ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಂಗನಾ ಬಗ್ಗೆ ವಿವಾದಿತ ಹೇಳಿಕೆ: ಮಹಾರಾಷ್ಟ್ರ ಗೃಹ ಸಚಿವರಿಗೆ ಬೆದರಿಕೆ ಕರೆ

|
Google Oneindia Kannada News

ಮುಂಬೈ, ಸೆಪ್ಟೆಂಬರ್ 09: ಬಾಲಿವುಡ್ ನಟಿ ಕಂಗನಾ ರಾಣಾವತ್ ವಿರುದ್ಧ ವಿವಾದಿತ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರಿಗೆ ಬೆದರಿಕೆ ಕರೆ ಬರಲು ಆರಂಭವಾಗಿದೆ.

ಗೃಹ ಸಚಿವರಿಗೆ ನಿನ್ನೆ ಮತ್ತು ಇನ್ನು ಆರೇಳು ಬೆದರಿಕೆ ಕರೆಗಳು ಬಂದಿವೆ. ಅದರಲ್ಲಿ ಒಂದು ಬಾರಿ ಕರೆ ಮಾಡಿದವರು ತನ್ನನ್ನು ಮೃತ್ಯುಂಜಯ್ ಗಾರ್ಗ್ ಎಂದು ಗುರುತಿಸಿಕೊಂಡಿದ್ದಾರೆ ಎಂದು ಗೃಹ ಸಚಿವರ ಆಪ್ತರು ತಿಳಿಸಿದ್ದಾರೆ.

ನಟಿ ಕಂಗನಾ ರಣಾವತ್ ಕಚೇರಿ ವಶಕ್ಕೆ ಪಡೆದ ಬಿಎಂಸಿ?: ಮಹಾರಾಷ್ಟ್ರ ಸರ್ಕಾರದ ಸೇಡಿನ ಕ್ರಮನಟಿ ಕಂಗನಾ ರಣಾವತ್ ಕಚೇರಿ ವಶಕ್ಕೆ ಪಡೆದ ಬಿಎಂಸಿ?: ಮಹಾರಾಷ್ಟ್ರ ಸರ್ಕಾರದ ಸೇಡಿನ ಕ್ರಮ

ಹಿಮಾಚಲ ಪ್ರದೇಶ ಮತ್ತು ಬೇರೆ ಕಡೆಗಳಿಂದ ಅನಾಮಧೇಯ ಸಂಖ್ಯೆಗಳಿಂದ ಅನಿಲ್ ದೇಶ್ ಮುಖ್ ಅವರಿಗೆ ನಿನ್ನೆ ರಾತ್ರಿ ಮತ್ತು ಇಂದು ಮುಂಜಾನೆ 6 ಗಂಟೆ ಹೊತ್ತಿಗೆ ಬೆದರಿಕೆ ಕರೆಗಳು ಬಂದಿದ್ದು, ನಟಿಯ ವಿವಾದಕ್ಕೆ ಸಂಬಂಧಿಸಿದ ವಿಷಯದಲ್ಲಿ ನೀವು ಮೂಗು ತೂರಿಸಬೇಡಿ ಎಂದು ಕರೆ ಮಾಡಿರುವ ವ್ಯಕ್ತಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

Maharashtra Home Minister Anil Deshmukh Again Receives Threat Calls

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಸಿಬಿಐ ನಡೆಸುತ್ತಿರುವುದರ ಮಧ್ಯೆ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ ಕಂಗನಾ ರಾಣಾವತ್ ತೀವ್ರ ಟೀಕೆ ಎದುರಿಸುತ್ತಿದ್ದಾರೆ.

ಈ ಮಧ್ಯೆ ಇಂದು ನಟಿ ಕಂಗನಾ ರಾಣಾವತ್ ಮುಂಬೈಗೆ ಆಗಮಿಸುತ್ತಿದ್ದು, ಇಂದು ಬೆಳಗ್ಗೆ ಹಿಮಾಚಲ ಪ್ರದೇಶದ ಪಮಿರ್ಪುರ್ ಜಿಲ್ಲೆಯಲ್ಲಿ ಕೊಥಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ಚಂಡೀಗಢ ಮೂಲಕವಾಗಿ ಮುಂಬೈಗೆ ತೆರಳಿದ್ದಾರೆ.

English summary
Maharashtra Home Minister Anil Deshmukh has again received threat calls over his stance in connection with the controversy involving actress Kangana Ranaut, sources close to him said on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X