ಮಹಾರಾಷ್ಟ್ರ ಸ್ಥಳೀಯ ಚುನಾವಣೆಯಲ್ಲಿ ಮಹಾ ವಿಕಾಸ್ ಅಗಾಧಿಗೆ ವಿಜಯಮಾಲೆ
ಮುಂಬೈ, ಜನವರಿ 19: ಮಹಾರಾಷ್ಟ್ರದ 106 ಅರೆ-ನಗರ ಸ್ಥಳೀಯ ಸಂಸ್ಥೆಗಳು, ನಗರ ಪಂಚಾಯತ್ಗಳು ಅಥವಾ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶಗಳ ಸರ್ಕಾರಿ ಸಂಸ್ಥೆಗಳ ಚುನಾವಣಾ ಫಲಿತಾಂಶ ಬುಧವಾರ ಹೊರ ಬಿದ್ದಿದೆ.
ರಾಜ್ಯದಲ್ಲಿ ನಡೆದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಒಟ್ಟಾರೆ ಚಿತ್ರಣವನ್ನು ನೋಡಿದರೆ, ಶರದ್ ಪವಾರ್ ನೇತೃತ್ವದ ಎನ್ಸಿಪಿ 25 ಕ್ಷೇತ್ರಗಳಲ್ಲಿ, ಬಿಜೆಪಿ 24, ಕಾಂಗ್ರೆಸ್ 18 ಮತ್ತು ಶಿವಸೇನೆ 14ರಲ್ಲಿ ಅಧಿಕಾರದ ಗದ್ದುಗೆ ಹಿಡಿಯಲಿವೆ.
ಎನ್ಸಿಪಿ (ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ), ಕಾಂಗ್ರೆಸ್ ಮತ್ತು ಶಿವಸೇನೆ ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಗಾಧಿಯ ಭಾಗವಾಗಿದೆ. ಈ ಮೈತ್ರಿಕೂಟವು ಕ್ಷೇತ್ರಗಳಲ್ಲಿ ಜಂಟಿಯಾಗಿ ಮತ್ತು ಕೆಲವು ಕಡೆಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದರು. ಆ ಮೂಲಕ ಒಗ್ಗಟ್ಟಾಗಿ ಬಿಜೆಪಿಯನ್ನು ಸೋಲಿಸಲು ಅಣಿಯಾಗಿವೆ. ಈಗಾಗಲೇ ಅರ್ಧಕ್ಕಿಂತ ಹೆಚ್ಚು ಪಂಚಾಯತ್ಗಳನ್ನು ಗೆದ್ದುಕೊಂಡಿರುವುದು ಫಲಿತಾಂಶದಿಂದ ತಿಳಿದು ಬರುತ್ತಿದೆ.

ಅತಿದೊಡ್ಡ ಪಕ್ಷ ಎನಿಸಿರುವ ಬಿಜೆಪಿ:
ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಒಟ್ಟು 1,802 ಸ್ಥಾನಗಳಲ್ಲಿ 416 ಸ್ಥಾನಗಳನ್ನು ಗೆದ್ದುಕೊಂಡಿರುವ ಬಿಜೆಪಿ ಅತಿಹೆಚ್ಚು ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ ಪಕ್ಷವಾಗಿ ಹೊರಹೊಮ್ಮಿದೆ. "ಕಳೆದ 26 ತಿಂಗಳ ಕಾಲ ಅಧಿಕಾರದಿಂದ ಹೊರಗುಳಿದಿದ್ದರೂ, ಬಿಜೆಪಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಯಾವುದೇ ಸರ್ಕಾರದ ಬೆಂಬಲವಿಲ್ಲದೆ ನಾವು ಉತ್ತಮ ಫಲಿತಾಂಶಗಳನ್ನು ಪಡೆದುಕೊಂಡಿದ್ದೇವೆ," ಎಂದು ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.
ಮಹಾ ವಿಕಾಸ್ ಅಗಾಧಿಗೆ 976 ಸ್ಥಾನ:
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಗಾಡಿ ಸಮ್ಮಿಶ್ರ ಸರ್ಕಾರವು 57 ಅರೆನಗರ ಸ್ಥಳೀಯ ಸಂಸ್ಥೆಗಳನ್ನು ಗೆದ್ದಿದ್ದರೆ, ಭಾರತೀಯ ಜನತಾ ಪಕ್ಷವು 24 ಸ್ಥಾನಗಳನ್ನು ಗೆದ್ದುಕೊಂಡಿದೆ. ಮಹಾ ವಿಕಾಸ್ ಅಗಾಡಿ ಮೈತ್ರಿಕೂಟದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಕ್ಕಿವೆ ಎಂಬುದರ ಪಟ್ಟಿ ಇಲ್ಲಿದೆ ಓದಿ.
ಎನ್ಸಿಪಿ - 378 ಸ್ಥಾನ
ಶಿವಸೇನೆ - 301 ಸ್ಥಾನ
ಕಾಂಗ್ರೆಸ್ - 297 ಸ್ಥಾನ
ಒಬಿಸಿಗೆ ಶೇ.27ರಷ್ಟು ಮೀಸಲಾತಿಗೆ ತಡೆಯಾಜ್ಞೆ:
ಕಳೆದ ಡಿಸೆಂಬರ್ 15ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗೆ ಶೇಕಡಾ 27ರಷ್ಟು ಮೀಸಲಾತಿಗೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ವಾಪಸ್ ಪಡೆದುಕೊಳ್ಳುವಂತೆ ಮಹಾರಾಷ್ಟ್ರ ಸರ್ಕಾರ ಕಳೆದ ತಿಂಗಳು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿತ್ತು. ಒಬಿಸಿಗೆ ನೀಡಲಾಗಿದ್ದ ಶೇ 27ರಷ್ಟು ಮೀಸಲಾತಿಯನ್ನು ಸಾಮಾನ್ಯ ವರ್ಗಕ್ಕೆ ಹಿಂತಿರುಗಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.
Recommended Video
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications