ಮಹಾರಾಷ್ಟ್ರ: ಟ್ರಕ್ ಪಲ್ಟಿ- ಫೋನ್, ಟಿವಿ ಸೇರಿ 70 ಲಕ್ಷ ರು ಮೌಲ್ಯದ ವಸ್ತುಗಳು ಲೂಟಿ
ಒಸ್ಮಾನಾಬಾದ್, ಜೂ.16: ಮಹಾರಾಷ್ಟ್ರದ ಉಸ್ಮಾನಾಬಾದ್ನಲ್ಲಿ ಕಂಟೇನರ್ ಟ್ರಕ್ ಒಂದು ಉರುಳಿದ್ದು ಟ್ರಕ್ನಲ್ಲಿದ್ದ ಸುಮಾರು 70 ಲಕ್ಷಕ್ಕೂ ಅಧಿಕ ಮೌಲ್ಯದ ಸರಕುಗಳನ್ನು ಗ್ರಾಮಸ್ಥರು ಮತ್ತು ದಾರಿಹೋಕರು ಲೂಟಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ಮುಂಜಾನೆ 3 ಗಂಟೆ ಸುಮಾರಿಗೆ ಸೋಲಾಪುರ-ಔರಂಗಬಾದ್ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ''ಪ್ರಸ್ತುತ ಜನರು ತೆಗೆದುಕೊಂಡಿರುವ ವಸ್ತುಗಳನ್ನು ಹಿಂದಕ್ಕೆ ಪಡೆಯಲು ಹತ್ತಿರದ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲು ತಂಡಗಳನ್ನು ರಚಿಸಬೇಕಾಗಿದೆ,'' ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
"ಮೊಬೈಲ್ ಫೋನ್ಗಳು, ಕಂಪ್ಯೂಟರ್ಗಳು, ಎಲ್ಇಡಿಗಳು, ಆಟಿಕೆಗಳು ಮತ್ತು ಇತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಹೊತ್ತು ಟ್ರಕ್ ಸಾಗುತ್ತಿತ್ತು. ಚಾಲಕರ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾಗಿದೆ. ವಸ್ತುಗಳಲೆಲ್ಲಾ ರಸ್ತೆಯ ಮೇಲೆ ಬಿದ್ದ ನಂತರ ಗ್ರಾಮಸ್ಥರು ಮತ್ತು ದಾರಿಹೋಕರು ಈ ವಸ್ತುಗಳನ್ನು ತೆಗೆದುಕೊಂಡು ಹೋಗಲು ಪ್ರಾರಂಭಿಸಿದರು. ಆದರೆ ಕೆಲವರು ಉರುಳಿಬಿದ್ದ ಟ್ರಕ್ನ ಬಾಗಿಲನ್ನು ತೆರೆದು ದೋಚಿದ್ದಾರೆ. ಈಗ ವಸ್ತುಗಳನ್ನು ಹಿಂದಕ್ಕೆ ಪಡೆಯಲು ಸ್ಥಳೀಯ ಪೊಲೀಸರ ತಂಡ ನಿಯೋಜನೆ ಮಾಡಬೇಕಾಗಿದೆ," ಎಂದು ಹೇಳಿದ್ದಾರೆ.

ಇನ್ನು ಕೆಲವು ಗ್ರಾಮಸ್ಥರು ಪೊಲೀಸರ ಮನವಿಯ ಮೇರೆಗೆ ಸರಕುಗಳನ್ನು ಹಿಂದಿರುಗಿಸಿದ್ದಾರೆ. ಆದರೆ ಅನೇಕ ಮಂದಿ ವಸ್ತುಗಳನ್ನು ಹಿಂದಕ್ಕೆ ನೀಡಿಲ್ಲ. ಬಳಿಕ ತಂಡವೊಂದು ಜನರು ಟ್ರಕ್ನಿಂದ ದೋಚಿದ ವಸ್ತುಗಳನ್ನು ಹಿಂಪಡೆಯಲು ಹುಡುಕಾಟ ನಡೆಸಿದೆ ಎಂದು ವರದಿಯಾಗಿದೆ.
ಹಿರಿಯ ಪೊಲೀಸ್ ಅಧಿಕಾರಿ ಮೋತಿಚಂದ್ ರಾಥೋಡ್, "70 ಲಕ್ಷ ಮೌಲ್ಯದ ವಸ್ತುಗಳನ್ನು ಲೂಟಿ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಪೈಕಿ ಶೇ. 40 ರಷ್ಟು ವಸ್ತುಗಳನ್ನು ಹಿಂಪಡೆಯುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಹೆಚ್ಚಿನ ಕಾರ್ಯಾಚರಣೆ ನಡೆಸಲಾಗುತ್ತಿದೆ," ಎಂದು ಮಾಹಿತಿ ನೀಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications