ಮಹಾರಾಷ್ಟ್ರ ಕನ್ನಡ ಪತ್ರಕರ್ತರಿಂದ ಡೈರಿ ಡೈರೆಕ್ಟರಿ 2016
ಮುಂಬಯಿ, ಜನವರಿ 07 : ಮಹಾರಾಷ್ಟ್ರ ರಾಜ್ಯ ಸಚಿವಾಲಯದಲ್ಲಿ ಕನ್ನಡಿಗ ಪತ್ರಕರ್ತರ ಸಂಘ, ಮಹಾರಾಷ್ಟ್ರ ಸಂಸ್ಥೆಯು ಪ್ರಕಾಶಿಸಿರುವ ಚತುರ್ಥ 'ದಿನಚರಿ ಪುಸ್ತಕ-ಮಾಹಿತಿಸೂಚಿ ಕೈಪಿಡಿ-2016'(ಡೈರಿ-ಡಿರೆಕ್ಟರಿ)ಯನ್ನು ಬುಧವಾರ ಸಂಜೆ ಬಿಡುಗಡೆ ಗೊಳಿಸಲಾಯಿತು.
ಪ್ರಜಾಪ್ರಭುತ್ವದಲ್ಲಿ ಪ್ರತಿಯೋರ್ವ ಪ್ರಜೆಗೂ ತನ್ನ ಧರ್ಮ, ಭಾಷೆ, ಪ್ರಾಂತ್ಯ ಪ್ರಧಾನವಾಗಿದ್ದು, ಇವೆಲ್ಲಕ್ಕೂ ಮಿಗಿಲಾದದ್ದು ಮಾನವೀಯತೆ ಮತ್ತು ಭಾರತೀಯತೆ ಆಗಿದೆ ಎಂದು ಈ ಸಂದರ್ಭದಲ್ಲಿ ಮಹಾರಾಷ್ಟ್ರ ಸಾರ್ವಜನಿಕ ಕಾಮಗಾರಿ ಮತ್ತು ಟೆಕ್ಸ್ಟೈಲ್ ಖಾತೆ ಸಚಿವ ಚಂದ್ರಹಾಸ ಪಾಟೀಲ್ ಹೇಳಿದರು.
ಇವೆಲ್ಲವುದರ ಮಧ್ಯೆ ಸಾಮರಸ್ಯದ ಬದುಕನ್ನು ಬಾಳುತ್ತಾ ರಾಷ್ಟ್ರದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಹಿರಿದಾಗಿದೆ. ಪತ್ರಕರ್ತರ ಸಹಯೋಗ ನಮ್ಮೆಲ್ಲರ ಬಾಂಧವ್ಯದ ಬದುಕಿಗೆ ಬೆಸುಗೆಯಾಗಲಿ ಎಂದು ಮಹಾರಾಷ್ಟ್ರ ಮತ್ತು ಮಹಾರಾಷ್ಟ್ರ ಗಡಿ ಪ್ರದೇಶ ಉಸ್ತುವಾರಿ ಮಂತ್ರಿಯೂ ಆಗಿರುವ ಚಂದ್ರಹಾಸ ಪಾಟೀಲ್ ತಿಳಿಸಿದರು.

ಮಹಾರಾಷ್ಟ್ರ ರಾಜ್ಯಸರಕಾರದ ಮುಖ್ಯ ಕಾರ್ಯಾಲಯ (ಸಚಿವಾಲಯ)ದ ಮಂತ್ರಾಲಯ ಮತ್ತು ವಿಧಿ ಮಂಡಳ್ ವಾರ್ತಾಹಾರ್ ಸಂಘದ ಸಭಾಗೃಹದಲ್ಲಿ ಮಂತ್ರಾಲಯದ ಪ್ರಚಾರ ಸಹಾಯಕ ನಿರ್ದೇಶಕ ದೇವೇಂದ್ರ ಭುಜಬಲ್ ಡೈರಿ-ಡಿರೆಕ್ಟರಿ ವಿಧ್ಯುಕ್ತವಾಗಿ ಅನಾವರಣಗೊಳಿಸಿ ಶುಭಹಾರೈಸಿದರು.
ಮರಾಠಿ ಪತ್ರಿಕಾರಿಕಾ ಜನಕ ದರ್ಪಣ್ಕರ್ ಆಚಾರ್ಯ ಬಾಳ ಶಾಸ್ತ್ರಿ ಜಂಭೇಕರ್ ಅವರ ಪ್ರತಿಮೆಗೆ ಪುಷ್ಪವೃಷ್ಟಿಗೈದು ದೇವೇಂದ್ರ ಭುಜಬಲ್ ಅವರು ಮಹಾರಾಷ್ಟ್ರದ ಮಂತ್ರಾಲಯದಲ್ಲಿ ಪತ್ರಕಾರ್ ದಿವಸ್ ಸಂಭ್ರಮಕ್ಕೆ ಚಾಲನೆ ನೀಡಿದರು.
ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಮಹಾರಾಷ್ಟ್ರ ರಾಜ್ಯ ಸಚಿವಾಲಯದ ಮಂತ್ರಾಲಯ ಮತ್ತು ವಿಧಿ ಮಂಡಳ್ ವಾರ್ತಾಹಾರ್ ಸಂಘದ ಅಧ್ಯಕ್ಷ ಚಂದನ್ ಶಿರ್ವಾಳೆ, ಕಾರ್ಯದರ್ಶಿ ಚಂದ್ರಕಾಂತ್ ಶಿಂಧೆ, ಸ್ಟೇಟ್ ರಿಲೀಜ್ಹ್ ಫೌಂಡೇಶನ್ ಪುಣೆ ಇದರ ಅಧ್ಯಕ್ಷ, ರೇಖೀ ತಜ್ಞ ಅಶೋಕ್ ದೇಶ್ಮುಖ್ ಉಪಸ್ಥಿತರಿದ್ದರು.

ಕೈಪಿಡಿಯ ಸಂಪಾದಕ ಹಾಗೂ ಪತ್ರಕರ್ತರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ರೋನ್ಸ್ ಬಂಟ್ವಾಳ್, ಪತ್ರಕರ್ತರ ಭವನ ಸಮಿತಿ ಶಿವ ಎಂ.ಮೂಡಿಗೆರೆ, ಕಾರ್ಯಧ್ಯಕ್ಷ ಕ್ರೀಡಾ ಸಮಿತಿ ಕಾರ್ಯಧ್ಯಕ್ಷ ಜಯ ಸಿ.ಪೂಜಾರಿ, ಜೊತೆ ಕಾರ್ಯದರ್ಶಿ ಬಾಬು ಕೆ.ಬೆಳ್ಚಡ, ಕಾರ್ಯಕಾರಿ ಸಮಿತಿ ಸದಸ್ಯ ಶ್ಯಾಮ್ ಎಂ.ಹಂಧೆ ಹಾಜರಿದ್ದರು.
ಮಹಾರಾಷ್ಟ್ರ ಕನ್ನಡ ಪತ್ರಕರ್ತರಿಗೆಲ್ಲ ಒನ್ಇಂಡಿಯಾ ಕನ್ನಡದ ಹೊಸ ವರ್ಷದ ಹಾರ್ದಿಕ ಶುಭಾಶಯಗಳು.
-
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
SSLC: ಹಿಂದಿ ಪರೀಕ್ಷೆಯಲ್ಲಿ ಅಂಕ ಲೆಕ್ಕಕ್ಕೆ ಇಲ್ಲ: ವಿದ್ಯಾರ್ಥಿಗಳ ಹೊರೆ ಇಳಿಕೆ, ಸರ್ಕಾರದ ನಿರ್ಧಾರಕ್ಕೆ ಬೆಂಬಲ ಕೊಟ್ಟ ಕರವೇ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications