ವಲಸೆ ಕಾರ್ಮಿಕರು ಊರಿಗೆ ಹೋಗಲು ಮಹಾರಾಷ್ಟ್ರ ಸರ್ಕಾರ ಅನುಮತಿ
ಮುಂಬೈ, ಏಪ್ರಿಲ್ 17: ಮಹಾರಾಷ್ಟ್ರದ ಬಾಂದ್ರಾದಲ್ಲಿ ವಲಸೆ ಕಾರ್ಮಿಕರು ಲಾಕ್ಡೌನ್ ಉಲ್ಲಂಘನೆ ಮಾಡಿ ಬಸ್ ನಿಲ್ದಾಣ ಹಾಗು ರೈಲು ನಿಲ್ದಾಣದಲ್ಲಿ ಜಮಾಯಿಸಿದ್ದ ಘಟನೆಗೆ ಸಂಬಂಧಿಸಿದಂತೆ ಆರೋಪ-ಪ್ರತ್ಯಾರೋಪಗಳು ಇನ್ನು ನಿಂತಿಲ್ಲ.
ಮೈತ್ರಿ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕು ಎಂಬ ಉದ್ದೇಶದಿಂದ ಬಿಜೆಪಿ ಪೂರ್ವನಿಯೋಜಿತವಾಗಿ ಇಂತಹ ಕೆಲಸ ಮಾಡಿಸಿದೆ ಎಂದು ಆಡಳಿತ ಪಕ್ಷ ಟೀಕಿಸಿದೆ. ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ಸೋತಿದೆ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ.
ಈ ಮಧ್ಯೆ 'ಲಾಕ್ಡೌನ್ ಮುಗಿಯವರೆಗೂ ವಲಸೆ ಕಾರ್ಮಿಕರು ರಾಜ್ಯ ಬಿಟ್ಟು ಹೋಗುವಂತಿಲ್ಲ. ನಮ್ಮ ರಾಜ್ಯದಲ್ಲಿ ನೀವೇಲ್ಲ ಸುರಕ್ಷಿತವಾಗಿರುತ್ತೀರಾ. ಲಾಕ್ಡೌನ್ ಮುಗಿದ ಮೇಲೆ ನಿಮ್ಮನ್ನು ಕಳುಹಿಸಿಕೊಡುವ ಕೆಲಸ ಮಾಡುತ್ತೇವೆ' ಎಂದು ಸ್ವತಃ ಮುಖ್ಯಮಂತ್ರಿ ಭರವಸೆ ಕೊಟ್ಟಿದ್ದರು. ಊಟ, ಆಶ್ರಯ ನೀಡುತ್ತೇವೆ ಎಂದು ಭರವಸೆ ಕೊಟ್ಟರೂ ಇದ್ಯಾವುದಕ್ಕೂ ಬಗ್ಗದ ವಲಸೆ ಕಾರ್ಮಿಕರು, ನಡೆದುಕೊಂಡು ಸೈಕಲ್ಗಳಲ್ಲಿ ಊರಿನ ಕಡೆ ಸಾಗುತ್ತಿದ್ದಾರೆ.

ಇದೀಗ, ಮಹಾರಾಷ್ಟ್ರ ಸರ್ಕಾರ ತನ್ನ ನಿಲುವು ಬದಲಿಸಿಕೊಂಡಿದೆ. ಕಬ್ಬಿನ ಕಾರ್ಮಿಕರ ವಿಚಾರದಲ್ಲಿ ಠಾಕ್ರೆ ಸರ್ಕಾರ ಊರುಗಳಿಗೆ ಹೋಗಲು ಅನುಮತಿ ನೀಡಿದೆ.
Maharashtra Government allows over 1 lakh migrant sugarcane workers to go back to their villages after a medical checkup, amid coronavirus lockdown. All the arrangements for their travel and food etc to be done by the sugar factory owners.
— ANI (@ANI) April 17, 2020
ವೈದ್ಯಕೀಯ ಪರೀಕ್ಷೆ ಮುಗಿಸಿದ ಬಳಿಕ ಒಂದು ಲಕ್ಷ ವಲಸೆ ಕಬ್ಬಿನ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಬಹುದು ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ. ಈ ಕಾರ್ಮಿಕರಿಗೆ ಸಂಬಂಧಿಸಿದಂತೆ ಊಟದ ವ್ಯವಸ್ಥೆ ಮತ್ತು ಸಾರಿಗೆ ವ್ಯವಸ್ಥೆ ಎಲ್ಲವನ್ನು ಸಕ್ಕರೆ ಕಾರ್ಖಾನೆ ಮಾಲೀಕರು ನೋಡಿಕೊಳ್ಳುತ್ತಾರೆ ಎಂದು ತಿಳಿಸಿದೆ.
ಇದು ಸಾರ್ವಜನಿಕ ವಲಯದಲ್ಲಿ ವಿರೋಧಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ತಡೆಯುವಲ್ಲಿ, ಸರ್ಕಾರ ವಿಫಲವಾಗಿದೆ. ಈಗ ವಲಸೆ ಕಾರ್ಮಿಕರ ಸುರಕ್ಷಿತ ನೋಡಿಕೊಳ್ಳಲು ಸಾಧ್ಯವಾಗದೆ, ಅವರನ್ನು ಹೋಗಲು ಅನುಮತಿ ಕೊಟ್ಟಿದೆ ಎಂದು ಟೀಕಿಸುತ್ತಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications