ಆದರೆ ಕಾಂಗ್ರೆಸ್ ಒಂದು ದಿನದ ಕಾಲಾವಕಾಶವನ್ನು ಕೇಳಿತ್ತು. ಆದರೆ ರಾತ್ರೋರಾತ್ರಿ ಮಹಾರಾಷ್ಟ್ರದ ರಾಜಕೀಯ ಚಿತ್ರಣವೇ ಬದಲಾಗಿದೆ.
ದೇವೇಂದ್ರ ಫಡ್ನವಿಸ್ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರೆ, ಇನ್ನು ಶರದ್ ಪವಾರ್ ಸಂಬಂಧಿ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಅಜಿತ್ ಪವಾರ್ ಎನ್ಸಿಪಿಯಿಂದ ಉಚ್ಚಾಟನೆ?
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಎನ್ಸಿಪಿಯಿಂದ ಉಚ್ಚಾಟನೆ ಮಾಡುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿಬಂದಿವೆ. ಒಂದೊಮ್ಮೆ ಹಾಗೆ ನಡೆದರೆ ಮಹಾರಾಷ್ಟ್ರ ರಾಜಕೀಯದ ಚಿತ್ರಣ ಸಂಪೂರ್ಣವಾಗಿ ಬದಲಾಗುತ್ತದೆ. ಅಜಿತ್ ಪವಾರ್ ಗೆ ಬೆಂಬಲ ನೀಡಲು ಈಗಲೇ 22ಕ್ಕೂ ಹೆಚ್ಚು ಮಂದಿ ಶಾಸಕರು ಸಿದ್ಧರಿದ್ದಾರೆ, ಒಂದೊಮ್ಮೆ ಅಜಿತ್ ಪವಾರ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದರೆ ಶಾಸಕರು ಅವರಿಗೆ ಬೆಂಬಲ ನೀಡುವುದರಿಂದ ಹಿಂದೆ ಸರಿಯುವ ಎಲ್ಲಾ ಸಾಧ್ಯತೆಗಳೂ ಇವೆ.

ನವೆಂಬರ್ 30 ಬಹುಮತ ಸಾಬೀತು
ನವೆಂಬರ್ 30ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಹುಮತ ಸಾಬೀತುಪಡಿಸಲಿದ್ದಾರೆ. ನಾವು ಬಹುಮತ ಸಾಬೀತುಪಡಿಸುವುದರಲ್ಲಿ ಖಂಡಿತವಾಗಿಯೂ ಯಶಶ್ವಿಯಾಗುತ್ತೇವೆ ಎಂಬ ನಂಬಿಕೆ ನಮಗಿದೆ ಎಂದು ಸ್ವತಃ ಫಡ್ನವಿಸ್ ಹೇಳಿಕೊಂಡಿದ್ದಾರೆ.

ಮೂರು ಪಕ್ಷಕ್ಕಿಂತ, ದ್ವಿಪಕ್ಷ ಸರ್ಕಾರ ಉತ್ತಮ
ಮೂರು ಪಕ್ಷಗಳು ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡುವುದಕ್ಕಿಂತ ಎರಡೇ ಪಕ್ಷಗಳು ಸೇರಿ ಮೈತ್ರಿ ಮಾಡಿಕೊಂಡು ಸ್ಥಿರ ಸರ್ಕಾರ ರಚನೆ ಮಾಡುವುದು ಉತ್ತಮ. ಗೊಂದಲಗಳು ಕಡಿಮೆ, ರಾಜ್ಯದ ಜನತೆಯ ಹಿತದೃಷ್ಟಿಯಿಂದ ನಾವು ಸರ್ಕಾರ ರಚನೆ ಮಾಡಲು ಮುಂದಾದೆವು ಎಂದು ಅಜಿತ್ ಪವಾರ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಬಲಾಬಲ
ನಮ್ಮ ಮೈತ್ರಿಗೆ (ಬಿಜೆಪಿ-ಶಿವಸೇನಾ) ಸ್ಪಷ್ಟ ಬಹುಮತ ನೀಡಲಾಗಿತ್ತು. ಆದರೆ ಶೀವಸೇನೆಯು ಬೇರೆ ಪಕ್ಷಗಳ ಜೊತೆ ಮೈತ್ರಿಗೆ ಮುಂದಾಯಿತು. ಹೀಗಾಗಿ ರಾಷ್ಟ್ರಪತಿ ಆಡಳಿತ ಹೇರಿಕೆ ಆಗಿತ್ತು. ಆದರೆ ಈಗ ಸ್ಥಿರ ಸರ್ಕಾರ ರಚನೆ ಮಾಡಲೆಂದು ಅಜಿತ್ ಪವಾರ್ ಅವರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ನಾನು ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಫಟ್ನವಿಸ್ ಹೇಳಿದ್ದಾರೆ.ಮಹಾರಾಷ್ಟ್ರದಲ್ಲಿ ಪಕ್ಷಗಳ ಬಲಾಬಲ ಇಂತಿದೆ. ಬಿಜೆಪಿ-105, ಎನ್ಸಿಪಿ-54, ಶಿವಸೇನಾ- 56, ಕಾಂಗ್ರೆಸ್- 44, ಇತರೆ-29. ಸರ್ಕಾರ ರಚನೆ ಮಾಡಲು 145 ಶಾಸಕರ ಬಲ ಬೇಕಿದ್ದು. ಸರ್ಕಾರ ರಚಿಸಿರುವ ಬಿಜೆಪಿ-ಎನ್ಸಿಪಿ ಬಂಡಾಯ ಶಾಸಕರ ಬಳಿ ಈಗ 132 ಸಂಖ್ಯೆ ಇದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications