ಗಡಿ ವಿವಾದ: 50 ವರ್ಷದ ಹಳೆಯ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ ಮಹಾರಾಷ್ಟ್ರ
ಮುಂಬೈ, ಜನವರಿ 29: ಕರ್ನಾಟಕದ ಜತೆಗಿನ ಗಡಿ ವಿವಾದವನ್ನು ಮತ್ತಷ್ಟು ಕೆದಕಲು ಮಹಾರಾಷ್ಟ್ರ ಮುಂದಾಗಿದೆ. ಬೆಳಗಾವಿ, ಕಾರವಾರ, ಬೀದರ್, ಬಾಲ್ಕಿ, ಹುಮನಾಬಾದ್ ಮುಂತಾದ ಭಾಗಗಳು ಮಹಾರಾಷ್ಟ್ರಕ್ಕೆ ಸೇರಿದ್ದು ಎಂಬ ವಾದಕ್ಕೆ ಪುಷ್ಟಿ ನೀಡಲು 50 ವರ್ಷದ ಹಳೆಯ ಸಾಕ್ಷ್ಯಚಿತ್ರವನ್ನು ಉದ್ಧವ್ ಠಾಕ್ರೆ ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿಸಿದ್ದಾರೆ. ಈ ಸಾಕ್ಷ್ಯಚಿತ್ರವನ್ನು ಮಹಾರಾಷ್ಟ್ರ ಸರ್ಕಾರವೇ ತಯಾರಿಸಿತ್ತು.
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಮರಾಠಿ ಸಂಸ್ಕೃತಿ ಆಚರಣೆಯಲ್ಲಿದ್ದ ವಿವರಗಳನ್ನು ಒಳಗೊಂಡಿದೆ. 35 ನಿಮಿಷಗಳ ಈ ಕಪ್ಪು-ಬಿಳುಪು ಸಾಕ್ಷ್ಯಚಿತ್ರವನ್ನು ಕುಮಾರ್ ಸೇನ್ ನಿರ್ದೇಶಿಸಿದ್ದಾರೆ. 'ಎ ಕೇಸ್ ಫಾರ್ ಜಸ್ಟೀಸ್' ಎಂಬ ಕಪ್ಪುಬಿಳುಪಿನ ಸಾಕ್ಷ್ಯಚಿತ್ರದಲ್ಲಿ, 60 ವರ್ಷಗಳ ಹಿಂದೆ ಕಾರವಾರದ ಶಾಲೆಯಲ್ಲಿ ಶಿಕ್ಷಕರೊಬ್ಬರು ಇಂಗ್ಲಿಷ್, ಮರಾಠಿ ಮತ್ತು ಕೊಂಕಣಿ ಬೋಧಿಸುತ್ತಿರುವ ದೃಶ್ಯವಿದೆ.
ಎನ್ಸಿಸಿ ಬೆಟಾಲಿಯನ್ನಲ್ಲಿ ಮರಾಠಿ ಫಲಕ ಬಳಸಿರುವುದು, 'ವಿಚಾರಿ' ಎಂಬ ಮರಾಠಿ ದಿನಪತ್ರಿಕೆಯ ವಿವರಗಳು, 1912ರ ಕರಾವಾರ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ವಾರ್ಷಿಕ ವರದಿ ವಿವರಗಳು, 1890ರಲ್ಲಿ ಬೆಳಗಾವಿಯಲ್ಲಿ ನಿರ್ಮಿಸಿದ ಸೇತುವೆ ಮೇಲೆ ಮರಾಠಿ ಭಾಷೆಯಲ್ಲಿ ಹೆಸರು ಇರುವ ದೃಶ್ಯಗಳು ಇದರಲ್ಲಿವೆ. ಹಾಗೆಯೇ ಗಡಿ ಭಾಗಗಳಲ್ಲಿ ಜನರು ಮರಾಠಿಯಲ್ಲಿ ಮಾತನಾಡುವುದು, ಮರಾಠಿ ಶಾಲೆಗಳು ಇರುವುದು ಮುಂತಾದವು ಸಾಕ್ಷ್ಯಚಿತ್ರದಲ್ಲಿದೆ.

'ಈ ಎಲ್ಲ ಸ್ಥಳಗಳೂ ಮಹಾರಾಷ್ಟ್ರಕ್ಕೆ ಸೇರಿದ್ದು. ಪ್ರಸ್ತುತ ಕರ್ನಾಟಕದ ಭಾಗವಾಗಿರುವ ಈ ಪ್ರದೇಶಗಳು ಮತ್ತೆ ಮಹಾರಾಷ್ಟ್ರಕ್ಕೆ ಸೇರಬೇಕು. ಈ ಕುರಿತು ಎಲ್ಲರಲ್ಲಿಯೂ ಅರಿವು ಮೂಡಬೇಕು ಎಂಬ ಉದ್ದೇಶದಿಂದ 50 ವರ್ಷಗಳ ವಿಡಿಯೋವನ್ನು ಯೂಟ್ಯೂಬ್ಗೆ ಸೇರಿಸುವಂತೆ ಅಧಿಕಾರಿಗಳಿಗೆ ಉದ್ಧವ್ ಠಾಕ್ರೆ ಸೂಚಿಸಿದ್ದಾರೆ' ಎಂದು ಉದ್ಧವ್ ಠಾಕ್ರೆ ಕಚೇರಿ ಪ್ರಕಟಣೆ ತಿಳಿಸಿದೆ.
-
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ












Click it and Unblock the Notifications