ಮಹಾರಾಷ್ಟ್ರದಲ್ಲಿ NCPಗೆ ಭಾರೀ ಆಘಾತ: ಶಿವಸೇನೆ ಸೇರಿದ ಪಕ್ಷಾಧ್ಯಕ್ಷ
ಮುಂಬೈ, ಜುಲೈ 25: ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನ ಬಾಕಿ ಇರುವ ಹೊತ್ತಲ್ಲಿ, ನ್ಯಾಶ್ನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಆಘಾತ ಎದುರಾಗಿದೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಚಿನ್ ಅಹಿರ್ ಅವರು ಗುರುವಾರ ಮುಂಬೈಯಲ್ಲಿ ಶಿವಸೇನೆಗೆ ಸೇರಿದ್ದಾರೆ. ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ, ಶಿವಸೇನೆ ಮುಖಂಡ ಆದಿತ್ಯ ಠಾಕ್ರೆ ಉಪಸ್ಥಿತಿಯಲ್ಲಿ ಅವರು ಪಕ್ಷ ಸೇರಿದರು.
ಪಕ್ಷದ ಅಧ್ಯಕ್ಷ, ಹಿರಿಯ ನಾಯಕ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್-ಎನ್ ಸಿಪಿ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ, ಅಂದರೆ 2009-14 ರ ಅವಧಿಯಲ್ಲಿ ಸಚಿವ ಸಂಪುಟದ ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದ ಸಚಿನ್ ಚುನಾವಣೆ ಹತ್ತಿರದಲ್ಲಿರುವಾಗ ತೆಗೆದುಕೊಂಡ ಈ ಆಘಾತಕಾರಿ ನಿರ್ಧಾರದ ಪಕ್ಷಕ್ಕೆ ಆಘಾತವನ್ನುಂಟು ಮಾಡಿದೆ.

ಎನ್ ಸಿಪಿ ಮುಖಂಡ ಶರದ್ ಪವಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸಚಿನ್ ಇಂಥ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಕಾರಣ, ಪಕ್ಷದ ಮಹತ್ವದ ನಿರ್ಧಾರವೊಂದರ ಬಗ್ಗೆ ಅವರಿಗೆ ಸಹಮತವಿಲ್ಲದಿರುವುದು ಎಂದು ಮೂಲಗಳು ತಿಳಿಸಿವೆ.
ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಸಿದ್ಧವಾಗಿದ್ದವು. ಇದು ಸಚಿನ್ ಅವರಿಗೆ ಇಷ್ಟವಿರಲಿಲ್ಲ. ಈ ಬಗ್ಗೆ ಪವಾರ್ ಅವರೊಂದಿಗೆ ಚರ್ಚೆ ನಡೆಸಿದರೂ ಪವಾರ್ ತಮ್ಮ ನಿರ್ಧಾರ ಬದಲಿಸಲು ಸಿದ್ಧವಾಗಿರಲಿಲ್ಲ. ಆ ಕಾರಣದಿಂದಲೇ ಅವರು ಪಕ್ಷ ತೊರೆಯುವ ನಿರ್ಧಾರಕ್ಕೆ ಬಂದರು ಎನ್ನಲಾಗಿದೆ.
ಎನ್ ಸಿಪಿ ಮುಖಂಡ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಛಗನ್ ಭುಜ್ಬಲ್ ಸಹ ಎನ್ ಸಿಪಿ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಎನ್ ಸಿಪಿ ಶಾಸಕ ವೈಭವ್ ಪಿಚಡ್ ಅವರೂ ಶಿವಸೇನೆಗೆ ಸೇರಲಿದ್ದಾರೆ ಎಂಬ ವದಂತಿ ಇದೆ.
ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಶಃದ ರಾಷ್ಟ್ರೀಯ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಅವರೂ ಕಾಂಗ್ರೆಸ್ ತೊರೆದು ಶಿವಸೇನೆಗೆ ಸೇರಿದ್ದರು. ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿ ಅಮಾನತ್ತಾಗಿದ್ದ ಮುಖಂಡರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡು, ಅವರಿಗೆ ಆಯಕಟ್ಟಿನ ಹುದ್ದೆ ನೀಡಿದ ಬಗ್ಗೆ ಬೇಸರಗೊಂಡಿದ್ದ ಅವರು ರಾಜೀನಾಮೆ ನೀಡಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications