ಶಿವಸೇನಾಗೆ ಕಾಲಾವಕಾಶ ನೀಡಲು ರಾಜ್ಯಪಾಲರ ನಕಾರ
ಮುಂಬೈ, ನವೆಂಬರ್ 11: ಶಿವಸೇನಾಗೆ ಎನ್ಸಿಪಿ ಮತ್ತು ಕಾಂಗ್ರೆಸ್ ಬೆಂಬಲ ನೀಡಲಿದ್ದು, ಕೊನೆಗೂ ಸರ್ಕಾರ ರಚನೆಯ ಬಿಕ್ಕಟ್ಟು ಕೊನೆಯಾಗಲಿದೆ ಎಂಬ ಜನರ ನಂಬಿಕೆ ಹುಸಿಯಾಗುವ ಲಕ್ಷಣಗಳು ಕಂಡುಬರುತ್ತಿವೆ. ಅತ್ತ ಶಿವಸೇನಾ-ಎನ್ಸಿಪಿ ಸಮ್ಮಿಶ್ರ ಸರ್ಕಾರಕ್ಕೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡಲಿದೆ ಎಂದು ಹೇಳಲಾಗಿತ್ತು. ಆದರೆ ಕಾಂಗ್ರೆಸ್ ಅದನ್ನು ಇನ್ನೂ ತೀರ್ಮಾನಿಸಿಲ್ಲ ಎಂದು ಹೇಳುವ ಮೂಲಕ ಬಿಕ್ಕಟ್ಟು ಮುಂದುವರಿದಿದೆ.
ಇತ್ತ ಕಾಂಗ್ರೆಸ್ ಬಾಹ್ಯ ಬೆಂಬಲ ದೊರೆಯುವವರೆಗೆ ಕಾಯಬೇಕಿರುವುದರಿಂದ ರಾಜ್ಯಪಾಲರ ಬಳಿ 48 ಗಂಟೆಗಳ ಕಾಲ ಸಮಯಾವಕಾಶ ಕೇಳಿದ್ದ ಶಿವಸೇನಾಗೆ ನಿರಾಸೆಯಾಗಿದೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಲು ನೀಡಿದ್ದ ಸೋಮವಾರ ಸಂಜೆ 7.30ರ ಗಡುವು ದಾಟಿದೆ. ಹೀಗಾಗಿ ಸರ್ಕಾರ ರಚನೆಗೆ ಸರ್ಕಸ್ ನಡೆಸಿದ್ದ ಶಿವಸೇನಾ ಪ್ರಯತ್ನ ನೀರಿನಲ್ಲಿ ಮಾಡಿದ ಹೋಮದಂತಾಗುವ ಸೂಚನೆ ದೊರೆತಿದೆ.
ಮಹಾರಾಷ್ಟ್ರದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ತಲೆದೋರಿದರೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಸಾಧ್ಯತೆ ಇದೆ. ಕಡೆಪಕ್ಷ 24 ಗಂಟೆಗಳ ಹೆಚ್ಚುವರಿ ಸಮಯ ನೀಡಲು ಸಹ ರಾಜ್ಯಪಾಲರು ನಿರಾಕರಿಸಿರುವುದು ಶಿವಸೇನಾಗೆ ತಲೆನೋವಾಗಿ ಪರಿಣಮಿಸಿದೆ.

ಶಿವಸೇನಾದ ನಾಯಕರ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಆಸಕ್ತಿ ಪ್ರದರ್ಶಿಸಿತು. ಆದರೆ ಉಳಿದ ಪಕ್ಷಗಳ ಬೆಂಬಲವಿರುವ ಪತ್ರ ನೀಡುವಲ್ಲಿ ವಿಫಲವಾಯಿತು.
ರಾಜ್ಯಪಾಲರ ಭೇಟಿಯ ಬಳಿಕ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವಸೇನಾ ಶಾಸಕ ಆದಿತ್ಯ ಠಾಕ್ರೆ, 'ರಾಜ್ಯಪಾಲರು ಸರ್ಕಾರ ರಚನೆಯ ತಮ್ಮ ಹಕ್ಕು ಪ್ರತಿಪಾದನೆಯನ್ನು ತಿರಸ್ಕರಿಸಿಲ್ಲ. ಅದರ ಬದಲು ಸರ್ಕಾರ ರಚನೆಗೆ ಎರಡು ದಿನ ಹೆಚ್ಚುವರಿ ಸಮಯದ ಕೋರಿಕೆಯನ್ನು ನಿರಾಕರಿಸಿದ್ದಾರೆ' ಎಂದರು.
ನಾವು ಸರ್ಕಾರ ರಚನೆಗೆ ಆಸಕ್ತರಾಗಿದ್ದೇವೆ ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿದ್ದೇವೆ. ಎರಡು ದಿನಗಳ ಸಮಯ ಕೇಳಿದ್ದೆವು. ಆದರೆ ಅವರು ನೀಡಿಲ್ಲ. ನಿನ್ನೆ ಸಂಜೆ ಪಕ್ಷದ ಮುಖಂಡ ಏಕನಾಥ್ ಶಿಂಧೆ ಅವರಿಗೆ ರಾಜ್ಯಪಾಲರ ಪತ್ರ ಬಂದಿದ್ದು, 24 ಗಂಟೆಗಳ ಒಳಗೆ ಹಕ್ಕು ಮಂಡಿಸಲು ಸೂಚಿಸಿದ್ದರು. ನಾವು ಇತರೆ ಪಕ್ಷಗಳೊಂದಿಗೆ ಚರ್ಚಿಸಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಉತ್ಸುಕರಾಗಿರುವುದಾಗಿ ಹೇಳಿದ್ದೆವು. ನಮಗೆ ಇನ್ನೂ ಎರಡು ಪಕ್ಷಗಳ (ಎನ್ಸಿಪಿ ಮತ್ತು ಕಾಂಗ್ರೆಸ್) ಬೆಂಬಲದ ಪತ್ರಗಳು ದೊರೆತಿಲ್ಲ ಎಂದು ಹೇಳಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ











Click it and Unblock the Notifications