ಏಕನಾಥ್ ಶಿಂಧೆ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದ ಆದಿತ್ಯ ಠಾಕ್ರೆ
ಔರಂಗಾಬಾದ್, ಜುಲೈ22: ಶಿವಸೇನಾ ನಾಯಕ ಆದಿತ್ಯ ಠಾಕ್ರೆ ಶುಕ್ರವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು, ಬಿಜೆಪಿ-ಏಕನಾಥ್ ಶಿಂಧೆ ಮೈತ್ರಿ ಸರ್ಕಾರವು ಅಸಾಂವಿಧಾನಿಕ ಮತ್ತು ರಾಕ್ಷಸ ಮಹತ್ವಾಕಾಂಕ್ಷೆಯಿಂದ ರಚನೆಯಾಗಿದೆ ಎಂದು ಆದಿತ್ಯ ಠಾಕ್ರೆ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
"ರಾಕ್ಷಸ ಮಹತ್ವಾಕಾಂಕ್ಷೆಯಿಂದ ರಚನೆಯಾದ ಈ ಸರ್ಕಾರವು ಅಸಾಂವಿಧಾನಿಕ ಮತ್ತು ಕಾನೂನುಬಾಹಿರವಾಗಿದೆ. ಇದು ತಾತ್ಕಾಲಿಕ ಸರ್ಕಾರವಾಗಿದ್ದು ಅತಿ ಶೀಘ್ರದಲ್ಲೇ ಪತನಗೊಳ್ಳುತ್ತದೆ" ಎಂದು ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ಔರಂಗಾಬಾದ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ.
"ಏಕನಾಥ್ ಶಿಂಧೆ ಬಣದ ಶಾಸಕರು ಮಾಡಿದ್ದು ಮಾನವೀಯತೆಗೆ ವಿರುದ್ಧವಾಗಿದೆ. ಶಿವಸೇನೆಯ ನಾಯಕ ಉದ್ಧವ್ ಠಾಕ್ರೆ ಕೊರೊನಾ ವೈರಸ್ ಸೋಂಕಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದಾಗ ಬಂಡಾಯ ಶಾಸಕರು ಸೂರತ್ಗೆ ಹೋಗಿದ್ದರು" ಎಂದು ಶಿಂಧೆ ಬಣದ ಶಾಸಕರ ವಿರುದ್ಧ ಹರಿಹಾಯ್ದರು.

ತನ್ನ ತಂದೆ ಉದ್ಧವ್ ಠಾಕ್ರೆ ನೇತೃತ್ವದ ಹಿಂದಿನ ಮಹಾ ವಿಕಾಸ್ ಅಘಾಡಿ ಸರ್ಕಾರವು ಔರಂಗಾಬಾದ್ ಅನ್ನು ಸಂಭಾಜಿ ನಗರ ಎಂದು ಮರುನಾಮಕರಣ ಮಾಡುವ ಪ್ರಕ್ರಿಯೆಗೆ ತಡೆ ನೀಡುವ ನಿರ್ಧಾರದ ಬಗ್ಗೆ ಆದಿತ್ಯ ಠಾಕ್ರೆ ಶಿಂಧೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಂಡಾಯ ಶಾಸಕರು ವಾಪಸ್ ಬಂದರೆ ಸ್ವಾಗತಿಸುತ್ತೇವೆ
ಬಿಟ್ಟು ಹೋಗಿರುವ ಶಾಸಕರಿಗೆ ಮಾತೋಶ್ರೀಯ ಬಾಗಿಲು ತೆರೆದಿರುತ್ತದೆ. ಚುನಾವಣೆಯಲ್ಲಿ ಜನರೇ ಯಾವುದು ಸರಿ, ತಪ್ಪು ಎಂದು ನಿರ್ಧರಿಸಲಿ ಎಂದು ಬಂಡಾಯ ಶಾಸಕರ ಕುರಿತು ಹೇಳಿಕೆ ನೀಡಿದರು.
ಆದಿತ್ಯ ಠಾಕ್ರೆ ಮತ್ತೊಮ್ಮೆ ಪಕ್ಷಾಂತರಿಗಳನ್ನು 'ದೇಶದ್ರೋಹಿಗಳು' ಎಂದು ಕರೆದಿದ್ದರು. ಪಕ್ಷವನ್ನು ತೊರೆದವರು ವಾಪಸ್ ಶಿವಸೇನೆಗೆ ಬರಲು ಬಯಸಿದರೆ ಸ್ವಾಗತ ಎಂದು ಹೇಳಿದ ಒಂದು ದಿನದ ನಂತರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆದಿತ್ಯ ಠಾಕ್ರೆ ಗುರುವಾರ ಬಂಡಾಯ ಶಾಸಕರ ಬಗ್ಗೆ ಹೇಳಿಕೆ ನೀಡುವ ಸಂದರ್ಭದಲ್ಲಿ, "ಬಿಟ್ಟು ಹೋದ ಶಾಸಕರು ದೇಶ್ರೋಹಿಗಳು, ನಾವು ಅವರನ್ನು ನಂಬಿ ಅಪ್ಪಿಕೊಂಡಿದ್ದೆವು ಆದರೆ ಅವರು ನಮ್ಮ ಬೆನ್ನಿಗೆ ಚೂರಿ ಹಾಕಿದರು. ಶಾಸಕರ ನಡೆಯಿಂದ ನಮಗೆ ತೀವ್ರವಾದ ನೋವಾಗಿದೆ. ಅವರು ಪಕ್ಷಕ್ಕೆ ಮರಳಿ ಬಂದರೆ ಸ್ವಾಗತಿಸುತ್ತೇವೆ" ಎಂದು ಹೇಳಿದ್ದರು.

ಉದ್ಧವ್ ಠಾಕ್ರೆ ಸರ್ಕಾರ ಪತನಗೊಳಿಸಿದ್ದ ಶಿಂಧೆ ಬಣ
ಉದ್ಧವ್ ಠಾಕ್ರೆ ನಾಯಕತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ದಂಗೆಯಿದ್ದಿದ್ದ ಏಕನಾಥ್ ಶಿಂಧೆ ನೇತೃತ್ವದ 40 ಶಾಸಕರು ಮಹಾ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದರು. ಶಾಸಕರ ವಿಶ್ವಾಸ ಕಳೆದುಕೊಂಡ ಉದ್ಧವ್ ಠಾಕ್ರೆ ಜೂನ್ 29ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರ ಪರಂಪರೆಯನ್ನು ಪ್ರತಿಪಾದಿಸಲು ಸರ್ಕಾರ ಬೀಳಿಸಿದ್ದು ಬಿಜೆಪಿ ಜೊತೆ ಕೈ ಜೋಡಿಸಿರುವುದಾಗಿ ಏಕನಾಥ್ ಶಿಂಧೆ ಬಣ ಹೇಳಿಕೊಂಡಿದೆ. ತಾವೇ ನಿಜವಾದ ಶಿವಸೇನೆ ಎಂದು ಶಿಂಧೆ ಬಣ ವಾದಿಸಿದೆ. ಮುಖ್ಯಮಂತ್ರಿಗಳ ಬಣವು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಪಕ್ಷದ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಅದಕ್ಕೆ ನಿಗದಿಪಡಿಸುವಂತೆ ಕೋರಿದೆ ಎಂದು ಪಿಟಿಐ ವರದಿ ಮಾಡಿದೆ.
ಚುನಾವಣಾ ಆಯೋಗಕ್ಕೆ ನೀಡಿದ ಸಂವಹನದಲ್ಲಿ, ಶಿಂಧೆ ಬಣವು ನಿಜವಾದ ಶಿವಸೇನೆ ಎಂದು ಹೇಳಿಕೊಂಡಿದೆ ಮತ್ತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮತ್ತು ಮಹಾರಾಷ್ಟ್ರ ಅಸೆಂಬ್ಲಿ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ನೀಡಿದ ಮಾನ್ಯತೆಯನ್ನು ಉಲ್ಲೇಖಿಸಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications