ಇಲ್ಲಿ ಮಾತಾಡುವುದಲ್ಲ, ಬನ್ನಿ ಪ್ರಧಾನಿ ಮೋದಿ ಬಳಿ ಹೋಗೋಣ!
ಮುಂಬೈ, ಡಿಸೆಂಬರ್.01: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಆಗಿದ್ದೇ ತಡ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಫುಲ್ ಆಕ್ಟಿವ್ ಆಗಿ ಬಿಟ್ಟಿದ್ದಾರೆ. ಉದ್ದುದ್ದಾ ಭಾಷಣ ಮಾಡುವುದಲ್ಲ. ಇಲ್ಲಿ ನಿಂತು ಮಾತನಾಡಿದರೆ ಏನೂ ಸಿಗುವುದಿಲ್ಲ. ಬನ್ನಿ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿಯೇ ಹೋಗೋಣ ಎಂದು ವಿರೋಧ ಪಕ್ಷದ ನಾಯಕರ ವಿರುದ್ಧ ಗುಡುಗಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹಾರಾಷ್ಟ್ರಕ್ಕೆ ಆರ್ಥಿಕ ನೆರವು ನೀಡಲೇಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಅಕಾಲಿಕ ಮಳೆ ಹಾಗೂ ಪ್ರವಾಹಕ್ಕೆ ಜನರ ಬದುಕು ಬೀದಿಗೆ ಬಂದು ನಿಂತಿದೆ.
ಯುದ್ಧಮುನ್ನ ಬಿಜೆಪಿ ಶಸ್ತ್ರತ್ಯಾಗ: 'ಮಹಾ' ಆಸೆಂಬ್ಲಿಗೆ ಕೈ ಶಾಸಕರೇ ಸ್ಪೀಕರ್!
ರಾಜ್ಯದಲ್ಲಿ ರೈತರು ಬೆಳೆದ ವರ್ಷದ ಬೆಳೆ ವರುಣನ ರೌದ್ರನರ್ತನಕ್ಕೆ ಕೊಚ್ಚಿ ಹೋಗಿದೆ. ಹೊತ್ತಿನ ಊಟಕ್ಕೂ ಜನರು ಪರದಾಡುವಂತಾ ಸ್ಥಿತಿಯಿದೆ. ಸಂಕಷ್ಟದಲ್ಲಿರುವ ರಾಜ್ಯದ ರೈತರ ನೆರವಿಗೆ ಕೇಂದ್ರ ಸರ್ಕಾರವು ಧಾವಿಸಬೇಕು ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ವಿರೋಧ ಪಕ್ಷ ಬಿಜೆಪಿ ವಿರುದ್ಧ ಹರಿ ಹಾಯ್ದಿದ್ದಾರೆ. ಸುಮ್ಮನೆ ಇಲ್ಲಿ ನಿಂತು ಮಾತನಾಡಿದರೆ ಆಗುವುದಿಲ್ಲ. ನಿಮ್ಮದೇ ಪಕ್ಷ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದೆ. ರಾಜ್ಯದಲ್ಲಿರುವ ರೈತರ ಪರಿಸ್ಥಿತಿ ಬಗ್ಗೆ ನಿಮಗೂ ಅರವಿದೆ. ಹಾಗಿದ್ದ ಮೇಲೆ ಯಾಕೆ ತಡ ಮಾಡುತ್ತೀರಿ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಬೇಕಾದ ಅಗತ್ಯ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿಕೊಳ್ಳಿ.
ಮಹಾರಾಷ್ಟ್ರದಲ್ಲಿ ಅಧಿಕಾರ ನಡೆಸುತ್ತಿರುವ ಮೈತ್ರಿ ಸರ್ಕಾರ ರೈತರಿಗಾಗಿ ಯೋಜನೆಗಳನ್ನು ಜಾರಿಗೊಳಿಸುತ್ತದೆ. ರೈತಪರ ಆಡಳಿತ ನಡೆಸಲು ನಾವು ಬದ್ಧರಾಗಿದ್ದೇವೆ. ಆದರೆ, ಇದರ ಜೊತೆಗೆ ಕೇಂದ್ರ ಸರ್ಕಾರವೂ ಕೂಡಾ ಆರ್ಥಿಕವಾಗಿ ಮಹಾರಾಷ್ಟ್ರಕ್ಕೆ ನೆರವು ನೀಡಬೇಕು. ಇದರಿಂದ ರಾಜ್ಯದ ರೈತರಿಗೆ ಅನುಕೂಲವಾಗಲಿದೆ. ಈ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಕೂಡಾ ಕೇಂದ್ರ ನಾಯಕರ ಜೊತೆಗೆ ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಗ್ರಹಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications