ಮಹಾರಾಷ್ಟ್ರದಲ್ಲಿ ಕೈಕೊಟ್ಟ ಎನ್ಸಿಪಿ, ಶಿವಸೇನಾ ಕಕ್ಕಾಬಿಕ್ಕಿ
ಮುಂಬೈ, ನವೆಂಬರ್ 18: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಬಿಕ್ಕಟ್ಟು ಮತ್ತೊಂದು ಹಂತ ತಲುಪಿದೆ. ಶಿವಸೇನಾ ಜತೆ ಕೈಜೋಡಿಸಿ ಸರ್ಕಾರ ರಚಿಸಲು ಆಸಕ್ತಿ ತೋರಿಸಿದ್ದ ಶರದ್ ಪವಾರ್ ನೇತೃತ್ವದ ಎನ್ಸಿಪಿ, ತನ್ನ ಮಿತ್ರಪಕ್ಷ ಕಾಂಗ್ರೆಸ್ ಮನವೊಲಿಸಿ ತ್ರಿಪಕ್ಷ ಮೈತ್ರಿ ಸರ್ಕಾರ ಸ್ಥಾಪನೆಗೆ ಮುಂದಾಗಿತ್ತು. ಆದರೆ ಎನ್ಸಿಪಿ ಇದ್ದಕ್ಕಿದ್ದಂತೆ ಯೂ-ಟರ್ನ್ ತೆಗೆದುಕೊಂಡಿದೆ.
ಶಿವಸೇನಾ-ಎನ್ಸಿಪಿ ಮತ್ತು ಕಾಂಗ್ರೆಸ್ ನಡುವೆ ಮೈತ್ರಿ ನಡೆಯಲು ಹೇಗೆ ಸಾಧ್ಯ ಎನ್ನುವ ಮೂಲಕ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಶಿವಸೇನಾಕ್ಕೆ ಆಘಾತ ನೀಡಿದ್ದಾರೆ. ಇದರಿಂದ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಸೆಡ್ಡು ಹೊಡೆದು ಸರ್ಕಾರ ರಚಿಸುವ ಆಸೆಯೊಂದಿಗೆ ತನ್ನ ಕಟು ವೈರಿ ಪಕ್ಷಗಳಾದ ಎನ್ಸಿಪಿ ಮತ್ತು ಕಾಂಗ್ರೆಸ್ ಜತೆ ಕೈಜೋಡಿಸಲು ಮುಂದಾಗಿದ್ದ ಶಿವಸೇನಾ ಕಂಗಾಲಾಗಿದೆ.
ಶಿವಸೇನಾ-ಎನ್ಸಿಪಿ-ಕಾಂಗ್ರೆಸ್ ಮೈತ್ರಿಯ ಕುರಿತು ಮೂರೂ ಪಕ್ಷಗಳ ಮುಖಂಡರು ಅನೇಕ ಹೇಳಿಕೆಗಳನ್ನು ನೀಡಿದ್ದರು. ಜತೆಗೆ ಪತ್ರಿಕಾಗೋಷ್ಠಿಗಳನ್ನು ನಡೆಸಿ ಸರ್ಕಾರ ರಚನೆಗೆ ಪ್ರಯತ್ನ ನಡೆಸುತ್ತಿರುವುದಾಗಿ ಹೇಳಿದ್ದರು. ಆದರೆ ಸೋಮವಾರ ಸಂಸತ್ ಅಧಿವೇಶನಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭೇಟಿಯ ಬಳಿಕ ಶರದ್ ಪವಾರ್ ವರಸೆ ಬದಲಾಗಿದೆ.

ಮೈತ್ರಿ ಹೇಗೆ ಸಾಧ್ಯ?
ಮಾಧ್ಯಮಗಳೊಂದಿಗೆ ಸೋಮವಾರ ಮಾತನಾಡಿದ ಶರದ್ ಪವಾರ್, ಬಿಜೆಪಿ ಮತ್ತು ಶಿವಸೇನಾ ನಮ್ಮ ವಿರುದ್ಧ ಸ್ಪರ್ಧೆ ಮಾಡಿದ್ದವು. ಈಗ ಕಾಂಗ್ರೆಸ್-ಎನ್ಸಿಪಿ ಮತ್ತು ಶಿವಸೇನಾ ನಡುವೆ ಮೈತ್ರಿ ನಡೆಯಲು ಹೇಗೆ ಸಾಧ್ಯ? ಎಂದು ಹೇಳಿದರು. ಎನ್ಸಿಪಿ-ಕಾಂಗ್ರೆಸ್ ಜತೆ ಸೇರಿ ಸರ್ಕಾರ ರಚಿಸುತ್ತೇವೆ ಎಂದು ಶಿವಸೇನಾ ಹೇಳುತ್ತಿದೆಯಲ್ಲ ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಲಿಲ್ಲ. ಹಾಗೆಯೇ ತ್ರಿಪಕ್ಷೀಯ ಸರ್ಕಾರ ರಚಿಸುವ ನಡೆಸಿದ ತಮ್ಮ ಪ್ರಯತ್ನಗಳ ಕುರಿತು ಸಹ ಮಾತಾಡಲಿಲ್ಲ.

ಅವರ ದಾರಿ ನೋಡಿಕೊಳ್ಳಲಿ
ಬಿಜೆಪಿ- ಶಿವಸೇನಾ ಒಟ್ಟಾಗಿ ಸ್ಪರ್ಧಿಸಿದ್ದವು ಮತ್ತು ನಾವು (ಎನ್ಸಿಪಿ) ಹಾಗೂ ಕಾಂಗ್ರೆಸ್ ಒಟ್ಟಾಗಿ ಸ್ಪರ್ಧಿಸಿದ್ದೆವು. ಅವರು ತಮ್ಮದೇ ದಾರಿ ಆಯ್ಕೆ ಮಾಡಿಕೊಳ್ಳಬೇಕಿದೆ ಮತ್ತು ನಾವು ನಮ್ಮ ರಾಜಕೀಯ ಮಾಡುತ್ತೇವೆ ಎಂದು ಪವಾರ್ ತಿಳಿಸಿದರು. ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ತರುವ ಪ್ರಯತ್ನಗಳ ನಡುವೆ ಶರದ್ ಪವಾರ್ ರೀತಿಯ ಹೇಳಿಕೆ ನೀಡಿರುವುದು ಮಹಾರಾಷ್ಟ್ರದ ಸರ್ಕಾರ ರಚನೆಯ ಕಸರತ್ತು ಮತ್ತಷ್ಟು ಜಟಿಲವಾಗುವ ಸೂಚನೆ ನೀಡಿದೆ.

ಸೋನಿಯಾ ಭೇಟಿ ಬಳಿಕ ಬದಲಾದ ಮಾತು
ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಕುರಿತು ಮೂರೂ ಪಕ್ಷಗಳು ಕುಳಿತು ಒಮ್ಮತದ ತೀರ್ಮಾನ ತೆಗೆದುಕೊಂಡಿದ್ದವು. ಆ ಕುರಿತು ಶರದ್ ಪವಾರ್ ಅವರು ಸೋನಿಯಾ ಗಾಂಧಿಯೊಂದಿಗೆ ಮಾತನಾಡಿ ಅಂತಿಮ ಪ್ರಕ್ರಿಯೆ ನಡೆಸಲು ರಾಜಧಾನಿ ದೆಹಲಿಗೆ ತೆರಳಿದ್ದರು ಎನ್ನಲಾಗಿತ್ತು. ಆದರೆ ಸೋನಿಯಾ ಭೇಟಿಯ ಬಳಿಕ ಶರದ್ ಪವಾರ್ ಇದುವರೆಗಿನ ನಡೆಗೆ ತದ್ವಿರುದ್ಧ ಹೇಳಿಕೆ ನೀಡಿದ್ದಾರೆ.

ಬಿಜೆಪಿಗೆ ವಾಪಸ್ ಹೋಗಿ-ಅಠವಳೆ ಸಲಹೆ
ಕಾಂಗ್ರೆಸ್ ಮತ್ತು ಎನ್ಸಿಪಿ ಜತೆ ಸೇರಿ ಸರ್ಕಾರ ರಚಿಸಲು ಶಿವಸೇನಾಗೆ ಸಾಧ್ಯವಾಗುವುದಿಲ್ಲ. ಶಿವಸೇನಾ ತನ್ನ ಬಿಜೆಪಿಯ ನಂಟಿಗೆ ಮರಳುವುದು ಉತ್ತಮ. ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಜತೆ ಸೇರಿ ಆದಷ್ಟು ಬೇಗನೆ ಸರ್ಕಾರ ರಚಿಸುವುದು ಒಳಿತು ಎಂದು ಎನ್ಡಿಎ ಸರ್ಕಾರದ ಭಾಗವಾಗಿರುವ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಕೇಂದ್ರ ಸಚಿವ ರಾಮದಾಸ್ ಅಠವಳೆ ಶಿವಸೇನಾಕ್ಕೆ ಸಲಹೆ ನೀಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications