ಮಹಾರಾಷ್ಟ್ರ ತ್ರಿಮೈತ್ರಿ ಸರ್ಕಾರ: ಯಾವ ಪಕ್ಷಕ್ಕೆ ಯಾವ ಖಾತೆ?
ಮುಂಬೈ, ಡಿಸೆಂಬರ್ 12: ಮಹಾರಾಷ್ಟ್ರದಲ್ಲಿ ಶಿವಸೇನಾ, ಎನ್ಸಿಪಿ, ಕಾಂಗ್ರೆಸ್ ತ್ರಿಮೈತ್ರಿ ಸರ್ಕಾರ ರಚನೆಯಾದ ವಾರಗಳ ನಂತರ ಇಂದು ಖಾತೆ ಹಂಚಿಕೆ ನಡೆದಿದೆ.
ನವೆಂಬರ್ 28 ರಂದು ಮಹಾರಾಷ್ಟ್ರ ಸಿಎಂ ಆಗಿ ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕರಿಸಿದ್ದರು. ಅದೇ ದಿನ ಇನ್ನೂ ಆರು ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಎಲ್ಲರಿಗೂ ಇಂದು ಖಾತೆ ಹಂಚಿಕೆ ಮಾಡಲಾಗಿದೆ.
'ಲಾಭದಾಯಕ', 'ಶಕ್ತಿವಂತ' ಖಾತೆಗಳು ಸಮನಾಗಿ ಹಂಚುವ ಪ್ರಯತ್ನ ಮಾಡಿರುವುದು ಮೇಲ್ನೋಟಕ್ಕೆ ಕಾಣುತ್ತಿದ್ದು, ಮೂರೂ ಪಕ್ಷದವರನ್ನು ಸಮಾಧಾನಪಡಿಸಲೆಂದು ಮುತುವರ್ಜಿ ವಹಿಸಿ ಖಾತೆ ಹಂಚಿಕೆ ಮಾಡಲಾಗಿದೆ.

ಶಿವಸೇನಾಕ್ಕೆ ಗೃಹ ಸಚಿವ ಖಾತೆ ದೊರೆತಿದ್ದು, ಮಹಾರಾಷ್ಟ್ರದ ಗೃಹ ಸಚಿವರಾಗಿ ಏಕನಾಥ ಶಿಂಧೆ ಕಾರ್ಯನಿರ್ವಹಿಸಲಿದ್ದಾರೆ. ಗೃಹ ಖಾತೆ ಸೇರಿದಂತೆ ನಗರಾಭಿವೃದ್ಧಿ, ಪರಿಸರ ಸಂರಕ್ಷಣೆ, ಲೋಕೋಪಯೋಗಿ, ಮೀನುಗಾರಿಕೆ, ಪ್ರವಾಸೋದ್ಯಮ ಮತ್ತು ಸಂಸದೀಯ ವ್ಯವಹಾರ ಖಾತೆಗಳನ್ನು ಇವರ ಸುಪರ್ದಿಗೆ ನೀಡಲಾಗಿದೆ.
ಶಿವಸೇನಾದ ಮತ್ತೊಬ್ಬ ಸಚಿವ ಸುಭಾಶ್ ದೇಸಾಯಿ ಅವರಿಗೆ ಕೈಗಾರಿಕೋದ್ಯಮ, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ, ಕ್ರೀಡಾ ಮತ್ತು ಯುವಜನ, ಉದ್ಯೋಗ ಖಾತೆಗಳನ್ನು ನೀಡಲಾಗಿದೆ.
ಎನ್ಸಿಪಿಯ ಸಚಿವ ಚಗ್ಗನ್ ಬುಜಬಲ ಅವರಿಗೆ ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆ, ಜಲ ಸಂಪನ್ಮೂಲ, ಅಬಕಾರಿ ಖಾತೆಗಳನ್ನು ನೀಡಲಾಗಿದೆ.
ಎನ್ಸಿಪಿಯ ಮತ್ತೊಬ್ಬ ಸಚಿವ ಜಯಂತ್ ಪಾಟೀಲ್ ಅವರಿಗೆ ಹಣಕಾಸು ಮತ್ತು ಯೋಜನೆ, ವಸತಿ, ಆಹಾರ ಸರಬರಾಜು ಮತ್ತು ಕಾರ್ಮಿಕ ಖಾತೆಗಳನ್ನು ನೀಡಲಾಗಿದೆ.
ಕಾಂಗ್ರೆಸ್ ನ ಬಾಳಾಸಾಹೇಬ್ ತಾರೋಟ್ ಅವರಿಗೆ, ಕಂದಾಯ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ, ಪಶುಸಂಗೋಪನೆ, ಮೀನುಗಾರಿಕೆ ಖಾತೆಗಳನ್ನು ನೀಡಲಾಗಿದೆ.
ಮತ್ತೊಬ್ಬ ಕಾಂಗ್ರೆಸ್ ಸಚಿವ ನಿತಿನ್ ರಾವತ್ ಅವರಿಗೆ, ಬುಡಕಟ್ಟು ಜನಾಂಗ ಅಭಿವೃದ್ಧಿ, ಹಿಂದುಳಿದ ವರ್ಗ ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ನೀಡಲಾಗಿದೆ.
ಎನ್ಸಿಪಿ ತೊರೆದು ಹೋಗಿ ಬಿಜೆಪಿ ಜೊತೆ ಕೈ ಸೇರಿಸಿ ಎರಡು ದಿನಕ್ಕೆ ಡಿಸಿಎಂ ಆಗಿ ಮತ್ತೆ ಪಕ್ಷಕ್ಕೆ ವಾಪಸ್ ಮರಳಿದ ಅಜಿತ್ ಪವಾರ್ ಅವರಿಗೆ ಯಾವ ಖಾತೆಯನ್ನೂ ನೀಡಲಾಗಿಲ್ಲ. ಅಷ್ಟೆ ಅಲ್ಲದೆ ಸಿಎಂ ಉದ್ಧವ್ ಠಾಕ್ರೆ ಅವರ ಬಳಿ ಯಾವ ಖಾತೆ ಉಳಿದಿವೆ ಎಂಬ ಬಗ್ಗೆಯೂ ಮಾಹಿತಿ ನೀಡಿಲ್ಲ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications