ಚೊಚ್ಚಲ ಪ್ರಯತ್ನದಲ್ಲೇ ಗೆಲುವಿನ ರುಚಿ ಕಂಡ ಶಿವಸೇನಾದ ಆದಿತ್ಯ ಠಾಕ್ರೆ
ಮುಂಬೈ, ಅಕ್ಟೋಬರ್ 24: ಶಿವಸೇನಾ ಸಂಸ್ಥಾಪಕ ಬಾಳಾ ಸಾಹೇಬ್ ಠಾಕ್ರೆ ಕುಟುಂಬದ ಸದಸ್ಯರೊಬ್ಬರು ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದು ಜಯಿಸಿದ್ದಾರೆ. ಠಾಕ್ರೆ ಅವರ ಮೊಮ್ಮಗ ಆದಿತ್ಯ ಇಂದು ವರ್ಲಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗುವುದು ಖಚಿತವಾಗಿದೆ.
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಈ ಸಮಯದ ಟ್ರೆಂಡ್ ನಂತೆ ಆದಿತ್ಯ 53,728 ಮತ (ಶೇ 71.96) ಪಡೆದಿದ್ದರೆ, ಸಮೀಪದ ಪ್ರತಿಸ್ಪರ್ಧಿ ಎನ್ಸಿಪಿಯ ಸುರೇಶ್ ಮಾನೆ ಅವರು 11037 ಮತ(ಶೇ 14.78) ಗಳನ್ನು ಮಾತ್ರ ಗಳಿಸಿದ್ದಾರೆ.
2010ರಲ್ಲಿ ಯುವ ಸೇನಾದ ಅಧ್ಯಕ್ಷರಾಗಿ ಆಯ್ಕೆಯಾದರು. 2017ರಲ್ಲಿ ಮುಂಬೈ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದರು. 2018ರಿಂದ ಶಿವಸೇನಾ ಮುಖಂಡರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಾಂಬಾ ಸ್ಕಾಟಿಷ್ ಶಾಲೆ, ಸೈಂಟ್ ಕ್ಸೇವಿಯರ್ ಕಾಲೇಜ್, ಕೆಸಿ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ.

ಮಹಾರಾಷ್ಟ್ರದ ಒಟ್ಟು 288 ಕ್ಷೇತ್ರಗಳಲ್ಲಿ ಬಿಜೆಪಿ 150, ಶಿವಸೇನೆ 124 ಮತ್ತು ಇತರ ಸಣ್ಣ ಪುಟ್ಟ ಮೈತ್ರಿಪಕ್ಷಗಳು 14 ಕ್ಷೇತ್ರಗಳಲ್ಲಿ ಕಣಕ್ಕಿಳಿದಿವೆ. ಅಕ್ಟೋಬರ್ 24ರಂದು ಸಂಜೆ ವೇಳೆಗೆ ಅಧಿಕೃತವಾಗಿ ಫಲಿತಾಂಶ ಪ್ರಕಟವಾಗಲಿದೆ. 2014ರಲ್ಲಿ ಬಿಜೆಪಿ ಹಾಗೂ ಶಿವಸೇನೆ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು, 260 ಕ್ಷೇತ್ರಗಳ ಪೈಕಿ ಬಿಜೆಪಿ 122ರಲ್ಲಿ ಗೆಲುವು ಸಾಧಿಸಿತ್ತು. ಸೇನಾ 282 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 63ರಲ್ಲಿ ಜಯ ದಾಖಲಿಸಿತ್ತು.
2014ರಲ್ಲಿ ಸೇನಾದಿಂದ ಸ್ಪರ್ಧಿಸಿದ್ದ ಸುನಿಲ್ ಶಿಂಧೆ ಗೆಲುವು ಸಾಧಿಸಿದ್ದರು. ಲೋಕಸಭೆ ಚುನಾವಣೆಯಲ್ಲಿ ಸೇನಾದ ಅರವಿಂದ್ ಸಾವಂತ್ ಅವರು ಸುಲಭವಾಗಿ ಗೆಲ್ವು ಸಾಧಿಸಿದ್ದರು. 1990ರಿಂದ 2004ರ ತನಕ ಈ ಕ್ಷೇತ್ರದಲ್ಲಿ ಸೇನಾದ ದತ್ತಾ ನಾಲವಡೆ ಗೆಲುವು ಸಾಧಿಸಿದ್ದರು. 2009ರಲ್ಲಿ ಎನ್ಸಿಪಿ ಸಚಿನ್ ಅಹಿರ್ ಜಯ ಕಂಡಿದ್ದರು.












Click it and Unblock the Notifications