ರನ್ವೇ ತಪ್ಪಿ ಹೊರಹೋದ ವಿಮಾನ: ತಪ್ಪಿದ ಭೀಕರ ಅಪಘಾತ
ಮುಂಬೈ, ಏಪ್ರಿಲ್ 29: ಸ್ಪೈಸ್ ಜೆಟ್ ವಿಮಾನವೊಂದು ಇಳಿಯುವ ಸಂದರ್ಭದಲ್ಲಿ ರನ್ ವೇ ತಪ್ಪಿ ಸಾಗಿದ ಘಟನೆ ಮಹಾರಾಷ್ಟ್ರದ ಶಿರಡಿ ವಿಮಾನ ನಿಲ್ದಾಣದಲ್ಲಿ ಸೋಮವಾರ ನಡೆದಿದೆ. ಅದೃಷ್ಟವಶಾತ್ ಅದರಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುವ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ವಿಮಾನದಲ್ಲಿ ಎಷ್ಟು ಮಂದಿ ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು ಎಂಬ ಮಾಹಿತಿ ಇನ್ನೂ ದೊರೆತಿಲ್ಲ. ಎಲ್ಲರೂ ಯಾವುದೇ ಗಾಯಗಳಾಗದೆ ಸುರಕ್ಷಿತವಾಗಿದ್ದಾರೆ ಎಂದು ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಒಂದು ವೇಳೆ ಹೆಚ್ಚೂಕಡಿಮೆಯಾಗಿದ್ದರೆ ದೊಡ್ಡ ಅಪಘಾತ ಸಂಭವಿಸಿ ನೂರಾರು ಮಂದಿ ಅಪಾಯಕ್ಕೆ ಸಿಲುಕುವಂತಾಗುತ್ತಿತ್ತು.
ವಿಮಾನವನ್ನು ರನ್ವೇಯಿಂದ ತೆಗೆಯುವ ಕಾರ್ಯ ನಡೆಯುತ್ತಿದ್ದು, ಅಲ್ಲಿಯವರೆಗೂ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಮುಂದುವರಿಯಲಿದೆ.

ಆದರೆ, ವಿಮಾನದೊಳಗಿದ್ದ ಪ್ರಯಾಣಿಕರು ಹೊರಗೆ ಬರಲಾಗದೆ ಹಲವು ಗಂಟೆಗಳ ಕಾಲ ಒಳಗೇ ಕೂರುವಂತಾಗಿತ್ತು.
#FirstVisuals Maharashtra: Close shave for Spicejet passengers at Shirdi airport as Spicejet SG946 from Delhi to Shirdi overshot the runway. All passengers safe.The runway has been closed temporarily pic.twitter.com/rcAK9cbgXY
— ANI (@ANI) 29 April 2019
ಎಸ್ಜಿ 946 ಬೋಯಿಂಗ್ 737-800 ವಿಮಾನವು ದೆಹಲಿಯಿಂದ ಶಿರಡಿಗೆ ಬರುತ್ತಿತ್ತು. ರನ್ವೇನಲ್ಲಿ ಇಳಿದು ನಿಲ್ದಾಣದತ್ತ ಬರುವ ವೇಳೆಗೆ ಜಾರಿ ಸುಮಾರು 50 ಮೀಟರ್ಗಳಷ್ಟು ದೂರ ನೆಲದಲ್ಲಿ ಸಾಗಿದೆ. ಇದರಿಂದ ಶಿರಡಿ ವಿಮಾನ ನಿಲ್ದಾಣಕ್ಕೆ ಬರುವ ಮತ್ತು ಹೊರ ಹೋಗುವ ವಿಮಾನಗಳ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಇದು ಚಿಕ್ಕ ವಿಮಾನ ನಿಲ್ದಾಣವಾಗಿರುವುದರಿಂದ ಸುಮಾರು 5-6 ಗಂಟೆ ಕಳೆದರೂ ರನ್ವೇ ತಪ್ಪಿದ ವಿಮಾನವನ್ನು ಹೊರಕ್ಕೆ ತೆಗೆಯಲು ಕಷ್ಟವಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications