ನಟೋರಿಯಸ್ ಹಿನ್ನೆಲೆ: ಏಕನಾಥ ಶಿಂಧೆ ಮೇಲೆ 18 ಕ್ರಿಮಿನಲ್ ಕೇಸು!
ಬೆಂಗಳೂರು, ಜೂ. 30: ಶಿವಸೇನೆಯಲ್ಲಿ ಬಂಡಾಯ ಎಬ್ಬಿಸಿ ಮಹಾರಾಷ್ಟ್ರದ 19ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಮಾಜಿ ಅಟೋ ರಾಜ ಏಕನಾಥ್ ಶಿಂಧೆ ನಟೋರಿಯಸ್ ಕ್ರಿಮಿನಲ್ ಹಿಸ್ಟರಿ ಹೊಂದಿದ್ದಾರೆ. ಸರ್ಕಾರಿ ಕಚೇರಿಗಳಿಗೆ ಬೆಂಕಿ ಇಟ್ಟು ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಉಂಟುಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಕನಾಥ ಶಿಂಧೆ ವಿರುದ್ಧ 18 ಕ್ರಿಮಿನಲ್ ಕೇಸುಗಳು ಬುಕ್ ಅಗಿವೆ!
ಮಹಾಷ್ಟ್ರದ ಹಂಗಾಮಿ ಸಿಎಂ ಏಕನಾಥ್ ಶಿಂಧೆ ವಿರುದ್ಧ ಬರೋಬ್ಬರಿ 18 ಕ್ರಿಮಿನಲ್ ಕೇಸುಗಳು ದಾಖಲಾಗಿವೆ. ಆದ್ರೆ ಒಂದರಲ್ಲೂ ಅವರು ಶಿಕ್ಷೆಗೆ ಗುರಿಯಾಗಿಲ್ಲ. ಒಂದು ಕೇಸಿನಲ್ಲೂ ಅವರು ಮೇಲ್ಮನವಿ ಹೋಗಿಲ್ಲ. ಸ್ವತಃ ಏಕನಾಥ ಶಿಂಧೆ ಚುನಾವಣೆ ವೇಳೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಶಿಂಧೆಯ ಕ್ರಿಮಿನಲ್ ಕೇಸುಗಳ ಸಂಕ್ಷಿಪ್ತ ವಿವರ ಉಲ್ಲೇಖವಾಗಿದೆ. ಬಹುತೇಕ ಕೇಸುಗಳು ಸರ್ಕಾರಿ ಅಧಿಕಾರಿಗಳಿಗೆ ತೊಂದರೆ ಕೊಟ್ಟಿರುವುದು, ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವುಂಟು ಮಾಡಿರುವುದು.
ಉದ್ದವ್ ಠಾಕ್ರೆ ಸರ್ಕಾರದಲ್ಲಿ ಸಚಿವನಾಗಿದ್ದ ಏಕನಾಥ್ ಶಿಂಧೆ ಶಿವಸೇನೆಯ ಬಹುಪಾಲು ಶಾಸಕರನ್ನು ಸೆಳೆದು ಬಂಡಾಯದ ಬಾವುಟ ಏರಿಸಿದ್ದರು. ಇನ್ನೇನು ದೇವೇಂದ್ರ ಫಡ್ನವೀಸ್ ಸಿಎಂ ಆಗುತ್ತಾರೆ ಎಂಬ ಸುದ್ದಿಯ ಬೆನ್ನಲ್ಲೇ ಏಕನಾಥ್ ಶಿಂಧೆ ಸಿಎಂ ಅಭ್ಯರ್ಥಿ ಎಂಬ ಘೋಷಣೆ ಹೊರ ಬಿದ್ದಿದೆ. ಇದರ ಬೆನ್ನಲ್ಲೇ ಏಕನಾಥ ಶಿಂಧೆಯ ಹಿನ್ನೆಲೆಯ ಹುಡುಕಾಟ ಶುರುವಾಗಿದೆ. ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿರುವ ಏಕನಾಥ್ ಶಿಂಧೆ ಬಿಜೆಪಿ ಜತೆ ಸೇರಿ ಹೊಸ ಸರ್ಕಾರ ರಚಿಸಿದ್ದಾರೆ. ಇದೀಗ ಶಿಂಧೆಯ ವ್ಯಕ್ತಿತ್ವ ನಿರೂಪಿಸುವ ಅವರ ಕ್ರಿಮಿನಲ್ ಹಿಸ್ಟರಿ ಕೂಡ ಬಯಲಾಗಿದೆ.

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಏಕನಾಥ:
ಏಕನಾಥ್ ಶಿಂಧೆಯ ಇಬ್ಬರು ಮಕ್ಕಳಾದ ದೀಪೇಶ್ ಶಿಂಧೆ, ಶುಭದ ಶಿಂಧೆ ಮನೆ ಸಮೀಪದ ಕೆರೆಯಲ್ಲಿ ಆಟ ಆಡುವಾಗ ಬೋಟ್ ಮುಗಿಸಿ ಸಾವನ್ನಪ್ಪಿದ್ದರು. ಈ ವೇಳೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಏಕನಾಥ ಶಿಂಧೆ. ಇರುವ ಏಕೈಕ ಪುತ್ರ ಶ್ರೀಕಾಂತ್ ಶಿಂಧೆ ವೃತ್ತಿಯಲ್ಲಿ ವೈದ್ಯ. ಕಳೆದ 2014 ರಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದರು.

ಶಿಂಧೆ ವಿರುದ್ಧ ಹದಿನೆಂಟು ಕೇಸು:
ಮಹಾರಾಷ್ಟ್ರದ ನಿಯೋಜಿತ ಸಿಎಂ ಏಕನಾಥ ಶಿಂಧೆ ವಿರುದ್ಧ ಮೊದಲು ಕೇಸು ದಾಖಲಾಗಿದ್ದು 1993ರಲ್ಲಿ ಥಾಣೆ ನಗರ ಪೊಲೀಸ್ ಠಾಣೆಯಲ್ಲಿ. ಸರ್ಕಾರದ ಆಜ್ಞೆಯನ್ನು ಉಲ್ಲಂಘನೆ ಮಾಡುವುದು. ನಿಷೇಧಾಜ್ಞೆಯಂತಹ ಆದೇಶ ಉಲ್ಲಂಘನೆ ಮಾಡಿ ಸರ್ಕಾರದ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಅರೋಪಕ್ಕೆ ಗುರಿಯಾಗಿದ್ದರು. ಈ ಪ್ರಕರಣದಲ್ಲಿ ಶಿಂಧೆ ಬಂಧನಕ್ಕೆ ಒಳಗಾಗಿದ್ದರು. ಇಲ್ಲಿಂದ ಆರಂಭವಾದ ಕ್ರಿಮಿನಲ್ ಕೇಸುಗಳು 2011 ರವರೆಗೂ ಬಿದ್ದಿವೆ.

ಕೇಸ್ ನಂ 02
ಕೇಸ್ ನಂ 02: 2000 ವರ್ಷದಲ್ಲಿ ಥಾಣೆಯ ವಾಗ್ಲೇ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ಶಿಂಧೆ ವಿರುದ್ಧ ದಾಖಲಾಗಿತ್ತು. ಅದೇ ರೀತಿ 2001 ಮತ್ತು 2004 ರಲ್ಲಿ ಕ್ರಮವಾಗಿ ತಲಾ ಒಂದು ಕೇಸು ಬಿದ್ದಿತ್ತು. ಶಾಂತಿ ಕದಡುವ ಪ್ರಯತ್ನ ಮಾಡಿದ ಆರೋಪದಡಿ ಶಿಂಧೆ ವಿರುದ್ಧ ಕೇಸುಗಳು ದಾಖಲಾಗಿದ್ದವು. ಆದ್ರೆ ಈ ಯಾವ ಕೇಸಿನಲ್ಲಿ ಶಿಂಧೆ ಶಿಕ್ಷೆಗೆ ಗುರಿಯಾಗಿಲ್ಲ.

ಹದಿನೆಂಟು ಕ್ರಿಮಿನಲ್ ಕೇಸು
2005 ರಲ್ಲಿ ಏಕನಾಥ್ ಶಿಂಧೆ ವಿರುದ್ಧ ಸಾರ್ವಜನಿಕ ಆಸ್ತಿಗೆ ಹಾನಿಯುಂಟು ಮಾಡಿದ ಕೇಸು ಜಡಿಯಲಾಗಿತ್ತು. ಐಪಿಸಿ ಸೆಕ್ಷನ್ 143, 147, 149, 427 ಮತ್ತಿತರ ಸೆಕ್ಷನ್ ಅಡಿ ಕೇಸು ದಾಖಲಾಗಿತ್ತು. ಇನ್ನು 2005 ರಲ್ಲಿ ಒಟ್ಟು ನಾಲ್ಕು ಕೇಸು ಏಕನಾಥ ಶಿಂಧೆ ಮೇಲೆ ದಾಖಲಾಗಿತ್ತು. ಶಿಂಧೆ ವಿರುದ್ಧ ದಾಖಲಾಗಿರುವ ಬಹುತೇಕ ಪ್ರಕರಣಗಳು ಶಾಂತಿ ಕದಡಿದ, ನಿಷೇಧಾಜ್ಞೆ ಸರ್ಕಾರದ ಅದೇಶ ಉಲ್ಲಂಘನೆ, ಸಾರ್ವಜನಿಕ ಆಸ್ತಿಗೆ ನಷ್ಟವುಂಟು ಮಾಡಿದ ಕೇಸಗಳೇ ಆಗಿವೆ. ಒಟ್ಟಾರೆ 2011 ರ ವೇಳೆಗೆ ಹದಿನೆಂಟು ಕ್ರಿಮಿನಲ್ ಕೇಸುಗಳು ದಾಖಲಾಗಿದ್ದವು. ಯಾವುದರಲ್ಲೂ ಶಿಕ್ಷೆಗೆ ಗುರಿಯಾಗಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.
Recommended Video
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications