ಸಿನಿಮಾ, ಧಾರಾವಾಹಿ ಶೂಟಿಂಗ್ಗೆ ಮಹಾರಾಷ್ಟ್ರ ಸರ್ಕಾರ ಅನುಮತಿ
ಮುಂಬೈ, ಜೂನ್ 01: ಮಹಾರಾಷ್ಟ್ರ ಸರ್ಕಾರ ಸಿನಿಮಾ, ಧಾರಾವಾಹಿ ಹಾಗೂ ವೆಬ್ ಸೀರಿಸ್ ಚಿತ್ರೀಕರಣಕ್ಕೆ ಅವಕಾಶ ನೀಡಿದೆ. ನಿನ್ನೆ ಸಂಜೆ ಮಹಾರಾಷ್ಟ್ರ ಸರ್ಕಾರ ಸಿನಿಮಾ, ಧಾರಾವಾಹಿ ಚಿತ್ರೀಕರಣದ ಮೇಲಿದ್ದ ನಿರ್ಬಂಧವನ್ನು ವಾಪಸ್ ಪಡೆದುಕೊಂಡಿದೆ.
ಕೊರೊನಾ ಲಾಕ್ಡೌನ್ನಿಂದ ಇಡೀ ಭಾರತದಲ್ಲಿ ಸಿನಿಮಾ ಹಾಗೂ ಧಾರಾವಾಹಿಗಳ ಚಿತ್ರೀಕರಣ ಬಂದ್ ಆಗಿತ್ತು. ಆದರೆ, ಈಗ ರಾಜ್ಯ ಸರ್ಕಾರಗಳು ಮತ್ತೆ ಸಿನಿಮಾ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿವೆ. ಮಹಾರಾಷ್ಟ್ರ ಸರ್ಕಾರ ಸಹ ಚಿತ್ರೀಕರಣಕ್ಕೆ ಅನುಮತಿ ನೀಡಿದೆ.
ಆದರೆ, ಚಿತ್ರೀಕರಣಕ್ಕಾಗಿ ಜಿಲ್ಲಾಡಳಿತದಿಂದ ಅನುಮತಿ ಪಡೆಯಬೇಕಾಗಿದೆ. ಜಿಲ್ಲಾಡಳಿತ ಅನುಮತಿ ನೀಡಿದ ಸ್ಥಳದಲ್ಲಿ ಮಾತ್ರ ಚಿತ್ರೀಕರಣ ಮಾಡಬಹುದಾಗಿದೆ. ಚಿತ್ರೀಕರಣದ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಸಿನಿಮಾ ಶೂಟಿಂಗ್ನಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಕಷ್ಟವಾಗಿದ್ದರೂ, ಇದು ಪಾಲಿಸಲೇಬೇಕಾದ ನಿಯಮವಾಗಿದೆ.

ಲಾಕ್ಡೌನ್ನಿಂದ ಮಾರ್ಚ್ 19 ರಿಂದ ಸುಮಾರು 70 ಹಿಂದಿ, 40 ಮರಾಠಿ ಸಿನಿಮಾಗಳು ಹಾಗೂ 10 ವೆಬ್ ಸರಣಿಗಳ ಚಿತ್ರೀಕರಣ ಸ್ಥಗಿತಗೊಂಡಿದೆ. ಹೀಗಾಗಿ, ಮೇ ತಿಂಗಳ ಪ್ರಾರಂಭದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಶೂಟಿಂಗ್ ಕೆಲಸ ಪುನರಾರಂಭಿಸಲು ಅನುಮತಿ ನೀಡುವಂತೆ ಒತ್ತಾಯಿಸಲಾಗಿತ್ತು.
ಅಲ್ಲದೆ, ಶೂಟಿಂಗ್ ನಿಂತ ಕಾರಣ ಅದನ್ನೇ ನಂಬಿಕೊಂಡ ನೂರಾರೂ ಕುಟುಂಬಗಳು ಸಂಕಷ್ಟದಲ್ಲಿವೆ. ಇತ್ತೀಚೆಗೆ, 'ಕ್ರೈಮ್ ಪೆಟ್ರೋಲ್' ಕಾರ್ಯಕ್ರಮ ಮಾಡಿದ ಕಿರುತೆರೆ ನಟಿ ಪ್ರೇಕ್ಷಾ ಮೆಹ್ತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಾಕ್ ಡೌನ್ ನಂತರ ಕೆಲಸ ಸಿಗದ ಕಾರಣ, ಅದೇ ಚಿಂತೆಯಲ್ಲಿ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಅಂದಹಾಗೆ, ಸರ್ಕಾರ ಚಿತ್ರೀಕರಣಕ್ಕೆ ಅವಕಾಶ ನೀಡಿದ್ದರೂ, ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ಮಾಡಲು ಜಿಲ್ಲಾಧಿಕಾರಿಯಿಂದ ಅನುಮತಿ ಅಗತ್ಯವಾಗಿದೆ.
-
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Aditya Dhar: ರಣವೀರ್ ಸಿಂಗ್ ಹಿಂದಿಕ್ಕಿ IMDb ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ 'ಧುರಂಧರ್ 2' ನಿರ್ದೇಶಕ ಆದಿತ್ಯ ಧರ್ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications