ಗಣೇಶ ಉತ್ಸವಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಪ್ರಕಟಿಸಿದ ಮಹಾರಾಷ್ಟ್ರ
ಮುಂಬೈ, ಜುಲೈ 11: ಗಣೇಶ ಉತ್ಸವ ಕುರಿತು ಮಹಾರಾಷ್ಟ್ರ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಆಗಸ್ಟ್ 22ನೇ ತಾರೀಕು ಗಣೇಶ ಉತ್ಸವ ಇರಲಿದ್ದು, ಮಹಾರಾಷ್ಟ್ರದಲ್ಲಿ ಈ ಹಬ್ಬ ಬಹಳ ದೊಡ್ಡ ಮಟ್ಟದಲ್ಲಿ ನಡೆಯುತ್ತೆ. ಈ ವರ್ಷ ಕೊರೊನಾ ಭೀತಿಯ ನಡುವೇ ವಿನಾಯಕ ಉತ್ಸವಕ್ಕೆ ಸರ್ಕಾರ ಅನುಮತಿ ನೀಡಿದೆ.
Recommended Video
ಮಹಾರಾಷ್ಟ್ರ ಸರ್ಕಾರ ತಿಳಿಸಿರುವ ಪ್ರಕಾರ ಸಾರ್ವಜನಿಕವಾಗಿ ಕೂರಿಸುವ ಗಣೇಶನ ಎತ್ತರ ಗರಿಷ್ಠ 4 ಅಡಿಗೆ ನಿಗದಿ ಮಾಡಲಾಗಿದೆ. ನಾಲ್ಕು ಅಡಿಗಿಂತ ಎತ್ತರದ ಗಣೇಶ ಕೂರಿಸುವಂತಿಲ್ಲ. ಮನೆಗಳಲ್ಲಿ 2 ಅಡಿ ಗಣೇಶ ಕೂರಿಸಲು ಮಾತ್ರ ಅವಕಾಶ ಮಾಡಿಕೊಡಲಾಗಿದೆ.
ಮಹಾರಾಷ್ಟ್ರದಲ್ಲಿ ವಿನಾಯಕ ಮಹೋತ್ಸವ ಸುಮಾರು 11 ದಿನಗಳವರೆಗೂ ನಡೆಯಲಿದೆ. ಹೀಗಾಗಿ, ತಿಂಗಳ ಮುಂಚೆಯೇ ಮಹಾ ಸರ್ಕಾರ ನಿಯಮಗಳನ್ನು ರೂಪಿಸಿದೆ.

* ಸಾರ್ವಜನಿಕವಾಗಿ ಕೂರಿಸುವ ಗಣಪತಿ ವಿಗ್ರಹವನ್ನು 4 ಅಡಿಗಳಿಗೆ ಸೀಮಿತಗೊಳಿಸಲಾಗಿದೆ. ಮನೆಯಲ್ಲಿ ಕೂರಿಸುವ ಗಣಪತಿ ವಿಗ್ರಹಗಳನ್ನು 2 ಅಡಿಗಳಿಗೆ ಸೀಮಿತಗೊಳಿಸಬೇಕು.
* ಪೆಂಡಲ್ ಒಳಗೆ ಹತ್ತು ಜನರು ಮಾತ್ರ ಇರಲು ಅವಕಾಶ ನೀಡಲಾಗಿದೆ. ಅದಕ್ಕಿಂ ಹೆಚ್ಚು ಮಂದಿ ಪ್ರವೇಶಿಸುವಂತಿಲ್ಲ.
* ಗಣೇಶ ವಿಸರ್ಜನೆ ಮಾಡುವ ವೇಳೆ ಹತ್ತಿರ ಕೆರೆ ಅಥವಾ ಸರ್ಕಾರ ಸೂಚಿಸುವ ಸ್ಥಳದಲ್ಲಿ ಮಾತ್ರ ವಿರ್ಸಜನೆ ಮಾಡಬೇಕು. ಅಥವಾ ಮುಂದಿನ ವರ್ಷಕ್ಕೆ ಗಣೇಶ ಉತ್ಸವವನ್ನು ಮುಂದೂಡಬಹುದು.
* ಪೆಂಡಲ್ ಹಾಕುವ ಸ್ಥಳದಲ್ಲಿ ಡೆಂಗ್ಯೂ, ಮಲೇರಿಯಾ, ಕೊವಿಡ್ ಗೆ ಸಂಬಂಧಪಟ್ಟಂತೆ ಜಾಗೃತಿ ಮೂಡಿಸಬೇಕು.
* ಗಣೇಶ ಕಾರ್ಯಕ್ರಮಗಳನ್ನು ಸಾಧ್ಯವಾದಷ್ಟು ಆನ್ಲೈನ್ ವೆಬ್ಸೈಟ್ಗಳಲ್ಲಿ ವೀಕ್ಷಿಸುವಂತಹ ವ್ಯವಸ್ಥೆ ಮಾಡಬೇಕು
* ಆರತಿ, ಭಜನೆ ಹಾಗೂ ಇನ್ನಿತರ ಕಾರ್ಯಕ್ರಮಗಳ ವೇಳೆ ಜನಸಂದಣಿ ಇರದಂತೆ ನೋಡಿಕೊಳ್ಳಬೇಕು
* ಗಣೇಶ ತರುವ ವೇಳೆ, ವಿಸರ್ಜನೆ ವೇಳೆ ಮೆರವಣಿಗೆ ಮಾಡುವಂತಿಲ್ಲ. ವಿಸರ್ಜನೆ ಸ್ಥಳದಲ್ಲಿ ಜನರು ಕಡಿಮೆ ಭಾಗವಹಿಸಬೇಕು
* ಈ ವೇಳೆ ನಗರಸಭೆಗಳು, ಪೊಲೀಸ್, ಸರ್ಕಾರಿ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳಿಗೆ ಎಲ್ಲರೂ ಸಮುದಾಯಗಳ ಜೊತೆ ಸಂಪರ್ಕ ಹೊಂದಿರಬೇಕು, ನಿಯಮಗಳನ್ನು ಪಾಲಿಸುವಂತೆ ಕ್ರಮ ಜರುಗಿಸಬೇಕು
* ಇನ್ನು ಹೆಚ್ಚಿನ ಮಾರ್ಗಸೂಚಿಗಳನ್ನು ನೀಡಲಾಗುವುದು, ಅದನ್ನು ಅನುಸರಿಸಬೇಕು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications