ನಿಮ್ಮ ಸಾಲಕ್ಕೂ, ನಮ್ಮ ಸರ್ಕಾರಕ್ಕೂ ಸಂಬಂಧವಿಲ್ಲ: 'ಮಹಾ' ಪೆಟ್ಟು!
ಮುಂಬೈ, ಡಿಸೆಂಬರ್.05: ಮಹಾರಾಷ್ಟ್ರದಲ್ಲಿ ರಚನೆಯಾಗಿರುವ ಮೈತ್ರಿ ಸರ್ಕಾರ ಬಿಜೆಪಿ ವಿರುದ್ಧ ಸಮರ ಸಾರಿದಂತೆ ಕಾಣುತ್ತಿದೆ. ಭಾರತೀಯ ಜನತಾ ಪಕ್ಷದ ಸಖ್ಯ ತೊರೆದ ಶಿವಸೇನೆ ಮಾಜಿ ದೋಸ್ತಿಗೆ ಮುಟ್ಟಿ ನೋಡಿಕೊಳ್ಳುವಂತೆ ಪೆಟ್ಟು ಕೊಡುತ್ತಿದೆ.
ಮಹಾರಾಷ್ಟ್ರದಲ್ಲಿ ಶಿವಸೇನೆ ನೀಡುತ್ತಿರುವ ಪೆಟ್ಟಿಗೆ ಬಿಜೆಪಿ ನಾಯಕರು ಪೆಚ್ಚಾಗಿ ಹೋಗಿದ್ದಾರೆ. ಈಗದೇ ಸಾಲಿಗೆ ಮತ್ತೊಂದು ಸೇರ್ಪಡೆಯಾಗಿದೆ. ಇಷ್ಟುದಿನ ಏಳು ಸಕ್ಕರೆ ಕಾರ್ಖಾನೆಗೆ ಸರ್ಕಾರದಿಂದ ನೀಡುತ್ತಿದ್ದ ಜಾಮೀನನ್ನು ವಾಪಸ್ ಪಡೆದುಕೊಳ್ಳಲಾಗಿದೆ.
ಹೌದು, ಖಾಸಗಿ ಬ್ಯಾಂಕ್ ನೀಡುತ್ತಿದ್ದ ಸಾಲಕ್ಕೆ ರಾಜ್ಯ ಸರ್ಕಾರವೇ ಜಾಮೀನು ಆಗಿತ್ತು. ಆದರೆ, ಇನ್ನುಮುಂದೆ ಹೀಗೆ ಆಗುವುದಿಲ್ಲ. ಏಳು ಕಾರ್ಖಾನೆಗಳಿಗೆ ನೀಡಿದ್ದ 300 ಕೋಟಿ ರೂಪಾಯಿ ಸಾಲದ ಮೇಲಿನ ಗ್ಯಾರಂಟಿಯನ್ನು ವಾಪಸ್ ಪಡೆಯಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ತೀರ್ಮಾನಿಸಿದೆ.

ನಿಮ್ಮ ಸಾಲಕ್ಕೂ ನಮ್ಮ ಸರ್ಕಾರಕ್ಕೂ ಸಂಬಂಧವಿಲ್ಲ!
ಮಹಾರಾಷ್ಟ್ರದ ಏಳು ಸಕ್ಕರೆ ಕಾರ್ಖಾನೆಗಳಿಗೆ ಈ ಹಿಂದೆ ಸರ್ಕಾರದಿಂದಲೇ 300 ಕೋಟಿ ರೂಪಾಯಿ ಜಾಮೀನು ನೀಡಲಾಗಿತ್ತು. ಆದರೆ, ಈಗ ಸರ್ಕಾರ ಬದಲಾಗಿದೆ. ಕಾಲವೂ ಬದಲಾಗಿದೆ. ಬಿಜೆಪಿ ಪಾಲಿಗೆ ಟೈಮ್ ಸರಿಯಾಗೇ ಕೈ ಕೊಟ್ಟಿದೆ. ಏಕೆಂದರೆ ಬಿಜೆಪಿ ನಾಯಕರ ಒಡೆತನದ ಸಕ್ಕರೆ ಕಾರ್ಖಾನೆಗಳಿಗೆ ನೀಡಿದ್ದ 300 ಕೋಟಿ ಸಾಲದ ಗ್ಯಾರಂಟಿಯನ್ನು ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಹಿಂಪಡೆದಿದೆ.

ಸರ್ಕಾರಕ್ಕೂ ಕಾರ್ಖಾನೆ ಸಾಲಕ್ಕೂ ಏನು ಲಿಂಕ್?
ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮದ ವತಿಯಿಂದ ಮಹಾರಾಷ್ಟ್ರದಲ್ಲಿ ಖಾಸಗಿ ಕಾರ್ಖಾನೆಗಳಿಗೆ ಸಾಲಸೌಲಭ್ಯ ಒದಗಿಸಲಾಗುತ್ತದೆ. ಹೀಗೆ ಸಾಲ ಪಡೆಯುವ ಕಾರ್ಖಾನೆಗಳಿಗೆ ಕೆಲವು ಷರತ್ತುಗಳ ಮೇಲೆ ಸರ್ಕಾರವೇ ಜಾಮೀನು ನೀಡುತ್ತದೆ. ಈ ರೀತಿಯಾಗಿ ಮಹಾರಾಷ್ಟ್ರದಲ್ಲಿ ಏಳು ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರದಿಂದ ಜಾಮೀನು ನೀಡಲಾಗಿತ್ತು. ಅದರ ಮೊತ್ತ ಬರೋಬ್ಬರಿ 300 ಕೋಟಿ ರೂಪಾಯಿ ಆಗಿತ್ತು. ಇನ್ನು, ಬಿಜೆಪಿಯ ಮಾಜಿ ಸಚಿವ ಪಂಕಜ್ ಮುಂಡೆ ಸೇರಿದ ಒಂದು ಕಾರ್ಖಾನೆ ಸೇರಿದಂತೆ ಸಾಲ ಪಡೆದ ಏಳು ಕಾರ್ಖಾನೆಗಳು ಕೂಡಾ ಬಿಜೆಪಿ ನಾಯಕರಿಗೆ ಸೇರಿದ್ದು ಎಂದು ತಿಳಿದು ಬಂದಿದೆ.

ರಾಜ್ಯ ಸಂಪುಟ ಸಭೆಯಲ್ಲಿ ಹೊರ ಬಿತ್ತು ಮಹತ್ವದ ತೀರ್ಮಾನ
ಡಿಸೆಂಬರ್.04ರಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಸಂಪುಟ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಾಯಕರ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ನೀಡಿದ್ದ ಸಾಲದ ಮೇಲಿನ ಜಾಮೀನನ್ನು ವಾಪಸ್ ಪಡೆಯಲು ತೀರ್ಮಾನಿಸಲಾಯಿತು. ಇದರ ಜೊತೆಗೆ ಹಿಂದಿನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರದಲ್ಲಿ ತೆಗೆದುಕೊಂಡ 34 ನಿರ್ಣಯಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು ಎಂದು ತಿಳಿದು ಬಂದಿದೆ.

ಸರ್ಕಾರ ಕಾರ್ಖಾನೆಗೆ ಜಾಮೀನು ನೀಡಿದ್ದು ಯಾವಾಗ?
ಇನ್ನು, ಏಳು ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರದಿಂದ ಜಾಮೀನು ಸಿಕ್ಕು ಬಹಳ ತಿಂಗಳುಗಳೂ ಕೂಡಾ ಕಳೆದಿಲ್ಲ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಅಂದರೆ ಕಳೆದ ಸೆಪ್ಟೆಂಬರ್-2019ರ ವೇಳೆಗೆ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರದಿಂದ ಬಿಜೆಪಿಯ ಏಳು ನಾಯಕರ ಸಕ್ಕರೆ ಕಾರ್ಖಾನೆಗೆ ಜಾಮೀನು ನೀಡಲಾಗಿತ್ತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications