ಶಿವಸೇನಾ-ಬಿಜೆಪಿ ಕಚ್ಚಾಟ ಅಂತ್ಯ? ಮತ್ತೆ ಒಂದಾಗಲಿದ್ದಾರಾ ಹಳೆ ಮಿತ್ರರು?
ಮುಂಬೈ, ಜನವರಿ 22: ಒಂದು ಕಾಲದ ಮಿತ್ರಪಕ್ಷಗಳಾದ ಶಿವ ಸೇನಾ ಮತ್ತು ಬಿಜೆಪಿ ನಡುವಿನ ಕಿತ್ತಾಟ ಅಂತ್ಯವಾಗಲಿದೆಯೇ? ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಎರಡೂ ಪಕ್ಷಗಳು ಮತ್ತೆ ಹೊಂದಾಣಿಕೆ ಮಾಡಿಕೊಂಡು ಸೀಟು ಹಂಚಿಕೊಳ್ಳುವ ಸೂಚನೆಗಳು ಕಂಡುಬಂದಿವೆ.
ಮುಂಬೈನಲ್ಲಿ ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಸ್ಮರಣಾರ್ಥ ಸ್ಮಾರಕ ನಿರ್ಮಾಣಕ್ಕೆ ಮಹಾರಾಷ್ಟ್ರ ಸರ್ಕಾರ 100 ಕೋಟಿ ರೂ. ಮಂಜೂರು ಮಾಡಲು ನಿರ್ಧರಿಸಿದ್ದು, ಈ ಕುರಿತ ಅನುಮಾನಗಳನ್ನು ಹುಟ್ಟುಹಾಕಿದೆ.
ದಾದರ್ ಚೌಪಟ್ಟಿಯಲ್ಲಿ ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ಮೇಯರ್ ಬಂಗಲೆಯಲ್ಲಿನ ಬಾಳ್ ಠಾಕ್ರೆ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲು ಮೋದಿ ಅವರನ್ನು ಆಹ್ವಾನಿಸುವ ನಿರೀಕ್ಷೆಯಿದೆ.

ಸ್ಮಾರಕಕ್ಕೆ ಭೂಮಿ ಹಸ್ತಾಂತರ ಮಾಡುವ ಸಂಬಂಧ ಬುಧವಾರ ಸಣ್ಣ ಕಾರ್ಯಕ್ರವಿದ್ದು ಇದರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ವೇದಿಕೆ ಹಂಚಿಕೊಳ್ಳಲಿದ್ದಾರೆ.












Click it and Unblock the Notifications