'ಕೊರೊನಾ ಮುಕ್ತ ಗ್ರಾ.ಪಂ' ಸ್ಪರ್ಧೆ: ಗೆದ್ದ ಗ್ರಾಮಕ್ಕೆ 50 ಲಕ್ಷ ರೂ. ಬಹುಮಾನ
ಮುಂಬೈ, ಜೂನ್ 3: ಕೊರೊನಾ ಸೋಂಕು ಪ್ರಕರಣಗಳ ನಿಯಂತ್ರಣಕ್ಕೆ ಮಹಾರಾಷ್ಟ್ರ ಸರಕಾರ ಸ್ಪರ್ಧೆಯನ್ನು ಘೋಷಿಸಿದ್ದು, ಈ ಮೂಲಕ ಗ್ರಾಮಗಳಿಗೆ ಕೊರೊನಾ ಹರಡುವುದನ್ನು ತಡೆಯುವ ಕ್ರಮಗಳನ್ನು ಉತ್ತೇಜಿಸುವ ನಿರ್ಧರಿಸಿದೆ. ಅದಕ್ಕಾಗಿ "ಕೊರೊನಾ ಮುಕ್ತ ಗ್ರಾಮ' ಸ್ಪರ್ಧೆಯನ್ನು ಘೋಷಿಸಿದೆ.
ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಕೆಲವು ಗ್ರಾಮಗಳು ಮಾಡಿದ ಪ್ರಯತ್ನಗಳಿಗೆ ಶ್ಲಾಘನೆ ವ್ಯಕ್ತಪಡಿಸಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಇದೀಗ 'ಮೈ ವಿಲೇಜ್ ಕೊರೋನಾ ಫ್ರೀ' ಉಪಕ್ರಮವನ್ನು ಪ್ರಕಟಿಸಿದ್ದಾರೆ.
ಈ ಸ್ಪರ್ಧೆ ಮೂಲಕ ಪ್ರತಿ ಕಂದಾಯ ವಿಭಾಗದಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಉತ್ತಮ ಕೆಲಸ ಮಾಡುತ್ತಿರುವ ಮೂರು ಗ್ರಾಮ ಪಂಚಾಯಿತಿಗಳಿಗೆ ಬಹುಮಾನ ನೀಡಲಾಗುವುದು. ಪ್ರಥಮ ಬಹುಮಾನ 50 ಲಕ್ಷ ರೂ., ದ್ವಿತೀಯ ಸ್ಥಾನಕ್ಕೆ 25 ಲಕ್ಷ ರೂ. ಮತ್ತು ತೃತೀಯ ಸ್ಥಾನಕ್ಕೆ 15 ಲಕ್ಷ ರೂ. ನೀಡಲಾಗುವುದು. ಇನ್ನು ರಾಜ್ಯದಲ್ಲಿ ಆರು ಕಂದಾಯ ವಿಭಾಗಗಳಿದ್ದು, ಒಟ್ಟು 18 ಬಹುಮಾನಗಳು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಒಟ್ಟು ಬಹುಮಾನದ ಮೊತ್ತ 5.4 ಕೋಟಿ ರೂ. ಆಗಲಿದ್ದು, ಸ್ಪರ್ಧೆಯಲ್ಲಿ ಗೆಲ್ಲುವ ಹಳ್ಳಿಗಳಿಗೆ ಬಹುಮಾನದ ಮೊತ್ತವನ್ನು ಹಂಚಲಾಗುವುದು. ಇದನ್ನು ಆ ಗ್ರಾಮಗಳಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುತ್ತದೆ. 22 ಮಾನದಂಡಗಳ ಮೇಲೆ ತೀರ್ಪನ್ನು ನಿರ್ಣಯಿಸಲಾಗುವುದು. ಗ್ರಾಮಗಳನ್ನು ನಿರ್ಣಯಿಸಲು ಸಮಿತಿಯನ್ನು ರಚಿಸಲಾಗುವುದು ಎಂದು ಸಿಎಂ ಹೇಳಿದರು.

ಭಾನುವಾರ ವರ್ಚುವಲ್ ಭಾಷಣದಲ್ಲಿ ಸಿಎಂ ಉದ್ಧವ್ ಠಾಕ್ರೆ, ಸೋಲಾಪುರ ಜಿಲ್ಲೆಯ ಘಾಟ್ನೆ ಗ್ರಾಮವನ್ನು ಕೊರೊನಾ ವೈರಸ್ ಮುಕ್ತವಾಗಿಡಲು ಶ್ರಮಿಸುತ್ತಿರುವ ಮಹಾರಾಷ್ಟ್ರದ ಕಿರಿಯ ಸರಪಂಚ್ 21 ವರ್ಷದ ರುತುರಾಜ್ ದೇಶ್ಮುಖ್ ಮತ್ತು ಅವರ ಕಾರ್ಯಪಡೆಯನ್ನು ಶ್ಲಾಘಿಸಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications