ಮಹಾರಾಷ್ಟ್ರದಲ್ಲಿ 5 ಲಕ್ಷ ಡೋಸ್ ಕೊರೊನಾ ಲಸಿಕೆ ವ್ಯರ್ಥ; ಜಾವ್ಡೇಕರ್
ಮುಂಬೈ, ಏಪ್ರಿಲ್ 08: ಮಹಾರಾಷ್ಟ್ರದಲ್ಲಿ 5 ಲಕ್ಷ ಡೋಸ್ ಕೊರೊನಾವೈರಸ್ ಲಸಿಕೆ ವ್ಯರ್ಥವಾಗಿದೆ. ಸರಿಯಾದ ರೀತಿಯಲ್ಲಿ ರಾಜ್ಯ ಸರ್ಕಾರ ಯೋಜನೆ ರೂಪಿಸಿಕೊಳ್ಳದಿರುವುದೇ ಮುಖ್ಯ ಕಾರಣ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ದೇಕರ್ ಆರೋಪಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಸಿಕೆ ವಿತರಣೆ ಕುರಿತಾದ ಎಲ್ಲ ಮಾಹಿತಿ ಪಡೆದುಕೊಂಡಿದ್ದೇನೆ ಎಂದರು. ಮಹಾರಾಷ್ಟ್ರ ಸರ್ಕಾರದ ಬಳಿ ಇನ್ನೂ 23 ಲಕ್ಷ ಡೋಸ್ ಲಸಿಕೆ ಬಾಕಿ ಉಳಿದಿದೆ ಎಂದು ತಿಳಿಸಿದರು.
ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಲಸಿಕೆಯ ಕೊರತೆ ಎದುರಾದ ಹಿನ್ನೆಲೆ ಹಲವು ಲಸಿಕೆ ವಿತರಣೆ ಕೇಂದ್ರಗಳನ್ನು ಮುಚ್ಚಲಾಗಿದೆ. ರಾಜ್ಯದಲ್ಲಿ ಕೇವಲ 14 ಲಕ್ಷ ಡೋಸ್ ಲಸಿಕೆ ಉಳಿದಿದ್ದು, ಮೂರು ದಿನಗಳಲ್ಲಿ ಈ ಲಸಿಕೆಯೂ ಖಾಲಿ ಆಗಲಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೊಪೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಮಹಾರಾಷ್ಟ್ರದಲ್ಲಿ ಲಸಿಕೆ ವಿತರಣೆ ಮತ್ತು ಸಂಗ್ರಹದ ಬಗ್ಗೆ ಮಾಹಿತಿ ಸಂಗ್ರಹಿಸಿದರು.

ಐದಾರು ದಿನಗಳಿಗೆ ಸಾಕಾಗುವಷ್ಟು ಲಸಿಕೆ ಸಂಗ್ರಹ:
ಮಹಾರಾಷ್ಟ್ರದಲ್ಲಿ 23 ಲಕ್ಷ ಡೋಸ್ ಕೊರೊನಾವೈರಸ್ ಲಸಿಕೆ ಇರುವುದರ ಬಗ್ಗೆ ಮೊದಲು ಸ್ಪಷ್ಟಪಡಿಸುತ್ತೇನೆ ಎಂದು ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದರು. ರಾಜ್ಯದಲ್ಲಿ ಇರುವ ಲಸಿಕೆಯು ಮುಂದಿನ ಐದಾರು ದಿನಗಳವರೆಗೂ ಸಾಕಾಗುತ್ತದೆ. ರಾಜ್ಯದ ಜಿಲ್ಲಾ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆ ವಿತರಣೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:
ರಾಜ್ಯದಲ್ಲಿ ಒಂದೇ ದಿನದಲ್ಲಿ 59,907 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 322 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದರೆ, 30,296 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 31,73,261 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 26,13,627 ಸೋಂಕಿತರು ಗುಣಮುಖರಾಗಿದ್ದು, 56,652 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರ ಹೊರತಾಗಿ 5,01,559 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications