ಮಹಾರಾಷ್ಟ್ರದ ಕೊರೊನಾ ಏರಿಕೆ: ಮುಂಬೈಯಲ್ಲಿ ಹೆಚ್ಚು ಸೋಂಕಿತರು ಪತ್ತೆ
ಕೊರೊನಾ ನಮ್ಮನ್ನು ಬಿಟ್ಟು ಶಾಶ್ವತವಾಗಿ ದೂರವಾಗುವಂತ ಲಕ್ಷಣಗಳು ಕಾಣಿಸುತ್ತಿಲ್ಲ. ಯಾಕೆಂದರೆ ಇತ್ತೀಚೆಗೆ ಮತ್ತೆ ಕೊರೊನಾ ಹಾವಳಿ ಹೆಚ್ಚಾಗಿದೆ. ಮಹಾರಾಷ್ಟ್ರ ಭಾನುವಾರ 6,493 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, ಐದು ಸಾವುಗಳನ್ನು ವರದಿಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಸೂಚಿಸಿದ ಡೇಟಾ ಸೂಚಿಸಿದೆ. ಜೊತೆಗೆ ವರದಿಯಾದ ಎಲ್ಲಾ ಸಾವುಗಳು ಮುಂಬೈನಲ್ಲಿ ಸಂಭವಿಸಿವೆ.
ಹೊಸ ಪ್ರಕರಣಗಳೊಂದಿಗೆ, ಕೊರೊನವೈರಸ್ ಸೋಂಕಿನ ಒಟ್ಟು ಸಂಖ್ಯೆ 79,62,666 ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 1,47,905 ಕ್ಕೆ ತಲುಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶನಿವಾರದಂದು ಐಸಿಎಂಆರ್ ಪೋರ್ಟಲ್ನಲ್ಲಿನ ದೋಷದಿಂದಾಗಿ ಪಟ್ಟಿ ಮಾಡಲು ಸಾಧ್ಯವಾಗದ ಪ್ರಕರಣಗಳನ್ನು ಸಹ ದಿನದ ಲೆಕ್ಕಾಚಾರಕ್ಕೆ ಸೇರಿಸಲಾಗಿದೆ. ಈ ಕಾರಣದಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,493 ರಷ್ಟು ಹೆಚ್ಚಾಗಿದೆ. ಸದ್ಯ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 24,608 ಆಗಿದೆ. ಇಲ್ಲಿಯವರೆಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 77,90,153 ಆಗಿದೆ.

ಇನ್ನೂ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಉಪ-ವ್ಯತ್ಯಯ ಪ್ರಕರಣಗಳು ದಾಖಲಾಗಿವೆ. ಪುಣೆಯ BJ ವೈದ್ಯಕೀಯ ಕಾಲೇಜಿನ ಇತ್ತೀಚಿನ ವರದಿಯು ಮುಂಬೈನಲ್ಲಿ BA.5 ನ ಮೂವರು ಮತ್ತು BA.4 ಉಪ-ವೇರಿಯಂಟ್ನ ಇಬ್ಬರು ರೋಗಿಗಳು ಕಂಡುಬಂದಿದೆ ಎಂದು ಹೇಳಿದೆ. ಎಲ್ಲಾ ಮಾದರಿಗಳನ್ನು ಜೂನ್ 10-20 ಅವಧಿಯಲ್ಲಿ ಸಂಗ್ರಹಿಸಲಾಗಿದೆ. ಇದರೊಂದಿಗೆ ಬಿಎ.4 ಮತ್ತು ಬಿಎ.5 ಪ್ರಕರಣಗಳ ಸಂಖ್ಯೆ 54ಕ್ಕೆ ಏರಿದೆ.
ಮುಂಬೈನ ಅಂಕಿಅಂಶಗಳು
ಮುಂಬೈನಲ್ಲಿ 2,771 ಪ್ರಕರಣಗಳು ಮತ್ತು ಐದು ಸಾವುಗಳು ವರದಿಯಾಗಿದ್ದು, ಇದು 11,07,449 ಕ್ಕೆ ಮತ್ತು ಸಾವಿನ ಸಂಖ್ಯೆ 19,599 ಕ್ಕೆ ತಲುಪಿದೆ.

ಮುಂಬೈ ಪ್ರದೇಶದಲ್ಲಿ 4,804 ಪ್ರಕರಣಗಳು ವರದಿಯಾಗಿದ್ದು, ಪುಣೆ ವಿಭಾಗದಲ್ಲಿ 1,060, ನಾಸಿಕ್ ಪ್ರದೇಶದಲ್ಲಿ 150, ಕೊಲ್ಲಾಪುರ ವಿಭಾಗ 102, ಔರಂಗಾಬಾದ್ 52, ಲಾತೂರ್ 63, ಅಂಕೋಲಾ 79 ಮತ್ತು ನಾಗ್ಪುರ 183 ಪ್ರಕರಣಗಳು ವರದಿಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.
Recommended Video
ಮಹಾರಾಷ್ಟ್ರದ COVID-19 ಅಂಕಿಅಂಶಗಳು ಇಂತಿವೆ: ಹೊಸ ಪ್ರಕರಣಗಳು 6,493, ಒಟ್ಟು ಪ್ರಕರಣಗಳು 79,62,666, ಸಾವಿನ ಸಂಖ್ಯೆ 1,47,905, ಸಕ್ರಿಯ ಪ್ರಕರಣಗಳು 24,608, ಒಟ್ಟು ಪರೀಕ್ಷೆಗಳು 8,18,52,653 ನಡೆದಿವೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications