ಮುಂಬೈ: ತಮ್ಮ ಮೇಲಿನ ದಾಳಿ ವಿರುದ್ಧ ತಿರುಗಿ ಬಿದ್ದ ವೈದ್ಯರು
ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ವೈದ್ಯರ ಮೇಲೆ ನಡೆದ ದಾಳಿ ವಿರೋಧಿಸಿ ಅಲ್ಲಿನ ವೈದ್ಯ ಸಮುದಾಯ ಇಂದು ಭಾರೀ ಪ್ರತಿಭಟನೆ ನಡೆಸುತ್ತಿದೆ.
ಮುಂಬೈ, ಮಾರ್ಚ್ 20: ಇತ್ತೀಚೆಗೆ ಮಹಾರಾಷ್ಟ್ರದ ಬೇರೆ ಬೇರೆ ಭಾಗಗಳಲ್ಲಿ ವೈದ್ಯರ ಮೇಲೆ ನಡೆದ ದಾಳಿ ವಿರೋಧಿಸಿ ಅಲ್ಲಿನ ವೈದ್ಯ ಸಮುದಾಯ ಇಂದು ಭಾರೀ ಪ್ರತಿಭಟನೆ ನಡೆಸುತ್ತಿದೆ.
ಮಹಾರಾಷ್ಟ್ರದಾದ್ಯಂತ ಹಲವು ಕಡೆಗಳಲ್ಲಿ ಇಂದು ವೈದ್ಯರು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ವೈದ್ಯರು ತಮ್ಮ ಮೇಲಾಗುತ್ತಿರುವ ದಾಳಿಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.[ಬಾಲಿವುಡ್ ನಟಿ ಐಶ್ಚರ್ಯ ರೈ ಅವರಿಗೆ ಪಿತೃವಿಯೋಗ]

"ಕಳೆದ ಒಂದು ವಾರದಲ್ಲಿ ವೈದ್ಯರ ಮೇಲೆ ದಾಳಿ ನಡೆಸಿದ ನಾಲ್ಕು ನಿದರ್ಶನಗಳು ವರದಿಯಾಗಿವೆ. ನಾವು ಸುರಕ್ಷಿತವಾಗಿ ನಮ್ಮ ಕೆಲಸ ಮಾಡಬಹುದು ಎಂಬ ಭರವಸೆ ಸಿಗುವವರೆಗೆ ನಾವು ಕೆಲಸ ಮಾಡುವುದಿಲ್ಲ ಎಂದು," ನಿರಾಲಿ ಎಂಬ ವೈದ್ಯರು ತಿಳಿಸಿದ್ದಾರೆ.
"ಅನಾರೋಗ್ಯ ಪೀಡಿತರಿಗೆ ಸೇವೆ ಚಿಕಿತ್ಸೆ ನೀಡುವುದು ವೈದ್ಯರ ಕರ್ತವ್ಯ. ಆದರೆ ವಾತಾವರಣ ಸುರಕ್ಷಿತವಾಗಿಲ್ಲದೇ ಇದ್ದರೆ ಕೆಲಸ ಮಾಡುವುದು ಕಷ್ಟ," ಎಂದು ಸಿಯೋನ್ ಆಸ್ಪತ್ರೆಯ ವೈದ್ಯ ಡಾ ಲೊಕೇಶ್ ಹೇಳಿದ್ದಾರೆ.

ಇದೇ ಸಿಯೋನ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ವೈದ್ಯರ ಮೇಲೆ ರೋಗಿಯ ಸಂಬಂಧಿಕರು ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ್ದರು. ಇಲ್ಲಿನ ಹೊರ ರೋಗಿ ವಿಭಾಗದ ಮುಂದೆ ವೈದ್ಯರು ಬೆಳಗ್ಗೆಯಿಂದ ಶಾಂತ ಪ್ರತಿಭಟನೆ ನಡೆಸುತ್ತಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications