ಫಿಟ್ನೆಸ್ ಪ್ರಿಯರಿಗೆ ಸಿಹಿ ಸುದ್ದಿ: ಜಿಮ್ ತೆರೆಯಲು ಸಜ್ಜಾದ ಮೊದಲ ರಾಜ್ಯ!
ಮುಂಬೈ, ಜುಲೈ 23: ಕೊರೊನಾ ವೈರಸ್ ಭೀತಿಯಿಂದ ಜಿಮ್ ಸೇರಿದಂತೆ ಫಿಟ್ನೆಸ್ ಕೇಂದ್ರಗಳು ಮುಚ್ಚಲ್ಪಟ್ಟಿದೆ. ದೇಶಾದ್ಯಂತ ಅನ್ಲಾಕ್ ಪ್ರಕ್ರಿಯೆ ಆರಂಭವಾಗಿದ್ದರೂ ಜಿಮ್ ತೆರೆಯಲು ಮಾತ್ರ ಅವಕಾಶ ಸಿಗುತ್ತಿಲ್ಲ. ಇದರಿಂದ ಫಿಟ್ನೆಸ್ ಪ್ರಿಯರು ಹಾಗೂ ಜಿಮ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Recommended Video
ಸಾಮಾಜಿಕ ಅಂತರ ಕಾಪಾಡಿಕೊಂಡು ಜಿಮ್ ಮಾಡುತ್ತೇವೆ, ಜಿಮ್ ತೆರೆಯಲು ಅನುಮತಿ ನೀಡಿ ಎಂದು ದೇಶಾದ್ಯಂತ ಮಾಲೀಕರು ಮನವಿ ಮಾಡುತ್ತಿದ್ದಾರೆ. ಆದರೆ, ಜಿಮ್ ಗೆ ಅನುಮತಿ ನೀಡಿಲ್ಲ.
ಇದೀಗ, ಜಿಮ್ ತೆರೆಯಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸಿದೆ. ಅನ್ಲಾಕ್3 ಆರಂಭದಿಂದ ನಗರಗಳಲ್ಲಿ ಜಿಮ್ ತೆರೆಯಲು ಅನುಮತಿ ನೀಡುವ ಕುರಿತು ಚರ್ಚಿಸಲಾಗ್ತಿದೆ ಎಂದು ಆರೋಗ್ಯ ಸಚಿವ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಈ ಕುರಿತು ಮಾತನಾಡಿದ್ದು ''ಆಗಸ್ಟ್ 1ರಿಂದ ಅನ್ಲಾಕ್-3 ಆರಂಭವಾಗಲಿದೆ. ಈ ಹಂತದಲ್ಲಿ ಫಿಟ್ನೆಸ್ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲು ಖುದ್ದು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದೇನೆ. ಜಿಮ್ಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಅನುಮತಿ ನೀಡುವ ಕುರಿತು ಸರ್ಕಾರ ಚಿಂತಿಸುತ್ತಿದೆ'' ಎಂದು ತಿಳಿಸಿದ್ದಾರೆ.
ಮಾರ್ಚ್ ತಿಂಗಳಲ್ಲಿ ಲಾಕ್ಡೌನ್ ಘೋಷಣೆ ಆದ ಸಂದರ್ಭದಿಂದ ಜಿಮ್ ಮುಚ್ಚಲಾಗಿದೆ. ಬಾಡಿಗೆ ಕಟ್ಟಲಾಗದೆ ಮಾಲೀಕರು ಕಷ್ಟ ಪಡುತ್ತಿದ್ದಾರೆ. ಜಿಮ್ ನಿಯಂತ್ರಣ ಮಾಡುವುದು ಕಷ್ಟ ಆಗಲಿದೆ ಎಂದು ಅಂಗಲಾಚಿದ್ದರು. ಸಾಲ ಮಾಡಿ ಜಿಮ್ ಉಪಕರಣಗಳನ್ನು ತೆಗೆದುಕೊಂಡಿರುವವರಿಗೆ ಇಎಂಐ ಕಟ್ಟಲಾಗದ ಸ್ಥಿತಿ ಬಂದಿದೆ. ಇಂತಹ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ ಜಿಮ್ ಗೆ ಅನುಮತಿ ನೀಡಲು ಮುಂದಾಗಿದೆ.

ಸರ್ಕಾರದ ನಿಯಮಗಳನ್ನು ಅನುಸರಿಸಿ ಜಿಮ್ ತೆರೆಯಲು ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಮಹಾರಾಷ್ಟ್ರದಲ್ಲಿ ಫಿಟ್ನೆಸ್ ಕೇಂದ್ರಕ್ಕೆ ಅನುಮತಿ ಸಿಕ್ಕರೆ, ಲಾಕ್ಡೌನ್ ಬಳಿಕ ದೇಶದಲ್ಲಿ ಜಿಮ್ ತೆರೆದ ಮೊದಲ ರಾಜ್ಯ ಎನಿಸಿಕೊಳ್ಳಲಿದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications