ನಮ್ಮನ್ನು ಕೇಳದೆ ಒಳಗೆ ಬರುವಂತಿಲ್ಲ: ಸಿಬಿಐಗೆ ಮಹಾರಾಷ್ಟ್ರ ತಾಕೀತು!
ಮುಂಬೈ, ಅಕ್ಟೋಬರ್ 22: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಹಾಗೂ ನಕಲಿ ಟಿಆರ್ಪಿ ಹಗರಣಗಳ ತನಿಖೆಯಲ್ಲಿ ಸಿಬಿಐ ಮಧ್ಯಪ್ರವೇಶದ ಬಳಿಕ ರಾಜ್ಯದಲ್ಲಿ ಸಿಬಿಐ ಪ್ರವೇಶದ ಮೇಲೆ ಮಹಾರಾಷ್ಟ್ರ ನಿರ್ಬಂಧ ವಿಧಿಸಿದೆ.
ರಾಜ್ಯದಲ್ಲಿನ ಪ್ರಕರಣಗಳ ತನಿಖೆಗಾಗಿ ಸಿಬಿಐ ಅಧಿಕಾರಿಗಳು ಸರ್ಕಾರದ ಅನುಮತಿ ಇಲ್ಲದೆ ಪ್ರವೇಶಿಸಬಹುದೆಂಬ ಸಾಮಾನ್ಯ ಒಪ್ಪಿಗೆಯನ್ನು ಮಹಾರಾಷ್ಟ್ರದ ಶಿವಸೇನಾ ನೇತೃತ್ವದ ಸರ್ಕಾರ ಹಿಂದಕ್ಕೆ ಪಡೆದುಕೊಂಡಿದೆ. ಹೀಗಾಗಿ ಇನ್ನು ಮುಂದೆ ಸಿಬಿಐ ಯಾವುದೇ ಪ್ರಕರಣದ ತನಿಖೆಗೆ ಮಹಾರಾಷ್ಟ್ರ ಪ್ರವೇಶಿಸುವ ಮುನ್ನ ಅಲ್ಲಿನ ಸರ್ಕಾರದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಲಿದೆ.
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮುಂಬೈ ಪೊಲೀಸರು ನಡೆಸಿದ ತನಿಖೆ ತೀವ್ರ ಟೀಕೆಗೆ ಗುರಿಯಾಗಿತ್ತು. ಕೊನೆಗೆ ಸುಪ್ರೀಂಕೋರ್ಟ್ ಮಧ್ಯಪ್ರವೇಶದ ಬಳಿಕ ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು. ಈಗ ನಕಲಿ ಟಿಆರ್ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಸೇರಿದಂತೆ ಮೂರು ಚಾನೆಲ್ಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿಯೂ ದೂರು ದಾಖಲಾಗಿದ್ದು, ಯೋಗಿ ಆದಿತ್ಯನಾಥ್ ಸರ್ಕಾರ ಅದರ ತನಿಖೆಯನ್ನು ಸಿಬಿಐಗೆ ಒಪ್ಪಿಸಿತ್ತು. ಅದರ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ.

ಸುಶಾಂತ್ ಪ್ರಕರಣದಲ್ಲಿ ಬಿಹಾರದಲ್ಲಿ ದಾಖಲಾದ ಪ್ರಕರಣದ ತನಿಖೆಗೆ ಮಹಾರಾಷ್ಟ್ರಕ್ಕೆ ಸಿಬಿಐ ಅಧಿಕಾರಿಗಳು ಬರುವಂತೆ, ಟಿಆರ್ಪಿ ಪ್ರಕರಣದಲ್ಲಿಯೂ ನಡೆಯುವ ಸಾಧ್ಯತೆ ಇದೆ ಎಂಬುದನ್ನು ಗ್ರಹಿಸಿರುವ ಶಿವಸೇನಾ ಸರ್ಕಾರ, ಇದರಲ್ಲಿ ಸಿಬಿಐ ಹಸ್ತಕ್ಷೇಪ ಮಾಡದಂತೆ ತಡೆಯಲು ಈ ನಿರ್ಧಾರ ತೆಗೆದುಕೊಂಡಿದೆ.
ಮಹಾರಾಷ್ಟ್ರದಲ್ಲಿ ತಾನು ದಾಖಲಿಸುವ ಪ್ರತಿ ಪ್ರಕರಣದ ತನಿಖೆಗೂ ಸಿಬಿಐ ಮಹಾರಾಷ್ಟ್ರ ಸರ್ಕಾರದ ಅನುಮತಿ ಪಡೆಯಬೇಕಾಗಲಿದೆ. 1946ರ ದೆಹಲಿ ವಿಶೇಷ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆಕ್ಟ್ನ ಸೆಕ್ಷನ್ 6ರ ಅಡಿ ಮಹಾರಾಷ್ಟ್ರ ಸರ್ಕಾರ ತನ್ನ ಅಧಿಕಾರವನ್ನು ಚಲಾಯಿಸಿದ್ದು, ಅದರ ಅನ್ವಯ ಸರ್ಕಾರದ ಒಪ್ಪಿಗೆ ಇಲ್ಲದೆ ಮಹಾರಾಷ್ಟ್ರದಲ್ಲಿ ತನಿಖೆ ನಡೆಸುವ ಅನುಮತಿಯನ್ನು ಹಿಂದಕ್ಕೆ ಪಡೆದುಕೊಳ್ಳಲಾಗಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications