ಗಡಿ ವಿವಾದ: 50 ವರ್ಷದ ಹಳೆಯ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ ಮಹಾರಾಷ್ಟ್ರ
ಮುಂಬೈ, ಜನವರಿ 29: ಕರ್ನಾಟಕದ ಜತೆಗಿನ ಗಡಿ ವಿವಾದವನ್ನು ಮತ್ತಷ್ಟು ಕೆದಕಲು ಮಹಾರಾಷ್ಟ್ರ ಮುಂದಾಗಿದೆ. ಬೆಳಗಾವಿ, ಕಾರವಾರ, ಬೀದರ್, ಬಾಲ್ಕಿ, ಹುಮನಾಬಾದ್ ಮುಂತಾದ ಭಾಗಗಳು ಮಹಾರಾಷ್ಟ್ರಕ್ಕೆ ಸೇರಿದ್ದು ಎಂಬ ವಾದಕ್ಕೆ ಪುಷ್ಟಿ ನೀಡಲು 50 ವರ್ಷದ ಹಳೆಯ ಸಾಕ್ಷ್ಯಚಿತ್ರವನ್ನು ಉದ್ಧವ್ ಠಾಕ್ರೆ ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿಸಿದ್ದಾರೆ. ಈ ಸಾಕ್ಷ್ಯಚಿತ್ರವನ್ನು ಮಹಾರಾಷ್ಟ್ರ ಸರ್ಕಾರವೇ ತಯಾರಿಸಿತ್ತು.
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಮರಾಠಿ ಸಂಸ್ಕೃತಿ ಆಚರಣೆಯಲ್ಲಿದ್ದ ವಿವರಗಳನ್ನು ಒಳಗೊಂಡಿದೆ. 35 ನಿಮಿಷಗಳ ಈ ಕಪ್ಪು-ಬಿಳುಪು ಸಾಕ್ಷ್ಯಚಿತ್ರವನ್ನು ಕುಮಾರ್ ಸೇನ್ ನಿರ್ದೇಶಿಸಿದ್ದಾರೆ. 'ಎ ಕೇಸ್ ಫಾರ್ ಜಸ್ಟೀಸ್' ಎಂಬ ಕಪ್ಪುಬಿಳುಪಿನ ಸಾಕ್ಷ್ಯಚಿತ್ರದಲ್ಲಿ, 60 ವರ್ಷಗಳ ಹಿಂದೆ ಕಾರವಾರದ ಶಾಲೆಯಲ್ಲಿ ಶಿಕ್ಷಕರೊಬ್ಬರು ಇಂಗ್ಲಿಷ್, ಮರಾಠಿ ಮತ್ತು ಕೊಂಕಣಿ ಬೋಧಿಸುತ್ತಿರುವ ದೃಶ್ಯವಿದೆ.
ಎನ್ಸಿಸಿ ಬೆಟಾಲಿಯನ್ನಲ್ಲಿ ಮರಾಠಿ ಫಲಕ ಬಳಸಿರುವುದು, 'ವಿಚಾರಿ' ಎಂಬ ಮರಾಠಿ ದಿನಪತ್ರಿಕೆಯ ವಿವರಗಳು, 1912ರ ಕರಾವಾರ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ವಾರ್ಷಿಕ ವರದಿ ವಿವರಗಳು, 1890ರಲ್ಲಿ ಬೆಳಗಾವಿಯಲ್ಲಿ ನಿರ್ಮಿಸಿದ ಸೇತುವೆ ಮೇಲೆ ಮರಾಠಿ ಭಾಷೆಯಲ್ಲಿ ಹೆಸರು ಇರುವ ದೃಶ್ಯಗಳು ಇದರಲ್ಲಿವೆ. ಹಾಗೆಯೇ ಗಡಿ ಭಾಗಗಳಲ್ಲಿ ಜನರು ಮರಾಠಿಯಲ್ಲಿ ಮಾತನಾಡುವುದು, ಮರಾಠಿ ಶಾಲೆಗಳು ಇರುವುದು ಮುಂತಾದವು ಸಾಕ್ಷ್ಯಚಿತ್ರದಲ್ಲಿದೆ.

'ಈ ಎಲ್ಲ ಸ್ಥಳಗಳೂ ಮಹಾರಾಷ್ಟ್ರಕ್ಕೆ ಸೇರಿದ್ದು. ಪ್ರಸ್ತುತ ಕರ್ನಾಟಕದ ಭಾಗವಾಗಿರುವ ಈ ಪ್ರದೇಶಗಳು ಮತ್ತೆ ಮಹಾರಾಷ್ಟ್ರಕ್ಕೆ ಸೇರಬೇಕು. ಈ ಕುರಿತು ಎಲ್ಲರಲ್ಲಿಯೂ ಅರಿವು ಮೂಡಬೇಕು ಎಂಬ ಉದ್ದೇಶದಿಂದ 50 ವರ್ಷಗಳ ವಿಡಿಯೋವನ್ನು ಯೂಟ್ಯೂಬ್ಗೆ ಸೇರಿಸುವಂತೆ ಅಧಿಕಾರಿಗಳಿಗೆ ಉದ್ಧವ್ ಠಾಕ್ರೆ ಸೂಚಿಸಿದ್ದಾರೆ' ಎಂದು ಉದ್ಧವ್ ಠಾಕ್ರೆ ಕಚೇರಿ ಪ್ರಕಟಣೆ ತಿಳಿಸಿದೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications