ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ ಸರ್ಕಾರದ ಲಾಕ್‌ಡೌನ್ ಕ್ರಮ ಸ್ವಾಗತಿಸಿದ ವಿಪಕ್ಷ ಬಿಜೆಪಿ

|
Google Oneindia Kannada News

ಮುಂಬೈ, ಏಪ್ರಿಲ್ 5: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾಗಶಃ ಲಾಕ್​ಡೌನ್ ಮಾಡಲು ಉದ್ಧವ್ ಠಾಕ್ರೆ ಸರ್ಕಾರ ನಿರ್ಧರಿಸಿದೆ.

ಸೋಮವಾರ (ಏಪ್ರಿಲ್ 5) ದಿಂದ ಸಂಜೆ 8 ಗಂಟೆಯಿಂದ ಬೆಳಿಗ್ಗೆ 7 ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ. ವಾರದ ಕೊನೆಯಲ್ಲಿ ಅಂದರೆ ಭಾನುವಾರ ಸಂಪೂರ್ಣ ಲಾಕ್​​ಡೌನ್​ ಇರಲಿದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಲಾಕ್‌ಡೌನ್ ಭೀತಿ; ಮತ್ತೆ ಊರಿನತ್ತ ಗಂಟುಮೂಟೆ ಕಟ್ಟುತ್ತಿರುವ ಕಾರ್ಮಿಕರುಲಾಕ್‌ಡೌನ್ ಭೀತಿ; ಮತ್ತೆ ಊರಿನತ್ತ ಗಂಟುಮೂಟೆ ಕಟ್ಟುತ್ತಿರುವ ಕಾರ್ಮಿಕರು

ಅಲ್ಲದೇ ಇನ್ನೊಂದು ವಾರ ನೋಡಿಕೊಂಡು ಸಂಪೂರ್ಣ ಲಾಕ್​ಡೌನ್​ ಮಾಡಬೇಕೋ ಬೇಡವೋ ಎಂದು ತೀರ್ಮಾನಿಸಲಾಗುವುದು ಎಂದು ಮಹಾ ಸಿಎಂ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.

Maharashtra Government Has Decided To Lockdown: BJP Welcomes

ಸಿಎಂ ಉದ್ಧವ್ ಠಾಕ್ರೆ ಅವರ ಲಾಕ್​ಡೌನ್ ನಿರ್ಧಾರವನ್ನು ಸ್ವಾಗತಿಸಿರುವ ಮಹಾರಾಷ್ಟ್ರದ ವಿರೋಧ ಪಕ್ಷ ಬಿಜೆಪಿ, ಲಾಕ್​ಡೌನ್​​ನಲ್ಲಿ ಬಡವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದೆ.

ಈ ಕುರಿತು ಮಾತನಾಡಿರುವ ಮಹಾರಾಷ್ಟ್ರ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು, ಹೆಚ್ಚುತ್ತಿರುವ ವೈರಸ್ ತಡೆಗೆ ಲಾಕ್​ಡೌನ್ ನಿರ್ಧಾರ ಉತ್ತಮ. ಆದರೆ, ಲಾಕ್​ಡೌನ್​ನಿಂದ ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ತೊಂದರೆ ಆಗಬಾರದು ಎಂದು ಎಚ್ಚರಿಸಿದ್ದಾರೆ.

English summary
The Uddhav Thackeray government has decided to Lockdown in the wake of the widespread Coronavirus infection in Maharashtra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X