ಮಹಾರಾಷ್ಟ್ರ: ಮಾಜಿ ಡಿಸಿಎಂ ಛಗನ್ ಭುಜ್ ಬುಲ್ ಬಂಧನ
ಮುಂಬೈ, ಮಾರ್ಚ್ 14: ಮಹಾರಾಷ್ಟ್ರ ಸದನ್, ಮನಿ ಲಾಂಡ್ರಿಂಗ್ ಪ್ರಕರಣದ ಆರೋಪಿಯಾಗಿರುವ ಮಹಾರಾಷ್ಟ್ರದ ಎನ್ ಸಿಪಿ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಛಗನ್ ಭುಜ್ ಬುಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಸೋಮವಾರ ವಿಚಾರಣೆಗೆ ಹಾಜರಾದ ಛಗನ್ ಭುಜ್ ಬುಲ್ ಅವರನ್ನು ತಡರಾತ್ರಿ ವಶಕ್ಕೆ ಪಡೆದಿರುವ ಜಾರಿನಿರ್ದೇಶನಾಲಯ, ಹೆಚ್ಚಿನ ವಿಚಾರಣೆ ನಡೆಸುತ್ತ್ದಿಎ.
ಶರದ್ ಪವಾರ್ ಅವರ ನ್ಯಾಷನಲ್ ಕಾಂಗ್ರೆಸ್ ಪಾರ್ಟಿಯ ಹಿರಿಯ ನಾಯಕರಾದ ಜಿತೇಂದ್ರ ಅವ್ಹಾದ್ ಹಾಗೂ ಇತರೆ ನಾಯಕರೊಡನೆ ಜಾರಿ ನಿರ್ದೇಶನಾಲಯದ ಕಚೇರಿ ಛಗನ್ ಭುಜ್ ಬುಲ್ ಬಂದಿದ್ದರು.

ಮಹಾರಾಷ್ಟ್ರದ ಭ್ರಷ್ಟಾಚಾರ ನಿಗ್ರಹ ಬ್ಯೂರೋ ಹಾಗೂ ಜಾರಿ ನಿರ್ದೇಶನಾಲಯದ ವರದಿ ಆಧಾರಿಸಿ ಜನವರಿ ತಿಂಗಳಿನಲ್ಲಿ ಬಾಂಬೆ ಹೈಕೋರ್ಟ್ ನೀಡಿದ ನಿರ್ದೇಶನದಂತೆ ನಾಲ್ಕು ವಾರಗಳಲ್ಲಿ ಭುಜ್ ಬುಲ್ ಹಾಗೂ ಅವರ ಕುಟುಂಬದ ಭ್ರಷ್ಟಾಚಾರದ ತನಿಖೆ ನಡೆಸಬೇಕಿದೆ.
ಫೆಬ್ರವರಿ 1 ರಂದು ಭುಜ್ ಬುಲ್ ಅವರ ಸಂಬಂಧಿ ಸಮೀರ್ ಭುಜ್ ಬುಲ್ ಅವರನ್ನು ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿಸಲಾಗಿತ್ತು. ಕಳೆದ ತಿಂಗಳು ಭುಜ್ ಬುಲ್ ಅವರ ಮಗ ಪಂಕಜ್ ಭುಜ್ ಬುಲ್, ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು.
#Visuals Security outside Mumbai ED Office: NCP Leader Chaggan Bhujbal arrested by ED in the money laundering case pic.twitter.com/caL7uyGHMG
— ANI (@ANI_news) March 14, 2016
ಜಾರಿ ನಿರ್ದೇಶನಾಲಯದ ಕ್ರಮವನ್ನು ಸ್ವಾಗತಿಸಿರುವ ಬಿಜೆಪಿ ನಾಯಕ ಕಿರೀತ್ ಸೋಮಯ್ಯ ಅವರು, ಭ್ರಷ್ಟಾಚಾರದ ಆರೋಪಗಳ ಜೊತೆಗೆ ಬಹುಕೋಟಿ ನೀರಾವರಿ ಹಗರಣದ ಮೇಲೆ ಕೂಡಾ ತೀವ್ರ ತನಿಖೆ ಆಗಬೇಕಿದೆ. ಅಜಿತ್ ಪವಾರ್, ಸುನಿಲ್ ತತ್ಕರೆ ಹಾಗೂ ಭುಜ್ ಬಲ್ ಅವರ ಬಣ್ಣ ಬಯಲಾಗಬೇಕಿದೆ ಎಂದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications